AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ

ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on:Jun 05, 2021 | 9:31 PM

Share

ಕೊವಿಡ್​ ಎರಡನೇ ಅಲೆಯ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಸಾಕಷ್ಟು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಚಿತ್ರರಂಗದ ಸಾಕಷ್ಟು ಮಂದಿ ಕೆಲಸ ಇಲ್ಲದೆ ಕಷ್ಟಕ್ಕೆ ಒಳಗಾಗಿದ್ದಾರೆ. ಇವರಿಗೆ ಸಹಾಯ ಮಾಡೋಕೆ ಸಾಕಷ್ಟು ಮಂದಿ ಮುಂದೆ ಬಂದಿದ್ದಾರೆ. ಈಗ ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಇಂದು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಸಂಕಷ್ಟದಲ್ಲಿರುವ ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಲ್ಲುತ್ತಿದ್ದೇನೆ. 10 ಲಕ್ಷ ರೂಪಾಯಿ ಹಣದಲ್ಲಿ ಸಿನಿಮಾ ಇಂಡಸ್ಟ್ರಿಯ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿತರಿಸಲು ಸೂಚಿಸಿದ್ದೇನೆ ಎಂದು ಪುನೀತ್​ ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಕ್ಷ ಸಾರಾಗೋವಿಂದ್ ಹಾಗೂ ಕಾರ್ಮಿಕ ಒಕ್ಕೂಟದ ಕಾರ್ಯದರ್ಶಿ ರವಿಂದ್ರನಾಥ್ ಅವರು ಪುನೀತ್​ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದ್ದಾರೆ.

‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಇದನ್ನೂ ಓದಿ: ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Published On - 8:52 pm, Sat, 5 June 21

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!