AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಗ ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಅವರು ಸಕ್ರೆಬೈಲ್​ಗೆ ಭೇಟಿ ಕೊಟ್ಟಿದ್ದಾರೆ.

ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​
ಸಕ್ರೆಬೈಲು ಆನೆ ಬಿಡಾರಕ್ಕೆ ನಟ ಪುನೀತ್‌ರಾಜ್‌ಕುಮಾರ್ ಭೇಟಿ; ಅಭಿಮಾನಿಗಳಿಗೆ ದರ್ಶನ ನೀಡಿದ ಪವರ್​ಸ್ಟಾರ್​
TV9 Web
| Edited By: |

Updated on:Sep 01, 2021 | 9:58 PM

Share

ನಟ ಪುನೀತ್​ ರಾಜ್​ಕುಮಾರ್​ ಅವರು ‘ಜೇಮ್ಸ್​’ ಹಾಗೂ ‘ದ್ವಿತ್ವ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಮಧ್ಯೆ ಅವರು ಶಿವಮೊಗ್ಗ ತಾಲೂಕಿನ ಸಕ್ರೆಬೈಲಿನ ಆನೆ ಬಿಡಾರಕ್ಕೆ ಇಂದು (ಸೆಪ್ಟೆಂಬರ್​ 1) ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ನೋಡೋಕೆ ಅಭಿಮಾನಿಗಳು ಮುತ್ತಿಗೆ ಹಾಕಿದ್ದಾರೆ. ಅಷ್ಟಕ್ಕೂ ಅವರು ಸಕ್ರೆಬೈಲಿಗೆ ತೆರಳೋಕೆ ಕಾರಣವೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.  

ಪುನೀತ್ ರಾಜ್​ಕುಮಾರ್​ ಸರ್ಕಾರದ ಅನೇಕ ಡಾಕ್ಯುಮೆಂಟರಿ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ. ಈಗ ಆನೆಗೆ ಸಂಬಂಧಿಸಿದ ಸರ್ಕಾರಿ ಡಾಕ್ಯುಮೆಂಟರಿ ಶೂಟಿಂಗ್ ಹಿನ್ನೆಲೆಯಲ್ಲಿ ಅವರು ಸಕ್ರೆಬೈಲ್​ಗೆ ಭೇಟಿ ಕೊಟ್ಟಿದ್ದಾರೆ. ಪುನೀತ್​ ರಾಜ್​ಕುಮಾರ್​ ಆಗಮಿಸುತ್ತಿರುವ ವಿಚಾರವನ್ನು ತಿಳಿದಿದ್ದ ಅಭಿಮಾನಿಗಳು ಅಲ್ಲಿ ನೂರಾರು ಸಂಖ್ಯೆಯಲ್ಲಿ ನೆರೆದಿದ್ದರು. ಸುಮಾರು ಎರಡು ಗಂಟೆ ಕಾಲ ಪುನೀತ್​ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.

ಓಪನ್ ಜೀಪ್​ನಲ್ಲಿ ಪುನೀತ್​ ಆಗಮಿಸಿದ್ದಾರೆ. ಆನೆಗಳನ್ನು ಅವರು ಮುದ್ದಾಡುವ ದೃಶ್ಯ, ಕುಂತಿ ಹಾಗೂ ಧನುಷ್ ಹೆಸರಿನ ಆನೆಗೆ ಆಹಾರ ನೀಡುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಇನ್ನು, ಪುನೀತ್​ ಅವರನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಈ ವೇಳೆ ಅಭಿಮಾನಗಳ ಕೋರಿಕೆಗೆ ಅಪ್ಪು ಮಣಿದಿದ್ದಾರೆ. ಶೂಟಿಂಗ್​​ಗೆ ಬ್ರೇಕ್ ಕೊಟ್ಟು ಅವರಿಗೆ ದರ್ಶನ ನೀಡಿದ್ದಾರೆ. ಈ ವೇಳೆ ಆಭಿಮಾನಿಗಳಿಗೆ ಕೈ ಮುಗಿದು  ಕೃತಜ್ಞತೆ ಸಲ್ಲಿಸಿದ್ದಾರೆ ಪುನೀತ್. ಕೆಲವರು ಪುನೀತ್ ರಾಜ್​​ಕುಮಾರ್ ಜತೆ ಫೋಟೋ ತೆಗೆಸಿಕೊಂಡಿದ್ದಾರೆ.

ಇತ್ತೀಚೆಗೆ ಕೊವಿಡ್​ ಬಗ್ಗೆ ಪುನೀತ್​ ಜಾಗೃತಿ ಮೂಡಿಸಿದ್ದರು. ಈ ಬಗ್ಗೆ ವಿಡಿಯೋ ಸಂದೇಶ ನೀಡಿದ್ದ ಪುನೀತ್​ ‘ಕೊವಿಡ್​ ಎರಡನೇ ಅಲೆ ತುಂಬಾ ಗಂಭೀರ ವಿಚಾರ. ಮಾಸ್ಕ್​​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೊವಿಡ್​​ನಿಂದ ದೂರ ಇರಬಹುದು. ನಿಮ್ಮ ಸರದಿ ಬಂದಾಗ ವ್ಯಾಕ್ಸಿನ್​ ಹಾಕಿಸಿಕೊಳ್ಳಿ. ನಮಗೆ ಕೊವಿಡ್​ ಬಂದರೆ ಭಯ ಬೇಡ. ಹತ್ತಿರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ ಕೊಡಿ. ಸರ್ಕಾರ ಹೇಳಿದ ನಿಯಮ ಪಾಲಿಸುತ್ತಾ ಕೊವಿಡ್​ ವಿರುದ್ಧ ಗೆಲ್ಲೋಣ’ ಎಂದು ಪುನೀತ್​ ಕರೆ ನೀಡಿದ್ದರು.

ಇದನ್ನೂ ಓದಿ: ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

Published On - 9:36 pm, Wed, 1 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ