AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​

Puneeth Rajkumar: ಪುನೀತ್​ ರಾಜ್​ಕುಮಾರ್​ ನಿಧನರಾದ ನಂತರ ಅವರ ಟ್ವಿಟರ್ ಖಾತೆಯಲ್ಲಿ ಯಾವುದೇ ಚಟುವಟಿಕೆ ಇರಲಿಲ್ಲ. ಆದ್ದರಿಂದ ಬ್ಲೂ ಟಿಕ್​ ತೆಗೆಯಲಾಗಿತ್ತು. ಈ ಕ್ರಮವನ್ನು ಅಭಿಮಾನಿಗಳು ವಿರೋಧಿಸಿದ್ದರು.

Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್ ಟ್ವಿಟರ್​ ಖಾತೆ
TV9 Web
| Updated By: ಮದನ್​ ಕುಮಾರ್​|

Updated on: Jul 18, 2022 | 11:18 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಜೀವಂತವಾಗಿ ಇರುತ್ತಾರೆ. ಭೌತಿಕವಾಗಿ ಅವರು ಇಲ್ಲ ಎಂದಮಾತ್ರಕ್ಕೆ ತಮ್ಮ ನೆಚ್ಚಿನ ನಟನಿಗೆ ಕಿಂಚಿತ್ತೂ ಅವಮಾನ ಆಗಲು ಫ್ಯಾನ್ಸ್​ ಬಿಡುವುದಿಲ್ಲ. ಈ ವಿಚಾರದಲ್ಲಿ ಯಾರೇ ತಪ್ಪು ಮಾಡಿದರೂ ಅಪ್ಪು ಅಭಿಮಾನಿಗಳು ಧ್ವನಿ ಎತ್ತುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಟ್ವಿಟರ್​ (Twitter) ಸಂಸ್ಥೆಯಿಂದ ಆಗಿದ್ದ ಪ್ರಮಾದ. ಹೌದು, ಇತ್ತೀಚೆಗೆ ಪುನೀತ್​ ರಾಜ್​ಕುಮಾರ್​ ಅವರ ಟ್ವಿಟರ್​ (Puneeth Rajkumar Twitter) ಖಾತೆಯಲ್ಲಿ ಇದ್ದ ಬ್ಲೂ ಟಿಕ್​ ತೆಗೆದುಹಾಕಲಾಗಿತ್ತು. ಆ ಕ್ರಮದ ವಿರುದ್ಧ ‘ಪವರ್​ ಸ್ಟಾರ್​’ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಟ್ವಿಟರ್​ ಸಂಸ್ಥೆ ಎಚ್ಚೆತ್ತುಕೊಂಡಿದೆ. ಅಭಿಮಾನಿಗಳ ಭಾವನೆಗೆ ಗೌರವ ಕೊಟ್ಟು, ಅಪ್ಪು ಟ್ವಿಟರ್​ ಖಾತೆಗೆ ಬ್ಲೂ ಟಿಕ್​ ಮರಳಿ ನೀಡಲಾಗಿದೆ.

ಜನಪ್ರಿಯ ವ್ಯಕ್ತಿ ಮತ್ತು ಸಂಸ್ಥೆಗಳ ಟ್ವಿಟರ್​ ಖಾತೆಗಳಿಗೆ ಬ್ಲೂ ಟಿಕ್​ ನೀಡಲಾಗುತ್ತದೆ. ನಿರ್ದಿಷ್ಟ ಖಾತೆ ಅಧಿಕೃತವಾಗಿದೆ ಎಂಬುದನ್ನು ಈ ಬ್ಲೂ ಟಿಕ್​ ಸೂಚಿಸುತ್ತದೆ. ನಕಲಿ ಮತ್ತು ಅಸಲಿ ಖಾತೆಗಳ ನಡುವೆ ವ್ಯತ್ಯಾಸ ತಿಳಿಯಲು ಕೂಡ ಈ ಚಿಹ್ನೆ ಸಹಕಾರಿ ಆಗುತ್ತದೆ. ಬಹುತೇಕ ಎಲ್ಲ ಸೆಲೆಬ್ರಿಟಿಗಳ ಸೋಶಿಯಲ್​ ಮೀಡಿಯಾ ಖಾತೆಗಳಿಗೆ ಬ್ಲೂ ಟಿಕ್​ ನೀಡಲಾಗಿರುತ್ತದೆ. ಆದರೆ ದೀರ್ಘ ಕಾಲದವರೆಗೆ ಆ ಖಾತೆಯಲ್ಲಿ ಯಾವುದೇ ಚಟುವಟಿಕೆಗಳು ಇಲ್ಲದಿದ್ದರೆ ಬ್ಲೂ ಟಿಕ್​ ತೆಗೆದುಹಾಕಲಾಗುತ್ತದೆ.

ಇದನ್ನೂ ಓದಿ
Image
ನಾನ್​-ವೆಜ್​​ ವಿಚಾರದಲ್ಲಿ ಅನು ಪ್ರಭಾಕರ್​ಗೆ ರೇಗಿಸಿದ್ದ ಪುನೀತ್​ ರಾಜ್​ಕುಮಾರ್​; ನೆನಪಿನ ಪುಟ ತೆರೆದ ನಟಿ
Image
ಪುನೀತ್​ ರಾಜ್​ಕುಮಾರ್​ ಬ್ಯಾನರ್​ ಸಲುವಾಗಿ ಫ್ಯಾನ್ಸ್​ ಮತ್ತು ಗ್ರಾಮಸ್ಥರ ನಡುವೆ ಮಾರಾಮಾರಿ; ಏನಿದು ಕಿರಿಕ್​?
Image
ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ
Image
ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​ ಜತೆ ಮಾತುಕತೆ

ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುವ ಟ್ವಿಟರ್​ ಬಳಸುತ್ತಿದ್ದರು. ಅವರ ನಿಧನರಾದ ನಂತರ ಆ ಖಾತೆಯಲ್ಲಿ ಯಾವುದೇ ಚಟುವಟಿಕೆ ಇರಲಿಲ್ಲ. ಆದ್ದರಿಂದ ಬ್ಲೂ ಟಿಕ್​ ತೆಗೆಯಲಾಗಿತ್ತು. ಇದನ್ನು ಖಂಡಿಸಿ ಅಭಿಮಾನಿಗಳು ಟ್ವಿಟರ್​ ಸಂಸ್ಥೆ ವಿರುದ್ಧ ಗರಂ ಆಗಿದ್ದರು. ಪರಿಣಾಮವಾಗಿ, ಈಗ ಅಪ್ಪು ಅವರ ಖಾತೆಗೆ ಮರಳಿ ಬ್ಲೂ ಟಿಕ್​ ನೀಡಲಾಗಿದೆ. ಇದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಕುರಿತು ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಕೂಡ ಟ್ವೀಟ್​ ಮಾಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ನಿಧನದ ನಂತರ ‘ಪಿಆರ್​ಕೆ ಪ್ರೊಡಕ್ಷನ್ಸ್​’ ಕುರಿತ ಎಲ್ಲ ಅಪ್​ಡೇಟ್​ಗಳನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ನೀಡಲಾಗುತ್ತಿದೆ. ಅಪ್ಪು ಅವರ ಕನಸಿನ ಪ್ರಾಜೆಕ್ಟ್​ ಆಗಿರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್​ 28ರಂದು ಚಿತ್ರಮಂದಿರಗಳಲ್ಲೇ ಈ ಡಾಕ್ಯುಮೆಂಟರಿ ರಿಲೀಸ್​ ಆಗಲಿದೆ. ಅದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ