AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​

Gandhada Gudi | Puneeth Rajkumar: ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ..’ ಎಂದು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ಗಂಧದ ಗುಡಿ’ಯ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್ ಟ್ವಿಟರ್​
TV9 Web
| Edited By: |

Updated on:Oct 27, 2022 | 7:41 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಬಡವಾಗಿದೆ. ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ ಕಾರ್ಮೋಡ ಕವಿದಂತೆ ಆಗಿದೆ. ಅಪ್ಪು ಕೊನೆಯದಾಗಿ ಟ್ವೀಟ್​ ಮಾಡಿದ್ದು 2021ರ ಅಕ್ಟೋಬರ್​ 29ರಂದು. ನಿಧನರಾಗುವುದಕ್ಕೂ ಕೆಲವೇ ಕ್ಷಣಗಳ ಮುನ್ನ ಅವರು ‘ಭಜರಂಗಿ 2’ ಚಿತ್ರಕ್ಕೆ ಶುಭ ಕೋರಿ ಟ್ವೀಟ್​ ಮಾಡಿದ್ದರು. ಆ ಬಳಿಕ ಅವರ ಟ್ವಿಟರ್​ (Puneeth Rajkumar Twitter) ಖಾತೆಯಿಂದ ಯಾವುದೇ ಪೋಸ್ಟ್​ ಮಾಡಲಾಗಿರಲಿಲ್ಲ. ಈಗ ಬರೋಬ್ಬರಿ ಒಂದು ವರ್ಷದ ಬಳಿಕ ಪುನೀತ್​ ರಾಜ್​ಕುಮಾರ್​ ಅವರ ಟ್ವೀಟರ್​ ಅಕೌಂಟ್​ ಮತ್ತೆ ಸಕ್ರಿಯವಾಗಿದೆ. ‘ಗಂಧದ ಗುಡಿ’ (Gandhada Gudi) ಬಿಡುಗಡೆ ಹೊಸ್ತಿಲಿನಲ್ಲಿ ಟ್ವೀಟ್​ ಮಾಡಲಾಗಿದೆ. ಇದನ್ನು ಕಂಡು ಅಪ್ಪು ಅಭಿಮಾನಿಗಳು ಒಮ್ಮೆಲೇ ಶಾಕ್​ ಆಗಿದ್ದಾರೆ.

‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಸಾಕಷ್ಟು ಕನಸು ಕಂಡಿದ್ದರು. ಅವರ ಕನಸಿನ ಪ್ರಾಜೆಕ್ಟ್​ ಅಕ್ಟೋಬರ್​ 28ರಂದು ಬಿಡುಗಡೆ ಆಗುತ್ತಿದೆ. ಅನೇಕ ಕಡೆಗಳಲ್ಲಿ ಅ.27ರ ಸಂಜೆಯೇ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಆ ಪ್ರಯುಕ್ತ ಅಪ್ಪು ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ…’ ಎಂಬ ಕ್ಯಾಪ್ಷನ್​ ಜೊತೆ ಟ್ವೀಟ್​ ಮಾಡಲಾಗಿದೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಪುನೀತ್ ರಾಜ್​ಕುಮಾರ್​ ಅವರ ಖಾತೆ ಹೀಗೆ ತಕ್ಷಣ ಆಕ್ಟೀವ್​ ಆಗುತ್ತದೆ ಎಂದು ಅಭಿಮಾನಿಗಳು ಊಹಿಸಿರಲಿಲ್ಲ. ಏಕಾಏಕಿ ಟ್ವೀಟ್​ ಮಾಡಿದ್ದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ತಂಡದಿಂದ ಈ ಟ್ವೀಟ್​ ಮಾಡಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಜನರು ತುಂಬ ಎಮೋಷನಲ್​ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

‘ಒಂದು ಕ್ಷಣ ಪುನೀತ್​ ರಾಜ್​ಕುಮಾರ್​ ಅವರೇ ವಾಪಸ್​ ಬಂದಂಗೆ ಆಯ್ತು’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಈ ಟ್ವೀಟ್​ ರೀತಿಯೇ ಅಪ್ಪು ಬಾಸ್​ ಕೂಡ ಸಡನ್ನಾಗಿ ಬಂದು ಬಿಡಲಿ’ ಎಂದು ಜನರು ಭಾವುಕವಾಗಿ ಪ್ರತಿಕ್ರಿಯಿದ್ದಾರೆ. ‘ಈ ಖಾತೆಯಿಂದ ಟ್ವೀಟ್​ ಬರುತ್ತದೆ ಅಂತ ನಾವು ಊಹಿಸಿಯೇ ಇರಲಿಲ್ಲ’ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವೂ ಕೂಡ ನಿಮ್ಮನ್ನು ನೋಡುವ ಕಾತುರದಲ್ಲಿದ್ದೇವೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 pm, Thu, 27 October 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ