AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ರಾಜ್​ಕುಮಾರ್​​ಗೆ ನಾನ್​ವೆಜ್​​ ಎಂದರೆ ಅದೆಷ್ಟು ಪ್ರೀತಿಯಾಗಿತ್ತು; ಇಲ್ಲಿದೆ ವಿಡಿಯೋ

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮವನ್ನು ಪುನೀತ್​ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಅವರ ನಿರೂಪಣೆ ಸಾಕಷ್ಟು ಜನರಿಗೆ ಇಷ್ಟವಾಗಿತ್ತು.

ಪುನೀತ್ ರಾಜ್​ಕುಮಾರ್​​ಗೆ ನಾನ್​ವೆಜ್​​ ಎಂದರೆ ಅದೆಷ್ಟು ಪ್ರೀತಿಯಾಗಿತ್ತು; ಇಲ್ಲಿದೆ ವಿಡಿಯೋ
ಪುನೀತ್​
TV9 Web
| Edited By: |

Updated on: Nov 01, 2021 | 3:55 PM

Share

ಪುನೀತ್​ ರಾಜ್​ಕುಮಾರ್​ ಫಿಟ್​ನೆಸ್​ಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಿದ್ದರು. ನಿತ್ಯ ಅವರು ಜಿಮ್​ನಲ್ಲಿ ಬೆವರು ಹರಿಸುತ್ತಿದ್ದರು. ಸದಾ ಫಿಟ್​ ಆಗಿರೋಕೆ ಅವರದ್ದು ಮೊದಲ ಆದ್ಯತೆ. ಇಷ್ಟಾದರೂ ಪುನೀತ್ ರಾಜ್​ಕುಮಾರ್​ ಬದುಕುಳಿಯಲಿಲ್ಲ. ಹೃದಯಾಘಾತಕ್ಕೆ ಒಳಗಾದ ಸ್ವಲ್ಪ ಹೊತ್ತಿನ್ನಲ್ಲೇ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಆದರೂ ಅನೇಕರ ಬಳಿ ಈ ವಿಚಾರವನ್ನು ನಂಬೋಕೆ ಆಗುತ್ತಿಲ್ಲ. ಪುನೀತ್​ ಫಿಟ್​ನೆಸ್​ಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಿದ್ದರೋ ಅಷ್ಟೇ ಪ್ರಾಮುಖ್ಯತೆಯನ್ನು ಆಹಾರಕ್ಕೂ ಕೊಡುತ್ತಿದ್ದರು. ಅವರಿಗೆ ನಾನ್​ವೆಜ್​ ಎಂದರೆ ಪಂಚಪ್ರಾಣ ಈ ಬಗ್ಗೆ ಶೋನಲ್ಲಿ ಅವರು ಹೇಳಿಕೊಂಡಿದ್ದಾರೆ.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮವನ್ನು ಪುನೀತ್​ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಅವರ ನಿರೂಪಣೆ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರು ಬಂದ ಸ್ಪರ್ಧಿಗಳ ಜತೆ ಆಹಾರದ ಬಗ್ಗೆ ಮಾತನಾಡಿದ್ದರು. ಇದನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಕಡೆಗಳಿಂದ ಸ್ಪರ್ಧಿಗಳು ಆಗಮಿಸುತ್ತಿದ್ದರು. ಪ್ರತಿ ಜಿಲ್ಲೆ, ತಾಲೂಕಿನಲ್ಲೂ ಅಲ್ಲಿಯದ್ದೇ ಆದ ಆಹಾರ ಸಂಸ್ಕೃತಿ ಇರುತ್ತದೆ. ಮಂಗಳೂರು ಕಡೆ ತೆರಳಿದರೆ ಕಡಲ ಜೀವಿಗಳಿಂದ ಮಾಡಿದ ಆಹಾರ ಅದ್ಭುತವಾಗಿ ಸಿಗುತ್ತದೆ. ಈ ಎಲ್ಲಾ ವಿಚಾರಗಳನ್ನು ಪುನೀತ್​ ಈ ಶೋನಲ್ಲಿ ಮಾತನಾಡಿದ್ದರು. ಅಲ್ಲದೆ, ಗೊತ್ತಿಲ್ಲದ ವಿಚಾರಗಳನ್ನು ಅವರು ಕೇಳಿ ತಿಳಿದುಕೊಳ್ಳುತ್ತಿದ್ದರು.

ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಸಂತೋಷ್​​​ ಆನಂದ್​ರಾಮ್​​ ನಿರ್ದೇಶನ ಮಾಡಿದ್ದ ‘ಯುವರತ್ನ’ ಸಿನಿಮಾ ಕೊವಿಡ್​ ಎರಡನೇ ಅಲೆ ಕಾಣಿಸಿಕೊಳ್ಳುವುದಕ್ಕೂ ಮೊದಲು ರಿಲೀಸ್​ ಆಗಿತ್ತು. ಈ ಸಿನಿಮಾಗೆ ದೊಡ್ಡ ಮಟ್ಟದ ಪ್ರಚಾರ ನೀಡಲಾಗಿತ್ತು. ಇಡೀ ಚಿತ್ರತಂಡ ರಾಜ್ಯಾದ್ಯಂತ ಸಂಚರಿಸಿ ಪ್ರಚಾರ ಮಾಡಿತ್ತು. ಇದರ ಜತೆಗೆ ಪುನೀತ್​ ಸಾಕಷ್ಟು ಅಭಿಮಾನಿಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದರು. ಅದೂ ಸರ್​ಪ್ರೈಸ್​ ಆಗುವ ರೀತಿಯಲ್ಲಿ.

ಈ ವಿಡಿಯೋವನ್ನು ಹೊಂಬಾಳೆ ಫಿಲ್ಮ್ಸ್​ ಮಾರ್ಚ್​ 21ರಂದು ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಪುನೀತ್ ಎಂದರೆ ಯಾಕೆ ಇಷ್ಟ ಮತ್ತು ಎಷ್ಟು ಇಷ್ಟ ಎಂಬುದನ್ನು ಅಭಿಮಾನಿಗಳು ಹೇಳಿಕೊಳ್ಳುತ್ತಿರುತ್ತಾರೆ. ಅಲ್ಲದೆ, ಅವರನ್ನು ನೋಡಬೇಕು ಎಂದು ಎಷ್ಟು ವರ್ಷ ಕಾದಿದ್ದೆ ಎಂಬುದನ್ನೂ ವಿವರಿಸುತ್ತಿರುವಾಗಲೆ ಪುನೀತ್​ ಬರುತ್ತಾರೆ. ಈ ಮೂಲಕ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡುತ್ತಾರೆ. ಪುನೀತ್​ ಅವರನ್ನು ನೋಡಿ ಅನೇಕರು ಅಚ್ಚರಿಗೆ ಒಳಗಾಗುತ್ತಾರೆ. ಈ ವೇಳೆ ಪುನೀತ್ ಅವರೇ ಸಮಾಧಾನ ಮಾಡುವ ಕೆಲಸವನ್ನೂ ಮಾಡುತ್ತಾರೆ. ಅಪ್ಪು ಮರಣಾನಂತರ ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಪುನೀತ್​ ಅವರ 2 ಕಣ್ಣನ್ನು 4 ಜನರಿಗೆ ಜೋಡಿಸಿದ್ದು ಹೇಗೆ? ವೈದ್ಯರು ತೆರೆದಿಟ್ಟ ಅಚ್ಚರಿ ಮಾಹಿತಿ ಇಲ್ಲಿದೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?