AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ
ಪುನೀತ್​ ರಾಜ್​ಕುಮಾರ್​
Follow us
ರಾಜೇಶ್ ದುಗ್ಗುಮನೆ
|

Updated on: Apr 08, 2021 | 5:50 PM

ದಕ್ಷಿಣ ಭಾರತದ ನಟ-ನಟಿಯರು ಬೇರೆ ಭಾಷೆ ಸಿನಿಮಾಗಳಿಗೆ ಹೋಗಿ ನಟಿಸೋದು ಇದೇ ಮೊದಲೇನೆಲ್ಲ. ಕನ್ನಡದ ಅನೇಕ ನಟ-ನಟಿಯರು ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ತಮ್ಮ ಛಾಪು ಮೂಡಿಸಿ ಬಂದಿದ್ದಾರೆ. ಕನ್ನಡದಲ್ಲಿ ಫ್ಯಾಮಿಲಿ ಆಡಿಯನ್ಸ್​ನ ಮೆಚ್ಚಿನ ನಾಯಕ ಪುನೀತ್​ ರಾಜ್​ಕುಮಾರ್​ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸೋದು ಯಾವಾಗ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಪುನೀತ್ ರಾಜ್​ಕುಮಾರ್​ ಅವರೇ​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪುನೀತ್​, ಒಂದೊಮ್ಮೆ ಮುಂದಿನ ದಿನಗಳಲ್ಲಿ ಪ್ಯಾನ್​ ಇಂಡಿಯಾ ಅಥವಾ ಬಾಲಿವುಡ್​ನಿಂದ ಆಫರ್​ ಸಿಕ್ಕರೆ ಖಂಡಿತವಾಗಿಯೂ ನಟಿಸುತ್ತೇನೆ ಎಂದಿದ್ದಾರೆ.

ಬೇರೇ ಭಾಷೆಗಳಿಂದ ಬರುವ ಪಾತ್ರ ಹೇಗಿರಬೇಕು ಎನ್ನುವ ಬಗ್ಗೆ ಮಾತನಾಡಿರುವ ಪುನೀತ್​, ಲೀಡ್​ ರೋಲ್​ನಲ್ಲೇ ನಟಿಸಬೇಕು ಎಂದೇನೂ ಇಲ್ಲ. ಪಾತ್ರ ತೂಕದ್ದಾಗಿದ್ದರೆ ಸಾಕು ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಾತ್ರಕ್ಕೆ ಹೆಚ್ಚು ಒತ್ತು ಕೊಡುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಚಿತ್ರಮಂದಿರದಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡುತ್ತಿದೆ. ಇದರಿಂದ ‘ಯುವರತ್ನ’ ಸಿನಿಮಾ ರಿಲೀಸ್ ಆದ ಎಂಟೇ ದಿನಕ್ಕೆ ಒಟಿಟಿಗೆ ಲಗ್ಗೆ ಇಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

 Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?