AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಗ ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಅವರು ಸಕ್ರೆಬೈಲ್​ಗೆ ಭೇಟಿ ಕೊಟ್ಟಿದ್ದಾರೆ.

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​
ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 01, 2021 | 9:58 PM

Share

ನಟ ಪುನೀತ್​ ರಾಜ್​ಕುಮಾರ್​ ಅವರು ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಅವರು ಶಿವಮೊಗ್ಗ ತಾಲೂಕಿನ ಸಕ್ರೆಬೈಲಿನ ಆನೆ ಬಿಡಾರಕ್ಕೆ ಇಂದು (ಸೆಪ್ಟೆಂಬರ್​ 1) ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ನೋಡೋಕೆ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಅಷ್ಟಕ್ಕೂ ಅವರು ಸಕ್ರೆಬೈಲಿಗೆ ತೆರಳೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.  

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಗ ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಅವರು ಸಕ್ರೆಬೈಲ್​ಗೆ ಭೇಟಿ ಕೊಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ಆಗಮಿಸುತ್ತಿರುವ ವಿಚಾರವನ್ನು ತಿಳಿದಿದ್ದ ಅಭಿಮಾನಿಗಳು ಅಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದರು. ಸುಮಾರು ಎರಡು ಗಂಟೆ ಕಾಲ ಪುನೀತ್​ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.

ಓಪನ್ ಜೀಪ್​ನಲ್ಲಿ ಪುನೀತ್​ ಆಗಮಿಸಿದ್ದಾರೆ. ಆನೆಗಳನ್ನು ಅವರು ಮುದ್ದಾಡುವ ದೃಶ್ಯ, ಕುಂತಿ ಹಾಗೂ ಧನುಷ್ ಹೆಸರಿನ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಇನ್ನು, ಪುನೀತ್​ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಅಭಿಮಾನಗಳ ಕೋರಿಕೆಗೆ ಅಪ್ಪು ಮಣಿದಿದ್ದಾರೆ. ಶೂಟಿಂಗ್​​ಗೆ ಬ್ರೇಕ್ ಕೊಟ್ಟು ಅವರಿಗೆ ದರ್ಶನ ನೀಡಿದ್ದಾರೆ. ಈ ವೇಳೆ ಆಭಿಮಾನಿಗಳಿಗೆ ಕೈ ಮುಗಿದು  ಕೃತಜ್ಞತೆ ಸಲ್ಲಿಸಿದ್ದಾರೆ ಪುನೀತ್. ಕೆಲವರು ಪುನೀತ್ ರಾಜ್​​ಕುಮಾರ್ ಜತೆ ಫೋಟೋ ತೆಗೆಸಿಕೊಂಡಿದ್ದಾರೆ.

ಇತ್ತೀಚೆಗೆ ಕೊವಿಡ್​ ಬಗ್ಗೆ ಪುನೀತ್​ ಜಾಗೃತಿ ಮೂಡಿಸಿದ್ದರು. ಈ ಬಗ್ಗೆ ವಿಡಿಯೋ ಸಂದೇಶ ನೀಡಿದ್ದ ಪುನೀತ್​ ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದರು.

ಇದನ್ನೂ ಓದಿ: ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

Published On - 9:36 pm, Wed, 1 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ