AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಮ್​ ಬ್ಯಾನರ್​​ನಲ್ಲಿ​ ನಟಿಸಲಿದ್ದಾರೆ ಪುನೀತ್​? ಪಿಆರ್​ಕೆ ನಿರ್ಮಾಣದ ಸಿನಿಮಾಗೆ ನಿರ್ದೇಶಕ ಯಾರು?

ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಮೂಡಿ ಬರುವ ಚಿತ್ರದಲ್ಲಿ ಪುನೀತ್​ ನಟಿಸಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಅಷ್ಟೇ ಅಲ್ಲ, ಪುನೀತ್​ ಕೂಡ ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು.

ಹೋಮ್​ ಬ್ಯಾನರ್​​ನಲ್ಲಿ​ ನಟಿಸಲಿದ್ದಾರೆ ಪುನೀತ್​? ಪಿಆರ್​ಕೆ ನಿರ್ಮಾಣದ ಸಿನಿಮಾಗೆ ನಿರ್ದೇಶಕ ಯಾರು?
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on:Oct 29, 2021 | 5:26 PM

Share

ಪುನೀತ್​ ರಾಜ್​ಕುಮಾರ್​ ಅವರು ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿ ಕೆಲವು ವರ್ಷಗಳು ಕಳೆದಿವೆ. ಈ ಬ್ಯಾನರ್​ ಅಡಿಯಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಿದ್ದಾರೆ​. ಸಾಕಷ್ಟು ಸಿನಿಮಾಗಳನ್ನು ಪಿಆರ್​ಕೆ ಬ್ಯಾನರ್​ ನಿರ್ಮಾಣ ಮಾಡಿದೆ. ಆದರೆ, ಈವರೆಗೆ ಅವರು ತಮ್ಮದೇ ಬ್ಯಾನರ್​ ಸಿನಿಮಾದಲ್ಲಿ ನಟಿಸಿಲ್ಲ. ಈಗ ಇದಕ್ಕೆ ಕಾಲ ಕೂಡಿ ಬಂದಿದೆ. ಅವರು ನಟಿಸುತ್ತಿರುವ ಮುಂದಿನ ಚಿತ್ರಕ್ಕೆ ನಿರ್ದೇಶಕರು ಫೈನಲ್​ ಆಗಿದ್ದು, ಪಿಆರ್​ಕೆ ಇದರ ನಿರ್ಮಾಣದ ಜವಾಬ್ದಾರಿ ಹೊತ್ತುಕೊಳ್ಳಲಿದೆ ಎನ್ನಲಾಗುತ್ತಿದೆ.

ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಮೂಡಿ ಬರುವ ಚಿತ್ರದಲ್ಲಿ ಪುನೀತ್​ ನಟಿಸಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಅಷ್ಟೇ ಅಲ್ಲ, ಪುನೀತ್​ ಕೂಡ ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಅದು ಈವರೆಗೆ ಸಾಧ್ಯವಾಗಿರಲಿಲ್ಲ. ಈಗ ಈ ಕನಸು ನನಸಾಗುವ ಕಾಲ ಸನಿಹವಾಗಿದೆ ಎನ್ನುವ ಮಾತು ಗಾಂಧಿನಗರದ ಅಂಗಳದಲ್ಲಿ ಕೇಳಿ ಬರುತ್ತಿದೆ.

ಪುನೀತ್​ ಸದ್ಯ ‘ಜೇಮ್ಸ್​’ ಮತ್ತು ‘ದ್ವಿತ್ವ’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗುತ್ತಿವೆ. ಇದಾದ ನಂತರ ಪುನೀತ್​ ಅವರು ಜೇಕಬ್‌ ವರ್ಗೀಸ್‌  ಜತೆ ಮತ್ತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ‘ಸವಾರಿ’, ‘ಪೃಥ್ವಿ’ ಮೊದಲಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಅವರಿಗೆ ಇದೆ. ಈಗ ಪುನೀತ್​ ಜತೆ ಜೇಕಬ್​ ಕೈ ಜೋಡಿಸುತ್ತಿದ್ದಾರೆ ಎನ್ನುತ್ತಿವೆ ಮೂಲಗಳು.

‘ಪೃಥ್ವಿ’ ಸಿನಿಮಾದಲ್ಲಿ ಪುನೀತ್​ ಹಾಗೂ ಜೇಕಬ್​ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾದಲ್ಲಿ ಐಎಎಸ್​ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇದೇ ರೀತಿಯ ಕಥೆಯನ್ನು ಜೇಕಬ್​ ಹೆಣೆದಿದ್ದಾರೆ. ಪುನೀತ್​ ಚಿತ್ರಕ್ಕೆ ಹೀರೋ. ಪಿಎಆರ್​ಕೆ ಬ್ಯಾನರ್​ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ.

ಇದನ್ನೂ ಓದಿ: ‘ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್’; ‘ಜೇಮ್ಸ್​’ ಚಿತ್ರದ ಪುನೀತ್ ಪವರ್​ಫುಲ್​​ ಲುಕ್​ ಅನಾವರಣ

ದೊಡ್ಮನೆ ಮಗಳ ಚಿತ್ರ ನೋಡಿ ಅಣ್ಣಾವ್ರ ಮಕ್ಕಳು ಹೇಳಿದ್ದೇನು? ಒಂದೇ ಫ್ರೇಮ್​ನಲ್ಲಿ ಶಿವಣ್ಣ, ರಾಘಣ್ಣ, ಪುನೀತ್​

Published On - 4:23 pm, Mon, 18 October 21

Follow Us
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​