ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ
ಪುನೀತ್​ ರಾಜ್​ಕುಮಾರ್​
Follow us
|

Updated on: Apr 08, 2021 | 5:50 PM

ದಕ್ಷಿಣ ಭಾರತದ ನಟ-ನಟಿಯರು ಬೇರೆ ಭಾಷೆ ಸಿನಿಮಾಗಳಿಗೆ ಹೋಗಿ ನಟಿಸೋದು ಇದೇ ಮೊದಲೇನೆಲ್ಲ. ಕನ್ನಡದ ಅನೇಕ ನಟ-ನಟಿಯರು ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ತಮ್ಮ ಛಾಪು ಮೂಡಿಸಿ ಬಂದಿದ್ದಾರೆ. ಕನ್ನಡದಲ್ಲಿ ಫ್ಯಾಮಿಲಿ ಆಡಿಯನ್ಸ್​ನ ಮೆಚ್ಚಿನ ನಾಯಕ ಪುನೀತ್​ ರಾಜ್​ಕುಮಾರ್​ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸೋದು ಯಾವಾಗ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಪುನೀತ್ ರಾಜ್​ಕುಮಾರ್​ ಅವರೇ​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪುನೀತ್​, ಒಂದೊಮ್ಮೆ ಮುಂದಿನ ದಿನಗಳಲ್ಲಿ ಪ್ಯಾನ್​ ಇಂಡಿಯಾ ಅಥವಾ ಬಾಲಿವುಡ್​ನಿಂದ ಆಫರ್​ ಸಿಕ್ಕರೆ ಖಂಡಿತವಾಗಿಯೂ ನಟಿಸುತ್ತೇನೆ ಎಂದಿದ್ದಾರೆ.

ಬೇರೇ ಭಾಷೆಗಳಿಂದ ಬರುವ ಪಾತ್ರ ಹೇಗಿರಬೇಕು ಎನ್ನುವ ಬಗ್ಗೆ ಮಾತನಾಡಿರುವ ಪುನೀತ್​, ಲೀಡ್​ ರೋಲ್​ನಲ್ಲೇ ನಟಿಸಬೇಕು ಎಂದೇನೂ ಇಲ್ಲ. ಪಾತ್ರ ತೂಕದ್ದಾಗಿದ್ದರೆ ಸಾಕು ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಾತ್ರಕ್ಕೆ ಹೆಚ್ಚು ಒತ್ತು ಕೊಡುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಚಿತ್ರಮಂದಿರದಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡುತ್ತಿದೆ. ಇದರಿಂದ ‘ಯುವರತ್ನ’ ಸಿನಿಮಾ ರಿಲೀಸ್ ಆದ ಎಂಟೇ ದಿನಕ್ಕೆ ಒಟಿಟಿಗೆ ಲಗ್ಗೆ ಇಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

 Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ