AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​

Gandhada Gudi | Puneeth Rajkumar: ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ..’ ಎಂದು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ಗಂಧದ ಗುಡಿ’ಯ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್ ಟ್ವಿಟರ್​
TV9 Web
| Edited By: |

Updated on:Oct 27, 2022 | 7:41 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಬಡವಾಗಿದೆ. ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ ಕಾರ್ಮೋಡ ಕವಿದಂತೆ ಆಗಿದೆ. ಅಪ್ಪು ಕೊನೆಯದಾಗಿ ಟ್ವೀಟ್​ ಮಾಡಿದ್ದು 2021ರ ಅಕ್ಟೋಬರ್​ 29ರಂದು. ನಿಧನರಾಗುವುದಕ್ಕೂ ಕೆಲವೇ ಕ್ಷಣಗಳ ಮುನ್ನ ಅವರು ‘ಭಜರಂಗಿ 2’ ಚಿತ್ರಕ್ಕೆ ಶುಭ ಕೋರಿ ಟ್ವೀಟ್​ ಮಾಡಿದ್ದರು. ಆ ಬಳಿಕ ಅವರ ಟ್ವಿಟರ್​ (Puneeth Rajkumar Twitter) ಖಾತೆಯಿಂದ ಯಾವುದೇ ಪೋಸ್ಟ್​ ಮಾಡಲಾಗಿರಲಿಲ್ಲ. ಈಗ ಬರೋಬ್ಬರಿ ಒಂದು ವರ್ಷದ ಬಳಿಕ ಪುನೀತ್​ ರಾಜ್​ಕುಮಾರ್​ ಅವರ ಟ್ವೀಟರ್​ ಅಕೌಂಟ್​ ಮತ್ತೆ ಸಕ್ರಿಯವಾಗಿದೆ. ‘ಗಂಧದ ಗುಡಿ’ (Gandhada Gudi) ಬಿಡುಗಡೆ ಹೊಸ್ತಿಲಿನಲ್ಲಿ ಟ್ವೀಟ್​ ಮಾಡಲಾಗಿದೆ. ಇದನ್ನು ಕಂಡು ಅಪ್ಪು ಅಭಿಮಾನಿಗಳು ಒಮ್ಮೆಲೇ ಶಾಕ್​ ಆಗಿದ್ದಾರೆ.

‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಸಾಕಷ್ಟು ಕನಸು ಕಂಡಿದ್ದರು. ಅವರ ಕನಸಿನ ಪ್ರಾಜೆಕ್ಟ್​ ಅಕ್ಟೋಬರ್​ 28ರಂದು ಬಿಡುಗಡೆ ಆಗುತ್ತಿದೆ. ಅನೇಕ ಕಡೆಗಳಲ್ಲಿ ಅ.27ರ ಸಂಜೆಯೇ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಆ ಪ್ರಯುಕ್ತ ಅಪ್ಪು ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ…’ ಎಂಬ ಕ್ಯಾಪ್ಷನ್​ ಜೊತೆ ಟ್ವೀಟ್​ ಮಾಡಲಾಗಿದೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಪುನೀತ್ ರಾಜ್​ಕುಮಾರ್​ ಅವರ ಖಾತೆ ಹೀಗೆ ತಕ್ಷಣ ಆಕ್ಟೀವ್​ ಆಗುತ್ತದೆ ಎಂದು ಅಭಿಮಾನಿಗಳು ಊಹಿಸಿರಲಿಲ್ಲ. ಏಕಾಏಕಿ ಟ್ವೀಟ್​ ಮಾಡಿದ್ದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ತಂಡದಿಂದ ಈ ಟ್ವೀಟ್​ ಮಾಡಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಜನರು ತುಂಬ ಎಮೋಷನಲ್​ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

‘ಒಂದು ಕ್ಷಣ ಪುನೀತ್​ ರಾಜ್​ಕುಮಾರ್​ ಅವರೇ ವಾಪಸ್​ ಬಂದಂಗೆ ಆಯ್ತು’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಈ ಟ್ವೀಟ್​ ರೀತಿಯೇ ಅಪ್ಪು ಬಾಸ್​ ಕೂಡ ಸಡನ್ನಾಗಿ ಬಂದು ಬಿಡಲಿ’ ಎಂದು ಜನರು ಭಾವುಕವಾಗಿ ಪ್ರತಿಕ್ರಿಯಿದ್ದಾರೆ. ‘ಈ ಖಾತೆಯಿಂದ ಟ್ವೀಟ್​ ಬರುತ್ತದೆ ಅಂತ ನಾವು ಊಹಿಸಿಯೇ ಇರಲಿಲ್ಲ’ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವೂ ಕೂಡ ನಿಮ್ಮನ್ನು ನೋಡುವ ಕಾತುರದಲ್ಲಿದ್ದೇವೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 pm, Thu, 27 October 22

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ