Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಮಾರ್ಗಸೂಚಿ ಉಲ್ಲಂಘಿಸಿದ ‘ಯುವರತ್ನ’ ತಂಡ; ಹೈಕೋರ್ಟ್​ ಮೆಟ್ಟಿಲೇರಿದ ಪ್ರಕರಣ

ಗಣ್ಯರಿಂದ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಕುರಿತು ದಂಡ ವಿಧಿಸುವ ಬಗ್ಗೆ ಹೈಕೋರ್ಟ್​ಗೆ ಅಧಿಸೂಚನೆ ಸಲ್ಲಿಕೆ ಮಾಡಲಾಗಿದೆ.

ಕೊವಿಡ್​ ಮಾರ್ಗಸೂಚಿ ಉಲ್ಲಂಘಿಸಿದ ‘ಯುವರತ್ನ’ ತಂಡ; ಹೈಕೋರ್ಟ್​ ಮೆಟ್ಟಿಲೇರಿದ ಪ್ರಕರಣ
ಯುವ ಸಂಭ್ರಮದಲ್ಲಿ ಪುನೀತ್​ ರಾಜ್​ಕುಮಾರ್​
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 24, 2021 | 7:41 PM

ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಮತ್ತು ನಟ ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ನ ಯುವರತ್ನ ಸಿನಿಮಾ ಏ.1ರಂದು ತೆರೆಕಾಣುತ್ತಿದೆ. ಇದಕ್ಕೂ ಮುನ್ನ ಯುವರತ್ನ ತಂಡ ‘ಯುವ ಸಂಭ್ರಮ’ ಹೆಸರಲ್ಲಿ ರಾಜ್ಯಾದ್ಯಂತ ಸಂಚಾರ ಮಾಡಿ ಪ್ರಚಾರ ನಡೆಸಿತ್ತು. ಈ ವೇಳೆ ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೊವಿಡ್​ ನಿಯಮವನ್ನು ಉಲ್ಲಂಘನೆ ಮಾಡಿತ್ತು. ಈ ವಿಚಾರ ಈಗ ಹೈಕೋರ್ಟ್​ ಮೆಟ್ಟಿಲೇರಿದೆ. ಗಣ್ಯರಿಂದ ಕೊವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ ಕುರಿತು ದಂಡ ವಿಧಿಸುವ ಬಗ್ಗೆ ಹೈಕೋರ್ಟ್​ಗೆ ಅಧಿಸೂಚನೆ ಸಲ್ಲಿಕೆ ಮಾಡಲಾಗಿದೆ. ಈ ವೇಳೆ ‘ಯುವರತ್ನ’ ಚಿತ್ರತಂಡದಿಂದ ಹಾಗೂ ಬಿಜೆಪಿ, ರಾಯಚೂರು ಸಮಾವೇಶದಲ್ಲಿ ಕೊವಿಡ್​ ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ವಕೀಲ ಜಿ.ಆರ್.ಮೋಹನ್​ ಹೈಕೋರ್ಟ್​ಗೆ ಜ್ಞಾಪನಾ ಪತ್ರ ಸಲ್ಲಿಕೆ ಮಾಡಿದ್ದಾರೆ. ಜತೆಗೆ, ದಂಡ ಸ್ವೀಕರಿಸುವ ಅಧಿಕಾರಿಗಳ ಪಟ್ಟಿಯನ್ನು ಕೂಡ ಹೈಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮದ ವಿವರಗಳನ್ನು ಏಪ್ರಿಲ್ 8ರೊಳಗೆ ನೀಡಲು ಸೂಚನೆ ಕೊಟ್ಟಿದೆ.

ಮಾಸ್ಕ್, ಸಾಮಾಜಿಕ ಅಂತರ ಪಾಲಿಸದವರಿಗೆ ನಗರ ಪಾಲಿಕೆ ವ್ಯಾಪ್ತಿಯಲ್ಲಿ 250 ರೂಪಾಯಿ ದಂಡ ಹಾಗೂ ಇತರೆ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಮಾರ್ಗಸೂಚಿ ಪಾಲಿಸದ ಪಾರ್ಟಿ ಹಾಲ್​ಗಳಿಗೆ 5,000 ರೂಪಾಯಿ ದಂಡ, ಎಸಿ ಪಾರ್ಟಿಹಾಲ್, ಹೋಟೆಲ್​ಗಳಿಗೆ 10,000 ರೂ. ದಂಡ, ಸಮಾವೇಶ ಮತ್ತು ಸಭೆಗಳ ಆಯೋಜಕರಿಗೆ 10,000 ರೂಪಾಯಿ ದಂಡ ವಿಧಿಸಲಾಗುತ್ತಿದೆ.

ಎಚ್ಚರಿಕೆ ನೀಡಿದ್ದ ಸುಧಾಕರ್​ ‘ರಾಜ್ಯದಲ್ಲಿ ದಿನೇದಿನೆ ಕೊವಿಡ್ ಪ್ರಕರಣಗಳು ಹೆಚ್ಚಳ ಆಗುತ್ತಿವೆ. ಆದರೂ ಕೆಲವು ಸೆಲೆಬ್ರಿಟಿಗಳು ಸಾವಿರಾರು ಸಂಖ್ಯೆಗಳಲ್ಲಿ ಅಭಿಮಾನಿಗಳನ್ನು ಗುಂಪು ಸೇರಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಲನಚಿತ್ರ ತಾರೆಯರಿಗೆ ನಾನು ಮನವಿ ಮಾಡುತ್ತೇನೆ’ ಎಂದು ಸುಧಾಕರ್​ ಇಂದು ಹೇಳಿದ್ದರು. ’ಸಾವಿರಾರು ಜನರನ್ನು ಸೇರಿಸದಿರಿ. ನೀವೂ ಮಾಸ್ಕ್ ಧರಿಸಿ, ನಿಮ್ಮ ಅಭಿಮಾನಿಗಳಿಗೂ ಮಾಸ್ಕ್​ ಧರಿಸುವಂತೆ ಹೇಳಬೇಕು. ಎಲ್ಲರೂ ಕೋವಿಡ್​-19 ನಿಯಮಗಳನ್ನು ಪಾಲಿಸಬೇಕು. ಚಲನಚಿತ್ರ ತಾರೆಯರಿಗೆ ಇದು ನನ್ನ ಕಳಕಳಿಯ ಮನವಿ’ ಎಂದು ಹೇಳಿರುವ ಸುಧಾಕರ್, ಯಾವುದೇ ಸ್ಟಾರ್​ ನಟರ ಹೆಸರನ್ನೂ ಪ್ರಸ್ತಾಪಿಸಿರಲಿಲ್ಲ.

ಇದನ್ನೂ ಓದಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಚಿತ್ರದ ಪ್ರಚಾರ: ಮಂಡ್ಯದಲ್ಲಿ ಅಪ್ಪುಗೆ ಗ್ರ್ಯಾಂಡ್ ವೆಲಕಮ್

ಪ್ರಚಾರಕ್ಕಾಗಿ ಜನರ ಗುಂಪು ಸೇರಿಸುತ್ತಿರುವ ಸ್ಟಾರ್​ಗಳಿಗೆ ಕೋವಿಡ್​-19 ನಿಯಮಾವಳಿ ನೆನಪಿಸಿದ ಸುಧಾಕರ್​!

Published On - 7:29 pm, Wed, 24 March 21

ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ