AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​​ಗೆ ಸರ್​ಪ್ರೈಸ್​ ನೀಡಿದ್ದ ಪುನೀತ್​; ಶಾಕ್​ಗೆ ಒಳಗಾದ ಅಭಿಮಾನಿಗಳನ್ನು ಅಪ್ಪು ಸಮಾಧಾನ ಮಾಡಿದ ರೀತಿ ನೋಡಿ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಸಂತೋಷ್​​​ ಆನಂದ್​ರಾಮ್​​ ನಿರ್ದೇಶನ ಮಾಡಿದ್ದ ‘ಯುವರತ್ನ’ ಸಿನಿಮಾ ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ರಿಲೀಸ್​ ಆಗಿತ್ತು. ಈ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗಿತ್ತು.

ಫ್ಯಾನ್ಸ್​​ಗೆ ಸರ್​ಪ್ರೈಸ್​ ನೀಡಿದ್ದ ಪುನೀತ್​; ಶಾಕ್​ಗೆ ಒಳಗಾದ ಅಭಿಮಾನಿಗಳನ್ನು ಅಪ್ಪು ಸಮಾಧಾನ ಮಾಡಿದ ರೀತಿ ನೋಡಿ
ಸರ್​ಪ್ರೈಸ್ ನೀಡಿದ್ದ ಪುನೀತ್
TV9 Web
| Edited By: |

Updated on: Nov 01, 2021 | 1:24 PM

Share

ಪುನೀತ್​ ರಾಜ್​ಕುಮಾರ್​ ಚಿನ್ನದಂತ ಮನುಷ್ಯ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಪುನೀತ್ ಗುಣ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳಿಗೂ ಇಷ್ಟವಾಗುತ್ತದೆ. ಈ ಕಾರಣಕ್ಕೆ ಅಪ್ಪು​ ಮೃತಪಟ್ಟಾಗ ಅವರನ್ನು ನೋಡೋಕೆ ಲಕ್ಷಾಂತರ ಅಭಿಮಾನಿಗಳು ಬಂದು ಅಂತಿಮ ದರ್ಶನ ಪಡೆದಿದ್ದರು. ಪುನೀತ್​ ಮೃತಪಟ್ಟ ನಂತರ ಅವರ ಹಳೆಯ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿದೆ. ಪುನೀತ್​ ಸರಳತೆ ಸಾರುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆ ಪೈಕಿ ‘ಯುವರತ್ನ’ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಶೂಟ್​ ಮಾಡಿದ್ದ ವಿಡಿಯೋ ಕೂಡ ಒಂದು​. ಅಪ್ಪುನನ್ನು ನೋಡಬೇಕು ಎಂದು ಅನೇಕ ವರ್ಷಗಳು ಕಾದುಕೂತ ಅಭಿಮಾನಿಗಳಿಗೆ ಪುನೀತ್​ ದರ್ಶನ ನೀಡಿದ್ದರು. ಇದನ್ನು ಅಭಿಮಾನಿಗಳಿಗೆ ನಂಬಬೇಕೋ ಅಥವಾ ಬಿಡಬೇಕೋ ಎಂಬುದು ಗೊತ್ತಾಗಿರಲಿಲ್ಲ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಸಂತೋಷ್​​​ ಆನಂದ್​ರಾಮ್​​ ನಿರ್ದೇಶನ ಮಾಡಿದ್ದ ‘ಯುವರತ್ನ’ ಸಿನಿಮಾ ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ರಿಲೀಸ್​ ಆಗಿತ್ತು. ಈ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗಿತ್ತು. ಇಡೀ ಚಿತ್ರತಂಡ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ಮಾಡಿತ್ತು. ಇದರ ಜತೆಗೆ ಪುನೀತ್​ ಸಾಕಷ್ಟು ಅಭಿಮಾನಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಅದೂ ಸರ್​ಪ್ರೈಸ್​ ಆಗುವ ರೀತಿಯಲ್ಲಿ.

ಈ ವಿಡಿಯೋವನ್ನು ಹೊಂಬಾಳೆ ಫಿಲ್ಮ್ಸ್​ ಮಾರ್ಚ್​ 21ರಂದು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಪುನೀತ್ ಎಂದರೆ ಯಾಕೆ ಇಷ್ಟ ಮತ್ತು ಎಷ್ಟು ಇಷ್ಟ ಎಂಬುದನ್ನು ಅಭಿಮಾನಿಗಳು ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ, ಅವರನ್ನು ನೋಡಬೇಕು ಎಂದು ಎಷ್ಟು ವರ್ಷ ಕಾದಿದ್ದೆ ಎಂಬುದನ್ನೂ ವಿವರಿಸುತ್ತಿರುವಾಗಲೆ ಪುನೀತ್​ ಬರುತ್ತಾರೆ. ಈ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡುತ್ತಾರೆ. ಪುನೀತ್​ ಅವರನ್ನು ನೋಡಿ ಅನೇಕರು ಅಚ್ಚರಿಗೆ ಒಳಗಾಗುತ್ತಾರೆ. ಈ ವೇಳೆ ಪುನೀತ್ ಅವರೇ ಸಮಾಧಾನ ಮಾಡುವ ಕೆಲಸವನ್ನೂ ಮಾಡುತ್ತಾರೆ. ಅಪ್ಪು ಮರಣಾನಂತರ ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಲೋಹಿತಾಶ್ವ ಎಂದರೆ ಅಲ್ಪಾಯುಶಿ; ಪುನೀತ್​ ಹೆಸರು ಬದಲಾವಣೆಗೆ ಕಾರಣವಾಗಿತ್ತು ಈ ವಿಚಾರ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ