AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ

ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತ ಪುನೀತ್ ರಾಜ್​ಕುಮಾರ್; 10 ಲಕ್ಷ ಪರಿಹಾರ ಘೋಷಣೆ
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on:Jun 05, 2021 | 9:31 PM

Share

ಕೊವಿಡ್​ ಎರಡನೇ ಅಲೆಯ ನಿಯಂತ್ರಣಕ್ಕೆ ಹೇರಿರುವ ಲಾಕ್​ಡೌನ್​ನಿಂದ ಸಾಕಷ್ಟು ಮಂದಿ ತೊಂದರೆ ಅನುಭವಿಸುತ್ತಿದ್ದಾರೆ. ಚಿತ್ರರಂಗದ ಸಾಕಷ್ಟು ಮಂದಿ ಕೆಲಸ ಇಲ್ಲದೆ ಕಷ್ಟಕ್ಕೆ ಒಳಗಾಗಿದ್ದಾರೆ. ಇವರಿಗೆ ಸಹಾಯ ಮಾಡೋಕೆ ಸಾಕಷ್ಟು ಮಂದಿ ಮುಂದೆ ಬಂದಿದ್ದಾರೆ. ಈಗ ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಕೂಡ ಸಂಕಷ್ಟದಲ್ಲಿರುವ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಂತಿದ್ದು, ಸಿನಿಮಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೀಡುವ ಘೋಷಣೆ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಇಂದು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಸಂಕಷ್ಟದಲ್ಲಿರುವ ‌ ಸಿನಿಮಾ‌ ಮಂದಿ ಸಹಾಯಕ್ಕೆ ನಿಲ್ಲುತ್ತಿದ್ದೇನೆ. 10 ಲಕ್ಷ ರೂಪಾಯಿ ಹಣದಲ್ಲಿ ಸಿನಿಮಾ ಇಂಡಸ್ಟ್ರಿಯ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವಿತರಿಸಲು ಸೂಚಿಸಿದ್ದೇನೆ ಎಂದು ಪುನೀತ್​ ಹೇಳಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಕ್ಷ ಸಾರಾಗೋವಿಂದ್ ಹಾಗೂ ಕಾರ್ಮಿಕ ಒಕ್ಕೂಟದ ಕಾರ್ಯದರ್ಶಿ ರವಿಂದ್ರನಾಥ್ ಅವರು ಪುನೀತ್​ ಸಹಾಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ಜೋರಾಗಿದೆ. ಇದನ್ನು ನಿಯಂತ್ರಿಸೋಕೆ ಸರ್ಕಾರ ಸಾಕಷ್ಟು ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ, ಕೊವಿಡ್​ ಲಸಿಕೆ ಪಡೆಯುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿದೆ. ಈ ಮಧ್ಯೆ, ಕೊವಿಡ್​ ಬಂದರೆ ಭಯ ಪಡುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ಈ ಬಗ್ಗೆ ಭಯ ಬೇಡ ಎಂದು ಪುನೀತ್​ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡಿದ್ದಾರೆ.

‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದಾರೆ.

ಇದನ್ನೂ ಓದಿ: ನನಗಾಗಿ ರಾಜಕುಮಾರ ಸಿನಿಮಾ ಟೈಟಲ್ ಬಿಟ್ಟುಕೊಟ್ಟಿದ್ರು; ನಿರ್ಮಾಪಕ ರಾಮು ನಿಧನ ಸುದ್ದಿ ಕೇಳಿ ಭಾವುಕರಾದ ಪುನೀತ್​  

Published On - 8:52 pm, Sat, 5 June 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ