AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್

ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್​ ಭೇಟಿ ಕೊಟ್ಟರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದಾರೆ.

ಕುರಿಗಾಹಿಗಳ ಜತೆ ಕಂಬಳಿ ಮೇಲೆ ಕುಳಿತು ಮಜ್ಜಿಗೆ ಊಟ ಮಾಡಿದ ಪುನೀತ್​ ರಾಜ್​ಕುಮಾರ್​; ಫೋಟೋ ವೈರಲ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 05, 2021 | 9:10 PM

Share

ಡಾ. ರಾಜ್​ಕುಮಾರ್​ ಮೇರುನಟನಾದರೂ ಅಭಿಮಾನಿಗಳ ಜತೆ ಬೆರೆಯುತ್ತಿದ್ದರು. ಅವರು ಎಂದಿಗೂ ತಾವು ದೊಡ್ಡ ನಟ ಎನ್ನುವ ಭಾವನೆಯನ್ನು ತೋರಿಸಿಲ್ಲ. ಪುನೀತ್​ ರಾಜ್​ಕುಮಾರ್​ಗೂ ಇದೇ ಗುಣ ಬಂದಿದೆ. ಅವರು ಅಷ್ಟು ಎತ್ತರಕ್ಕೆ ಬೆಳೆದರೂ ಎಲ್ಲರ ಜತೆ ಬೆರೆಯುತ್ತಾರೆ. ಸಾಮಾನ್ಯರ ಜತೆ ತಾವು ಕೂಡ ಸಾಮಾನ್ಯರು ಎಂಬಂತೆ ಇದ್ದು ಬಿಡುತ್ತಾರೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಗುಡಿಸಲಲ್ಲಿ ಕುಳಿತು ಪುನೀತ್​ ಊಟ ಮಾಡಿರುವ ಫೋಟೋ ಈಗ ವೈರಲ್​ ಆಗುತ್ತಿದೆ.

ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್​ ಭೇಟಿ ಕೊಟ್ಟರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದಾರೆ. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹರ್ಲಾಪೂರ, ನಾರಾಯಣ ಪೇಟೆಗಳಿಗೆ ಪುನೀತ್​ ಭೇಟಿ ನೀಡಿದ್ದಾರೆ.

ಗಂಗಾವತಿಯಲ್ಲಿ ಸುತ್ತಾಟ ನಡೆಸಿ ಅವರು ವಿಜಯಪೂರಕ್ಕೆ ಹೋಗುವ ವೇಳೆಯಲ್ಲಿ ದಾರಿ ಪಕ್ಕದ ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಕುರಿ ಹಟ್ಟಿ ಪುನೀತ್​ ಕಣ್ಣಿಗೆ ಬಿದ್ದಿದೆ. ಅವರು ಅಲ್ಲಿಗೆ ಭೇಟಿ ನೀಡಿದ್ದಾರೆ. ಖುಷಿಯಿಂದಲೇ ಕುರಿಗಾಹಿಗಳ ಜೊತೆ ಪುನೀತ್​ ಮಾತುಕತೆ ನಡೆಸಿದ್ದಾರೆ. ಕಂಬಳಿ ಮೇಲೆ ಕುಳಿತು, ಅವರು ಊಟ ಮಾಡುವ ಸಂಗಟಿ (ರಾಗಿ ಮುದ್ದೆ), ಹಾಲು, ಮಜ್ಜಿಗೆ ಅನ್ನ ಊಟ ಮಾಡಿ ಸರಳತೆ ಮೆರೆದಿದ್ದಾರೆ.

ಆನೆಗೊಂದಿ ಸಮೀಪದ ಐತಿಹಾಸಿಕ ಸ್ಥಳಗಳ ವೀಕ್ಷಣೆ ಮಾಡಬೇಕು ಎಂದು ಪುನೀತ್​ ಬಯಸಿದ್ದರು. ಅದೇ ರೀತಿ ಸಣಾಪೂರ ಕೆರೆ, ಸಣಾಪೂರ ಫಾಲ್ಸ್, ಕಲ್ಲಿನ ಸೇತುವೆ ಸೇರಿದಂತೆ ಇತರ ಸ್ಥಳಗಳ ವೀಕ್ಷಣೆ ಮಾಡಿದ್ದಾರೆ. ಪುನೀತ್​ ಆಗಮಿಸಿದ ವಿಚಾರ ತಿಳಿದ ಅಭಿಮಾನಿಗಳು ಅಲ್ಲಿ ನೆರೆದಿದ್ದರು. ನೆಚ್ಚಿನ ನಟನ ಜತೆ ಫೋಟೋ ತೆಗೆಸಿಕೊಂಡು ಅವರು ಸಂಭ್ರಮಿಸಿದರು. ಅಷ್ಟೇ ಅಲ್ಲದೆ ಸ್ಥಳೀಯ ಕಲಾವಿದರೊಂದಿಗೆ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: ಪುನೀತ್​​ ನೋಡಿ ಮೆಚ್ಚಿದ್ರು ಕನ್ನಡದ ‘ಓಲ್ಡ್​ ಮಾಂಕ್​’ ಟ್ರೇಲರ್​; ಇದರಲ್ಲಿದೆ ಹತ್ತಾರು ವಿಶೇಷತೆ

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ