AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 5:50 PM

Share

ದಕ್ಷಿಣ ಭಾರತದ ನಟ-ನಟಿಯರು ಬೇರೆ ಭಾಷೆ ಸಿನಿಮಾಗಳಿಗೆ ಹೋಗಿ ನಟಿಸೋದು ಇದೇ ಮೊದಲೇನೆಲ್ಲ. ಕನ್ನಡದ ಅನೇಕ ನಟ-ನಟಿಯರು ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ತಮ್ಮ ಛಾಪು ಮೂಡಿಸಿ ಬಂದಿದ್ದಾರೆ. ಕನ್ನಡದಲ್ಲಿ ಫ್ಯಾಮಿಲಿ ಆಡಿಯನ್ಸ್​ನ ಮೆಚ್ಚಿನ ನಾಯಕ ಪುನೀತ್​ ರಾಜ್​ಕುಮಾರ್​ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸೋದು ಯಾವಾಗ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಪುನೀತ್ ರಾಜ್​ಕುಮಾರ್​ ಅವರೇ​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪುನೀತ್​, ಒಂದೊಮ್ಮೆ ಮುಂದಿನ ದಿನಗಳಲ್ಲಿ ಪ್ಯಾನ್​ ಇಂಡಿಯಾ ಅಥವಾ ಬಾಲಿವುಡ್​ನಿಂದ ಆಫರ್​ ಸಿಕ್ಕರೆ ಖಂಡಿತವಾಗಿಯೂ ನಟಿಸುತ್ತೇನೆ ಎಂದಿದ್ದಾರೆ.

ಬೇರೇ ಭಾಷೆಗಳಿಂದ ಬರುವ ಪಾತ್ರ ಹೇಗಿರಬೇಕು ಎನ್ನುವ ಬಗ್ಗೆ ಮಾತನಾಡಿರುವ ಪುನೀತ್​, ಲೀಡ್​ ರೋಲ್​ನಲ್ಲೇ ನಟಿಸಬೇಕು ಎಂದೇನೂ ಇಲ್ಲ. ಪಾತ್ರ ತೂಕದ್ದಾಗಿದ್ದರೆ ಸಾಕು ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಾತ್ರಕ್ಕೆ ಹೆಚ್ಚು ಒತ್ತು ಕೊಡುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಚಿತ್ರಮಂದಿರದಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡುತ್ತಿದೆ. ಇದರಿಂದ ‘ಯುವರತ್ನ’ ಸಿನಿಮಾ ರಿಲೀಸ್ ಆದ ಎಂಟೇ ದಿನಕ್ಕೆ ಒಟಿಟಿಗೆ ಲಗ್ಗೆ ಇಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

 Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್