AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಆರ್​ಕೆ ಪ್ರೊಡಕ್ಷನ್​ ಬಗ್ಗೆ ಪುನೀತ್​ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ

ಪುನೀತ್​ ‘ಜೇಮ್ಸ್​’ ಮತ್ತು ‘ದ್ವಿತ್ವ’ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈ ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗಿತ್ತು. ಇದಾದ ನಂತರ ಪುನೀತ್​ ಅವರು ಜೇಕಬ್‌ ವರ್ಗೀಸ್‌  ಜತೆ ಮತ್ತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿತ್ತು.

ಪಿಆರ್​ಕೆ ಪ್ರೊಡಕ್ಷನ್​ ಬಗ್ಗೆ ಪುನೀತ್​ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Oct 29, 2021 | 4:15 PM

Share

ಪುನೀತ್​ ರಾಜ್​ಕುಮಾರ್​ ಅವರು ಪಿಆರ್​ಕೆ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆಯನ್ನು ಬಹಳ ಪ್ರೀತಿಯಿಂದ ಆರಂಭಿಸಿದ್ದರು. ​ಈ ಬ್ಯಾನರ್​ ಅಡಿಯಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಿದ್ದರು. ಸಾಕಷ್ಟು ಸಿನಿಮಾಗಳನ್ನು ಪಿಆರ್​ಕೆ ಬ್ಯಾನರ್​ ನಿರ್ಮಾಣ ಮಾಡಿದೆ. ಆದರೆ, ಈವರೆಗೆ ಅವರು ತಮ್ಮದೇ ಬ್ಯಾನರ್​ ಸಿನಿಮಾದಲ್ಲಿ ನಟಿಸಿರಲಿಲ್ಲ. ಈಗ ಇದಕ್ಕೆ ಕಾಲ ಕೂಡಿ ಬಂದಿದೆ ಎನ್ನಲಾಗಿತ್ತು. ಅದು ಈಡೇರುವ ಮೊದಲೇ ಪುನೀತ್​ ಮೃತಪಟ್ಟಿದ್ದಾರೆ.

ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಮೂಡಿ ಬರುವ ಚಿತ್ರದಲ್ಲಿ ಪುನೀತ್​ ನಟಿಸಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಅಷ್ಟೇ ಅಲ್ಲ, ಪುನೀತ್​ ಕೂಡ ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಅದು ಈವರೆಗೆ ಸಾಧ್ಯವಾಗಿರಲಿಲ್ಲ. ಈಗ ಈ ಕನಸು ನನಸಾಗುವ ಕಾಲ ಸನಿಹವಾಗಿದೆ ಎನ್ನುವಾಗಲೇ ಅವರು ದೂರವಾಗಿದ್ದಾರೆ.

ಪುನೀತ್​ ‘ಜೇಮ್ಸ್​’ ಮತ್ತು ‘ದ್ವಿತ್ವ’ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈ ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗಿತ್ತು. ಇದಾದ ನಂತರ ಪುನೀತ್​ ಅವರು ಜೇಕಬ್‌ ವರ್ಗೀಸ್‌  ಜತೆ ಮತ್ತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿತ್ತು. ‘ಸವಾರಿ’, ‘ಪೃಥ್ವಿ’ ಮೊದಲಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಜೇಕಬ್​ಗೆ ಇದೆ. ಪುನೀತ್​ ಜತೆ ಜೇಕಬ್​ ಕೈ ಜೋಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ಆದರೆ, ಅದು ಈಗ ಕನಸಾಗಿಯೇ ಉಳಿದಿದೆ.

‘ಪೃಥ್ವಿ’ ಸಿನಿಮಾದಲ್ಲಿ ಪುನೀತ್​ ಹಾಗೂ ಜೇಕಬ್​ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾದಲ್ಲಿ ಐಎಎಸ್​ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇದೇ ರೀತಿಯ ಕಥೆಯನ್ನು ಜೇಕಬ್​ ಹೆಣೆದಿದ್ದರು. ಪಿಎಆರ್​ಕೆ ಬ್ಯಾನರ್​ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ ಎನ್ನಲಾಗಿತ್ತು.

ಪುನೀತ್ ರಾಜ್​ಕುಮಾರ್ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!