AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​

Gandhada Gudi | Puneeth Rajkumar: ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ..’ ಎಂದು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ಗಂಧದ ಗುಡಿ’ಯ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್ ಟ್ವಿಟರ್​
TV9 Web
| Edited By: |

Updated on:Oct 27, 2022 | 7:41 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಬಡವಾಗಿದೆ. ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ ಕಾರ್ಮೋಡ ಕವಿದಂತೆ ಆಗಿದೆ. ಅಪ್ಪು ಕೊನೆಯದಾಗಿ ಟ್ವೀಟ್​ ಮಾಡಿದ್ದು 2021ರ ಅಕ್ಟೋಬರ್​ 29ರಂದು. ನಿಧನರಾಗುವುದಕ್ಕೂ ಕೆಲವೇ ಕ್ಷಣಗಳ ಮುನ್ನ ಅವರು ‘ಭಜರಂಗಿ 2’ ಚಿತ್ರಕ್ಕೆ ಶುಭ ಕೋರಿ ಟ್ವೀಟ್​ ಮಾಡಿದ್ದರು. ಆ ಬಳಿಕ ಅವರ ಟ್ವಿಟರ್​ (Puneeth Rajkumar Twitter) ಖಾತೆಯಿಂದ ಯಾವುದೇ ಪೋಸ್ಟ್​ ಮಾಡಲಾಗಿರಲಿಲ್ಲ. ಈಗ ಬರೋಬ್ಬರಿ ಒಂದು ವರ್ಷದ ಬಳಿಕ ಪುನೀತ್​ ರಾಜ್​ಕುಮಾರ್​ ಅವರ ಟ್ವೀಟರ್​ ಅಕೌಂಟ್​ ಮತ್ತೆ ಸಕ್ರಿಯವಾಗಿದೆ. ‘ಗಂಧದ ಗುಡಿ’ (Gandhada Gudi) ಬಿಡುಗಡೆ ಹೊಸ್ತಿಲಿನಲ್ಲಿ ಟ್ವೀಟ್​ ಮಾಡಲಾಗಿದೆ. ಇದನ್ನು ಕಂಡು ಅಪ್ಪು ಅಭಿಮಾನಿಗಳು ಒಮ್ಮೆಲೇ ಶಾಕ್​ ಆಗಿದ್ದಾರೆ.

‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಸಾಕಷ್ಟು ಕನಸು ಕಂಡಿದ್ದರು. ಅವರ ಕನಸಿನ ಪ್ರಾಜೆಕ್ಟ್​ ಅಕ್ಟೋಬರ್​ 28ರಂದು ಬಿಡುಗಡೆ ಆಗುತ್ತಿದೆ. ಅನೇಕ ಕಡೆಗಳಲ್ಲಿ ಅ.27ರ ಸಂಜೆಯೇ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಆ ಪ್ರಯುಕ್ತ ಅಪ್ಪು ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ…’ ಎಂಬ ಕ್ಯಾಪ್ಷನ್​ ಜೊತೆ ಟ್ವೀಟ್​ ಮಾಡಲಾಗಿದೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಪುನೀತ್ ರಾಜ್​ಕುಮಾರ್​ ಅವರ ಖಾತೆ ಹೀಗೆ ತಕ್ಷಣ ಆಕ್ಟೀವ್​ ಆಗುತ್ತದೆ ಎಂದು ಅಭಿಮಾನಿಗಳು ಊಹಿಸಿರಲಿಲ್ಲ. ಏಕಾಏಕಿ ಟ್ವೀಟ್​ ಮಾಡಿದ್ದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ತಂಡದಿಂದ ಈ ಟ್ವೀಟ್​ ಮಾಡಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಜನರು ತುಂಬ ಎಮೋಷನಲ್​ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

‘ಒಂದು ಕ್ಷಣ ಪುನೀತ್​ ರಾಜ್​ಕುಮಾರ್​ ಅವರೇ ವಾಪಸ್​ ಬಂದಂಗೆ ಆಯ್ತು’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಈ ಟ್ವೀಟ್​ ರೀತಿಯೇ ಅಪ್ಪು ಬಾಸ್​ ಕೂಡ ಸಡನ್ನಾಗಿ ಬಂದು ಬಿಡಲಿ’ ಎಂದು ಜನರು ಭಾವುಕವಾಗಿ ಪ್ರತಿಕ್ರಿಯಿದ್ದಾರೆ. ‘ಈ ಖಾತೆಯಿಂದ ಟ್ವೀಟ್​ ಬರುತ್ತದೆ ಅಂತ ನಾವು ಊಹಿಸಿಯೇ ಇರಲಿಲ್ಲ’ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವೂ ಕೂಡ ನಿಮ್ಮನ್ನು ನೋಡುವ ಕಾತುರದಲ್ಲಿದ್ದೇವೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 pm, Thu, 27 October 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ