AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾನ್ಸ್​​ಗೆ ಸರ್​ಪ್ರೈಸ್​ ನೀಡಿದ್ದ ಪುನೀತ್​; ಶಾಕ್​ಗೆ ಒಳಗಾದ ಅಭಿಮಾನಿಗಳನ್ನು ಅಪ್ಪು ಸಮಾಧಾನ ಮಾಡಿದ ರೀತಿ ನೋಡಿ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಸಂತೋಷ್​​​ ಆನಂದ್​ರಾಮ್​​ ನಿರ್ದೇಶನ ಮಾಡಿದ್ದ ‘ಯುವರತ್ನ’ ಸಿನಿಮಾ ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ರಿಲೀಸ್​ ಆಗಿತ್ತು. ಈ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗಿತ್ತು.

ಫ್ಯಾನ್ಸ್​​ಗೆ ಸರ್​ಪ್ರೈಸ್​ ನೀಡಿದ್ದ ಪುನೀತ್​; ಶಾಕ್​ಗೆ ಒಳಗಾದ ಅಭಿಮಾನಿಗಳನ್ನು ಅಪ್ಪು ಸಮಾಧಾನ ಮಾಡಿದ ರೀತಿ ನೋಡಿ
ಸರ್​ಪ್ರೈಸ್ ನೀಡಿದ್ದ ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 01, 2021 | 1:24 PM

Share

ಪುನೀತ್​ ರಾಜ್​ಕುಮಾರ್​ ಚಿನ್ನದಂತ ಮನುಷ್ಯ ಎಂಬುದು ಸಾಕಷ್ಟು ಬಾರಿ ಸಾಬೀತಾಗಿದೆ. ಪುನೀತ್ ಗುಣ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದ ವ್ಯಕ್ತಿಗಳಿಗೂ ಇಷ್ಟವಾಗುತ್ತದೆ. ಈ ಕಾರಣಕ್ಕೆ ಅಪ್ಪು​ ಮೃತಪಟ್ಟಾಗ ಅವರನ್ನು ನೋಡೋಕೆ ಲಕ್ಷಾಂತರ ಅಭಿಮಾನಿಗಳು ಬಂದು ಅಂತಿಮ ದರ್ಶನ ಪಡೆದಿದ್ದರು. ಪುನೀತ್​ ಮೃತಪಟ್ಟ ನಂತರ ಅವರ ಹಳೆಯ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿದೆ. ಪುನೀತ್​ ಸರಳತೆ ಸಾರುವ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆ ಪೈಕಿ ‘ಯುವರತ್ನ’ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ಶೂಟ್​ ಮಾಡಿದ್ದ ವಿಡಿಯೋ ಕೂಡ ಒಂದು​. ಅಪ್ಪುನನ್ನು ನೋಡಬೇಕು ಎಂದು ಅನೇಕ ವರ್ಷಗಳು ಕಾದುಕೂತ ಅಭಿಮಾನಿಗಳಿಗೆ ಪುನೀತ್​ ದರ್ಶನ ನೀಡಿದ್ದರು. ಇದನ್ನು ಅಭಿಮಾನಿಗಳಿಗೆ ನಂಬಬೇಕೋ ಅಥವಾ ಬಿಡಬೇಕೋ ಎಂಬುದು ಗೊತ್ತಾಗಿರಲಿಲ್ಲ.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಸಂತೋಷ್​​​ ಆನಂದ್​ರಾಮ್​​ ನಿರ್ದೇಶನ ಮಾಡಿದ್ದ ‘ಯುವರತ್ನ’ ಸಿನಿಮಾ ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ರಿಲೀಸ್​ ಆಗಿತ್ತು. ಈ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗಿತ್ತು. ಇಡೀ ಚಿತ್ರತಂಡ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ಮಾಡಿತ್ತು. ಇದರ ಜತೆಗೆ ಪುನೀತ್​ ಸಾಕಷ್ಟು ಅಭಿಮಾನಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಅದೂ ಸರ್​ಪ್ರೈಸ್​ ಆಗುವ ರೀತಿಯಲ್ಲಿ.

ಈ ವಿಡಿಯೋವನ್ನು ಹೊಂಬಾಳೆ ಫಿಲ್ಮ್ಸ್​ ಮಾರ್ಚ್​ 21ರಂದು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಪುನೀತ್ ಎಂದರೆ ಯಾಕೆ ಇಷ್ಟ ಮತ್ತು ಎಷ್ಟು ಇಷ್ಟ ಎಂಬುದನ್ನು ಅಭಿಮಾನಿಗಳು ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ, ಅವರನ್ನು ನೋಡಬೇಕು ಎಂದು ಎಷ್ಟು ವರ್ಷ ಕಾದಿದ್ದೆ ಎಂಬುದನ್ನೂ ವಿವರಿಸುತ್ತಿರುವಾಗಲೆ ಪುನೀತ್​ ಬರುತ್ತಾರೆ. ಈ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡುತ್ತಾರೆ. ಪುನೀತ್​ ಅವರನ್ನು ನೋಡಿ ಅನೇಕರು ಅಚ್ಚರಿಗೆ ಒಳಗಾಗುತ್ತಾರೆ. ಈ ವೇಳೆ ಪುನೀತ್ ಅವರೇ ಸಮಾಧಾನ ಮಾಡುವ ಕೆಲಸವನ್ನೂ ಮಾಡುತ್ತಾರೆ. ಅಪ್ಪು ಮರಣಾನಂತರ ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಲೋಹಿತಾಶ್ವ ಎಂದರೆ ಅಲ್ಪಾಯುಶಿ; ಪುನೀತ್​ ಹೆಸರು ಬದಲಾವಣೆಗೆ ಕಾರಣವಾಗಿತ್ತು ಈ ವಿಚಾರ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು