AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​

Gandhada Gudi | Puneeth Rajkumar: ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ..’ ಎಂದು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ಗಂಧದ ಗುಡಿ’ಯ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

Puneeth Rajkumar Twitter: ವರ್ಷದ ಬಳಿಕ ಪುನೀತ್​ ಟ್ವಿಟರ್​ ಖಾತೆ ಆಕ್ಟೀವ್​; ‘ಒಂದು ಕ್ಷಣ ಅವರೇ ವಾಪಸ್​ ಬಂದಂಗಾಯ್ತು’ ಎಂದ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್ ಟ್ವಿಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Oct 27, 2022 | 7:41 PM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಬಡವಾಗಿದೆ. ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ ಕಾರ್ಮೋಡ ಕವಿದಂತೆ ಆಗಿದೆ. ಅಪ್ಪು ಕೊನೆಯದಾಗಿ ಟ್ವೀಟ್​ ಮಾಡಿದ್ದು 2021ರ ಅಕ್ಟೋಬರ್​ 29ರಂದು. ನಿಧನರಾಗುವುದಕ್ಕೂ ಕೆಲವೇ ಕ್ಷಣಗಳ ಮುನ್ನ ಅವರು ‘ಭಜರಂಗಿ 2’ ಚಿತ್ರಕ್ಕೆ ಶುಭ ಕೋರಿ ಟ್ವೀಟ್​ ಮಾಡಿದ್ದರು. ಆ ಬಳಿಕ ಅವರ ಟ್ವಿಟರ್​ (Puneeth Rajkumar Twitter) ಖಾತೆಯಿಂದ ಯಾವುದೇ ಪೋಸ್ಟ್​ ಮಾಡಲಾಗಿರಲಿಲ್ಲ. ಈಗ ಬರೋಬ್ಬರಿ ಒಂದು ವರ್ಷದ ಬಳಿಕ ಪುನೀತ್​ ರಾಜ್​ಕುಮಾರ್​ ಅವರ ಟ್ವೀಟರ್​ ಅಕೌಂಟ್​ ಮತ್ತೆ ಸಕ್ರಿಯವಾಗಿದೆ. ‘ಗಂಧದ ಗುಡಿ’ (Gandhada Gudi) ಬಿಡುಗಡೆ ಹೊಸ್ತಿಲಿನಲ್ಲಿ ಟ್ವೀಟ್​ ಮಾಡಲಾಗಿದೆ. ಇದನ್ನು ಕಂಡು ಅಪ್ಪು ಅಭಿಮಾನಿಗಳು ಒಮ್ಮೆಲೇ ಶಾಕ್​ ಆಗಿದ್ದಾರೆ.

‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಬಗ್ಗೆ ಪುನೀತ್​ ರಾಜ್​ಕುಮಾರ್​ ಅವರು ಸಾಕಷ್ಟು ಕನಸು ಕಂಡಿದ್ದರು. ಅವರ ಕನಸಿನ ಪ್ರಾಜೆಕ್ಟ್​ ಅಕ್ಟೋಬರ್​ 28ರಂದು ಬಿಡುಗಡೆ ಆಗುತ್ತಿದೆ. ಅನೇಕ ಕಡೆಗಳಲ್ಲಿ ಅ.27ರ ಸಂಜೆಯೇ ಪ್ರೀಮಿಯರ್​ ಶೋ ಆಯೋಜನೆಗೊಂಡಿದೆ. ಆ ಪ್ರಯುಕ್ತ ಅಪ್ಪು ಟ್ವಿಟರ್​ ಖಾತೆಯಿಂದ ಪೋಸ್ಟ್​ ಮಾಡಲಾಗಿದೆ. ‘ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ…’ ಎಂಬ ಕ್ಯಾಪ್ಷನ್​ ಜೊತೆ ಟ್ವೀಟ್​ ಮಾಡಲಾಗಿದೆ. ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಒಂದು ಸಣ್ಣ ತುಣುಕು ಕೂಡ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

ಪುನೀತ್ ರಾಜ್​ಕುಮಾರ್​ ಅವರ ಖಾತೆ ಹೀಗೆ ತಕ್ಷಣ ಆಕ್ಟೀವ್​ ಆಗುತ್ತದೆ ಎಂದು ಅಭಿಮಾನಿಗಳು ಊಹಿಸಿರಲಿಲ್ಲ. ಏಕಾಏಕಿ ಟ್ವೀಟ್​ ಮಾಡಿದ್ದನ್ನು ಕಂಡು ಎಲ್ಲರಿಗೂ ಅಚ್ಚರಿ ಆಗಿದೆ. ‘ಪಿಆರ್​ಕೆ ಪ್ರೊಡಕ್ಷನ್ಸ್​’ ತಂಡದಿಂದ ಈ ಟ್ವೀಟ್​ ಮಾಡಲಾಗಿದೆ. ಇದನ್ನು ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಜನರು ತುಂಬ ಎಮೋಷನಲ್​ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

‘ಒಂದು ಕ್ಷಣ ಪುನೀತ್​ ರಾಜ್​ಕುಮಾರ್​ ಅವರೇ ವಾಪಸ್​ ಬಂದಂಗೆ ಆಯ್ತು’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ‘ಈ ಟ್ವೀಟ್​ ರೀತಿಯೇ ಅಪ್ಪು ಬಾಸ್​ ಕೂಡ ಸಡನ್ನಾಗಿ ಬಂದು ಬಿಡಲಿ’ ಎಂದು ಜನರು ಭಾವುಕವಾಗಿ ಪ್ರತಿಕ್ರಿಯಿದ್ದಾರೆ. ‘ಈ ಖಾತೆಯಿಂದ ಟ್ವೀಟ್​ ಬರುತ್ತದೆ ಅಂತ ನಾವು ಊಹಿಸಿಯೇ ಇರಲಿಲ್ಲ’ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ. ಕೆಲವೇ ನಿಮಿಷಗಳಲ್ಲಿ ಈ ಪೋಸ್ಟ್​ ವೈರಲ್​ ಆಗಿದೆ. ‘ನಾವೂ ಕೂಡ ನಿಮ್ಮನ್ನು ನೋಡುವ ಕಾತುರದಲ್ಲಿದ್ದೇವೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 pm, Thu, 27 October 22

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ