AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ

ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಬಾಲಿವುಡ್​ ಎಂಟ್ರಿ ಯಾವಾಗ? ಅವರಿಂದಲೇ ಸಿಕ್ತು ಉತ್ತರ
ಪುನೀತ್​ ರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: Apr 08, 2021 | 5:50 PM

Share

ದಕ್ಷಿಣ ಭಾರತದ ನಟ-ನಟಿಯರು ಬೇರೆ ಭಾಷೆ ಸಿನಿಮಾಗಳಿಗೆ ಹೋಗಿ ನಟಿಸೋದು ಇದೇ ಮೊದಲೇನೆಲ್ಲ. ಕನ್ನಡದ ಅನೇಕ ನಟ-ನಟಿಯರು ಹಿಂದಿ, ತೆಲುಗು, ತಮಿಳು, ಮಲಯಾಳಂನಲ್ಲಿ ತಮ್ಮ ಛಾಪು ಮೂಡಿಸಿ ಬಂದಿದ್ದಾರೆ. ಕನ್ನಡದಲ್ಲಿ ಫ್ಯಾಮಿಲಿ ಆಡಿಯನ್ಸ್​ನ ಮೆಚ್ಚಿನ ನಾಯಕ ಪುನೀತ್​ ರಾಜ್​ಕುಮಾರ್​ ಬೇರೆ ಭಾಷೆಯ ಸಿನಿಮಾಗಳಲ್ಲಿ ನಟಿಸೋದು ಯಾವಾಗ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಪುನೀತ್ ರಾಜ್​ಕುಮಾರ್​ ಅವರೇ​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆಜಾನ್​ ಪ್ರೈಮ್​ ನಡೆಸಿದ ವರ್ಚುವಲ್ ಮೀಟಿಂಗ್​​ನಲ್ಲಿ ಯುವರತ್ನ ಟೀಮ್ ಮಾತನಾಡಿದೆ. ಈ ವೇಳೆ ಬಾಲಿವುಡ್ ಹಾಗು ಪ್ಯಾನ್ ಇಂಡಿಯಾದಲ್ಲಿ ನಟಿಸುವ ಬಗ್ಗೆ ಪುನೀತ್ ರಾಜ್​​ಕುಮಾರ್ ಕೂಡ ಮಾತನಾಡಿದ್ದಾರೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪುನೀತ್​, ಒಂದೊಮ್ಮೆ ಮುಂದಿನ ದಿನಗಳಲ್ಲಿ ಪ್ಯಾನ್​ ಇಂಡಿಯಾ ಅಥವಾ ಬಾಲಿವುಡ್​ನಿಂದ ಆಫರ್​ ಸಿಕ್ಕರೆ ಖಂಡಿತವಾಗಿಯೂ ನಟಿಸುತ್ತೇನೆ ಎಂದಿದ್ದಾರೆ.

ಬೇರೇ ಭಾಷೆಗಳಿಂದ ಬರುವ ಪಾತ್ರ ಹೇಗಿರಬೇಕು ಎನ್ನುವ ಬಗ್ಗೆ ಮಾತನಾಡಿರುವ ಪುನೀತ್​, ಲೀಡ್​ ರೋಲ್​ನಲ್ಲೇ ನಟಿಸಬೇಕು ಎಂದೇನೂ ಇಲ್ಲ. ಪಾತ್ರ ತೂಕದ್ದಾಗಿದ್ದರೆ ಸಾಕು ಎಂದು ಹೇಳಿದ್ದಾರೆ. ಈ ಮೂಲಕ ಅವರು ಪಾತ್ರಕ್ಕೆ ಹೆಚ್ಚು ಒತ್ತು ಕೊಡುತ್ತಿರುವುದನ್ನು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಚಿತ್ರಮಂದಿರದಲ್ಲಿ ಶೇ. 50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡುತ್ತಿದೆ. ಇದರಿಂದ ‘ಯುವರತ್ನ’ ಸಿನಿಮಾ ರಿಲೀಸ್ ಆದ ಎಂಟೇ ದಿನಕ್ಕೆ ಒಟಿಟಿಗೆ ಲಗ್ಗೆ ಇಡುತ್ತಿದೆ. ಇದು ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಪುನೀತ್​ ನಟನೆಯ ಸಿನಿಮಾ ರಿಲೀಸ್​ ಆದ ಎಂಟೇ ದಿನಕ್ಕೆ ಒಟಿಟಿ ಪ್ಲಾಟ್​ಫಾರ್ಮ್​ಗೆ ಬರುತ್ತಿರುವುದೇಕೆ? ಹೀಗೆ ಮಾಡುತ್ತಿರುವುದು ಸರಿಯಾ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Yuvarathnaa OTT Release: ಬಿಡುಗಡೆಯಾದ ಎಂಟೇ ಎಂಟು ದಿನಕ್ಕೆ ಅಮೇಜಾನ್​ ಪ್ರೈಂನತ್ತ ಮುಖ ಮಾಡಿದ ಯುವರತ್ನ; ಕೊರೊನಾ ಕಾಟದಿಂದ ಓಟಿಟಿಗೆ ಬಂದ ಚಿತ್ರ

 Yuvarathnaa On Prime: ನೀವು ಹೀಗೆ ಮಾಡಿದ್ದು ಸರಿನಾ?; ಪುನೀತ್​ ನಿರ್ಧಾರಕ್ಕೆ ಫ್ಯಾನ್ಸ್​ ಆಕ್ರೋಶ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More