AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್

ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್​ ಭೇಟಿ ಕೊಟ್ಟರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದಾರೆ.

ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್
TV9 Web
| Edited By: |

Updated on: Sep 05, 2021 | 9:10 PM

Share

ಡಾ. ರಾಜ್​ಕುಮಾರ್​ ಮೇರುನಟನಾದರೂ ಅಭಿಮಾನಿಗಳ ಜತೆ ಬೆರೆಯುತ್ತಿದ್ದರು. ಅವರು ಎಂದಿಗೂ ತಾವು ದೊಡ್ಡ ನಟ ಎನ್ನುವ ಭಾವನೆಯನ್ನು ತೋರಿಸಿಲ್ಲ. ಪುನೀತ್​ ರಾಜ್​ಕುಮಾರ್​ಗೂ ಇದೇ ಗುಣ ಬಂದಿದೆ. ಅವರು ಅಷ್ಟು ಎತ್ತರಕ್ಕೆ ಬೆಳೆದರೂ ಎಲ್ಲರ ಜತೆ ಬೆರೆಯುತ್ತಾರೆ. ಸಾಮಾನ್ಯರ ಜತೆ ತಾವು ಕೂಡ ಸಾಮಾನ್ಯರು ಎಂಬಂತೆ ಇದ್ದು ಬಿಡುತ್ತಾರೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಗುಡಿಸಲಲ್ಲಿ ಕುಳಿತು ಪುನೀತ್​ ಊಟ ಮಾಡಿರುವ ಫೋಟೋ ಈಗ ವೈರಲ್​ ಆಗುತ್ತಿದೆ.

ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್​ ಭೇಟಿ ಕೊಟ್ಟರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದಾರೆ. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹರ್ಲಾಪೂರ, ನಾರಾಯಣ ಪೇಟೆಗಳಿಗೆ ಪುನೀತ್​ ಭೇಟಿ ನೀಡಿದ್ದಾರೆ.

ಗಂಗಾವತಿಯಲ್ಲಿ ಸುತ್ತಾಟ ನಡೆಸಿ ಅವರು ವಿಜಯಪೂರಕ್ಕೆ ಹೋಗುವ ವೇಳೆಯಲ್ಲಿ ದಾರಿ ಪಕ್ಕದ ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಕುರಿ ಹಟ್ಟಿ ಪುನೀತ್​ ಕಣ್ಣಿಗೆ ಬಿದ್ದಿದೆ. ಅವರು ಅಲ್ಲಿಗೆ ಭೇಟಿ ನೀಡಿದ್ದಾರೆ. ಖುಷಿಯಿಂದಲೇ ಕುರಿಗಾಹಿಗಳ ಜೊತೆ ಪುನೀತ್​ ಮಾತುಕತೆ ನಡೆಸಿದ್ದಾರೆ. ಕಂಬಳಿ ಮೇಲೆ ಕುಳಿತು, ಅವರು ಊಟ ಮಾಡುವ ಸಂಗಟಿ (ರಾಗಿ ಮುದ್ದೆ), ಹಾಲು, ಮಜ್ಜಿಗೆ ಅನ್ನ ಊಟ ಮಾಡಿ ಸರಳತೆ ಮೆರೆದಿದ್ದಾರೆ.

ಆನೆಗೊಂದಿ ಸಮೀಪದ ಐತಿಹಾಸಿಕ ಸ್ಥಳಗಳ ವೀಕ್ಷಣೆ ಮಾಡಬೇಕು ಎಂದು ಪುನೀತ್​ ಬಯಸಿದ್ದರು. ಅದೇ ರೀತಿ ಸಣಾಪೂರ ಕೆರೆ, ಸಣಾಪೂರ ಫಾಲ್ಸ್, ಕಲ್ಲಿನ ಸೇತುವೆ ಸೇರಿದಂತೆ ಇತರ ಸ್ಥಳಗಳ ವೀಕ್ಷಣೆ ಮಾಡಿದ್ದಾರೆ. ಪುನೀತ್​ ಆಗಮಿಸಿದ ವಿಚಾರ ತಿಳಿದ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ನೆಚ್ಚಿನ ನಟನ ಜತೆ ಫೋಟೋ ತೆಗೆಸಿಕೊಂಡು ಅವರು ಸಂಭ್ರಮಿಸಿದರು. ಅಷ್ಟೇ ಅಲ್ಲದೆ ಸ್ಥಳೀಯ ಕಲಾವಿದರೊಂದಿಗೆ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ಪುನೀತ್​​ ನೋಡಿ ಮೆಚ್ಚಿದ್ರು ಕನ್ನಡದ ‘ಓಲ್ಡ್​ ಮಾಂಕ್​’ ಟ್ರೇಲರ್​; ಇದರಲ್ಲಿದೆ ಹತ್ತಾರು ವಿಶೇಷತೆ

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​

Follow Us
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ