AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ರಾಜ್​ಕುಮಾರ್​ ಇಲ್ಲದ ಒಂದು ತಿಂಗಳು: ಈ 30 ದಿನದಲ್ಲಿ ಆಗಿವೆ ಹಲವು ಬದಲಾವಣೆಗಳು

Puneeth Rajkumar: ಪುನೀತ್​ ರಾಜ್​ಕುಮಾರ್​ ಅವರು ತಮ್ಮ ಬದುಕಿನ ಮೂಲಕ ಈ ಸಮಾಜಕ್ಕೆ ಅನೇಕ ಸಂದೇಶಗಳನ್ನು ಕೊಟ್ಟು ಹೋಗಿದ್ದಾರೆ. ಇಂದು (ನ.29) ಅವರು ಇಲ್ಲದೆ ಒಂದು ತಿಂಗಳು ಕಳೆದಿದೆ.

ಪುನೀತ್​ ರಾಜ್​ಕುಮಾರ್​ ಇಲ್ಲದ ಒಂದು ತಿಂಗಳು: ಈ 30 ದಿನದಲ್ಲಿ ಆಗಿವೆ ಹಲವು ಬದಲಾವಣೆಗಳು
ಪುನೀತ್ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Nov 29, 2021 | 4:23 PM

ಸ್ಯಾಂಡಲ್​ವುಡ್​ನಲ್ಲಿ ಎಲ್ಲರ ಮೆಚ್ಚಿನ ನಟನಾಗಿ ಮಿಂಚುತ್ತಿದ್ದ ಪುನೀತ್​ ರಾಜ್​ಕುಮಾರ್​ (Puneeth Rajkumar) ಇಹಲೋಕ ತ್ಯಜಿಸಿ 30 ದಿನ ಕಳೆದಿದೆ. ಅವರಿಲ್ಲ ಎಂಬ ಕಹಿ ಸತ್ಯವನ್ನು ಒಪ್ಪಿಕೊಳ್ಳುವುದು ನಿಜಕ್ಕೂ ಕಷ್ಟ. ಅ.29ರಂದು ಇಡೀ ಕರುನಾಡಿಗೆ ಸಿಡಿಲಿನಂತಹ ಸುದ್ದಿ ಕೇಳಿಬಂದಿತ್ತು. ಹೃದಯಾಘಾತದಿಂದ (Heart Attack) ಪುನೀತ್​ ರಾಜ್​ಕುಮಾರ್​ ಇನ್ನಿಲ್ಲ ಎಂಬ ಮಾಹಿತಿ ಕಾಡ್ಗಿಚ್ಚಿನಂತೆ ಹಬ್ಬಿತ್ತು. ಆ ಕರಾಳ ದಿನ ಎದುರಾಗಿ ಇಂದಿಗೆ (ನ.29) ಒಂದು ತಿಂಗಳು ಕಳೆದಿದೆ. ಎಲ್ಲರಿಗೂ ಅಪ್ಪು ಪ್ರೀತಿಪಾತ್ರರಾಗಿದ್ದರು. ಚಿತ್ರರಂಗದಲ್ಲಿ ಅವರು ಅಜಾತಶತ್ರು ಆಗಿದ್ದರು. ಯಾರ ಜೊತೆಗೂ ಕಿರಿಕ್​ ಮಾಡಿಕೊಂಡಿರಲಿಲ್ಲ. ಅವರ ಅಗಲಿಕೆ ನಂತರ ಕೆಲವು ಮಹತ್ವದ ಘಟನೆಗಳು ನಡೆದಿವೆ. ಅಪ್ಪು ನಿಧನದಿಂದ (Puneeth Rajkumar Death) ಲಕ್ಷಾಂತರ ಮಂದಿಯ ಬದುಕಿನ ಮೇಲೆ ಪರಿಣಾಮ ಬೀರಿದೆ. ಕೆಲವರು ಜಿಮ್​ ತೊರೆದಿದ್ದಾರೆ. ಅನೇಕರು ಹೃದಯದ ತಪಾಸಣೆಗೆ ಮುಗಿ ಬಿದ್ದಿದ್ದಾರೆ. ನೇತ್ರದಾನಕ್ಕೆ ಲಕ್ಷಾಂತರ ಜನರು ಪ್ರತಿಜ್ಞೆ ಮಾಡಿದ್ದಾರೆ.

ಜಿಮ್​ ತೊರೆದ ಯುವಕರು:

ಪುನೀತ್​ ರಾಜ್​ಕುಮಾರ್​ ಅವರು ಫಿಟ್ನೆಸ್​ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದರು. ಅಂಥ ವ್ಯಕ್ತಿಗೆ ಹೃದಯಾಘಾತ ಆಯಿತು ಎಂಬುದು ಅಚ್ಚರಿಯ ವಿಚಾರ. ಜಿಮ್​ನಲ್ಲಿ ವರ್ಕೌಟ್​ ಮಾಡುವುದಕ್ಕೂ ಹೃದಯಾಘಾತಕ್ಕೂ ಸಂಬಂಧ ಇದೆ ಎಂದು ಕೆಲವರು ವಾದಿಸುತ್ತಿದ್ದಾರೆ. ಹಾಗಾಗಿ ಪುನೀತ್​ ನಿಧನದ ಬಳಿಕ ಸಾವಿರಾರು ಯುವಕರು ಜಿಮ್​ಗೆ ವಿದಾಯ ಹೇಳಿದರು. ಎಲ್ಲ ಜಿಲ್ಲೆಗಳಲ್ಲೂ ಇದೇ ವಾತಾವರಣ ನಿರ್ಮಾಣ ಆಗಿದೆ. ಇದರಿಂದ ಜಿಮ್​ ಮಾಲಿಕರಿಗೆ ಚಿಂತೆ ಶುರುವಾಗಿದೆ.

ಹೆಚ್ಚಿದೆ ಹೃದಯದ ಕಾಳಜಿ:

ಸೂಕ್ತ ಕ್ರಮಗಳನ್ನು ವಹಿಸಿದರೆ ಹೃದಯಾಘಾತ ಆಗುವುದನ್ನು ಮೊದಲೇ ತಡೆಯಬಹುದು. ಹೃದ್ರೋಗದ ಲಕ್ಷಣಗಳನ್ನು ಮೊದಲೇ ಪತ್ತೆ ಹಚ್ಚಬೇಕು ಎಂಬ ಜಾಗೃತಿ ಎಲ್ಲರಲ್ಲೂ ಮೂಡಿದೆ. ಹಾಗಾಗಿ ಅಪಾರ ಸಂಖ್ಯೆಯ ಜನರು ಆಸ್ಪತ್ರೆಗಳಿಗೆ ಬಂದು ಹೃದಯದ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ. ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವವರು ಕೂಡ ಡೈಯಾಗ್ನಾಸ್ಟಿಕ್​ ಕೇಂದ್ರಗಳಿಗೆ ಲಗ್ಗೆ ಇಡುತ್ತಿದ್ದಾರೆ. ಇದರಿಂದ ನೂಕು ನುಗ್ಗಲು ಉಂಟಾಗಿದ್ದು ಕೂಡ ಉಂಟು! ಅಷ್ಟರಮಟ್ಟಿಗೆ ಪುನೀತ್​ ಸಾವು ಜನರ ಮನದ ಮೇಲೆ ಪರಿಣಾಮ ಬೀರಿದೆ.

ನೇತ್ರದಾನಕ್ಕೆ ಮುಂದಾದ ಲಕ್ಷಾಂತರ ಮಂದಿ:

ಡಾ. ರಾಜ್​ಕುಮಾರ್​ ರೀತಿಯೇ ಪುನೀತ್​​ ರಾಜ್​ಕುಮಾರ್​ ಕೂಡ ಕಣ್ಣುಗಳನ್ನು ದಾನ ಮಾಡಿದರು. ಅಪ್ಪು ಕಣ್ಣಿನಿಂದ ಒಟ್ಟು 10 ಜನರಿಗೆ ದೃಷ್ಟಿ ನೀಡಲಾಗಿದೆ! ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಈ ಕಾರ್ಯ ಮಾಡಲಾಗಿದೆ. ನೇತ್ರದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. ನೇತ್ರದಾನ ನೋಂದಣಿ ಶಿಬಿರಗಳ ಸಂಖ್ಯೆ ಹೆಚ್ಚಿದೆ. ಅನೇಕ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು, ಅಭಿಮಾನಿ ಸಂಘಗಳು ನೇತ್ರಾದಾನ ನೋಂದಣಿ ಶಿಬಿರಗಳನ್ನು ಆಯೋಜಿಸುತ್ತಿವೆ. ಲಕ್ಷಾಂತರ ಜನರು ನೇತ್ರದಾನದ ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ:

ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್​ಕುಮಾರ್​; ಇಲ್ಲಿದೆ ವಿಡಿಯೋ

‘ಹೀಗೆಲ್ಲ ಮಾಡಿದ್ರೆ ಪುನೀತ್​ಗೆ ದ್ರೋಹ ಮಾಡಿದಂತೆ ಆಗುತ್ತೆ’; ಅಪ್ಪು​ ಸಮಾಧಿ ಬಳಿ ರಾಘಣ್ಣ ಮಾತು

ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?