AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಆರ್​ಕೆ ಪ್ರೊಡಕ್ಷನ್​ ಬಗ್ಗೆ ಪುನೀತ್​ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ

ಪುನೀತ್​ ‘ಜೇಮ್ಸ್​’ ಮತ್ತು ‘ದ್ವಿತ್ವ’ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈ ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗಿತ್ತು. ಇದಾದ ನಂತರ ಪುನೀತ್​ ಅವರು ಜೇಕಬ್‌ ವರ್ಗೀಸ್‌  ಜತೆ ಮತ್ತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿತ್ತು.

ಪಿಆರ್​ಕೆ ಪ್ರೊಡಕ್ಷನ್​ ಬಗ್ಗೆ ಪುನೀತ್​ ಕಂಡ ಆ ಕನಸು ಕೊನೆಗೂ ಈಡೇರಲೇ ಇಲ್ಲ
ಪುನೀತ್ ರಾಜ್​ಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 29, 2021 | 4:15 PM

Share

ಪುನೀತ್​ ರಾಜ್​ಕುಮಾರ್​ ಅವರು ಪಿಆರ್​ಕೆ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆಯನ್ನು ಬಹಳ ಪ್ರೀತಿಯಿಂದ ಆರಂಭಿಸಿದ್ದರು. ​ಈ ಬ್ಯಾನರ್​ ಅಡಿಯಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವರು ಅವಕಾಶ ನೀಡಿದ್ದರು. ಸಾಕಷ್ಟು ಸಿನಿಮಾಗಳನ್ನು ಪಿಆರ್​ಕೆ ಬ್ಯಾನರ್​ ನಿರ್ಮಾಣ ಮಾಡಿದೆ. ಆದರೆ, ಈವರೆಗೆ ಅವರು ತಮ್ಮದೇ ಬ್ಯಾನರ್​ ಸಿನಿಮಾದಲ್ಲಿ ನಟಿಸಿರಲಿಲ್ಲ. ಈಗ ಇದಕ್ಕೆ ಕಾಲ ಕೂಡಿ ಬಂದಿದೆ ಎನ್ನಲಾಗಿತ್ತು. ಅದು ಈಡೇರುವ ಮೊದಲೇ ಪುನೀತ್​ ಮೃತಪಟ್ಟಿದ್ದಾರೆ.

ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಅಡಿಯಲ್ಲಿ ಮೂಡಿ ಬರುವ ಚಿತ್ರದಲ್ಲಿ ಪುನೀತ್​ ನಟಿಸಬೇಕು ಎಂಬುದು ಅಭಿಮಾನಿಗಳ ಕನಸಾಗಿತ್ತು. ಅಷ್ಟೇ ಅಲ್ಲ, ಪುನೀತ್​ ಕೂಡ ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಅದು ಈವರೆಗೆ ಸಾಧ್ಯವಾಗಿರಲಿಲ್ಲ. ಈಗ ಈ ಕನಸು ನನಸಾಗುವ ಕಾಲ ಸನಿಹವಾಗಿದೆ ಎನ್ನುವಾಗಲೇ ಅವರು ದೂರವಾಗಿದ್ದಾರೆ.

ಪುನೀತ್​ ‘ಜೇಮ್ಸ್​’ ಮತ್ತು ‘ದ್ವಿತ್ವ’ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಈ ಎರಡೂ ಸಿನಿಮಾಗಳ ಕೆಲಸಗಳು ಭರದಿಂದ ಸಾಗಿತ್ತು. ಇದಾದ ನಂತರ ಪುನೀತ್​ ಅವರು ಜೇಕಬ್‌ ವರ್ಗೀಸ್‌  ಜತೆ ಮತ್ತೆ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿತ್ತು. ‘ಸವಾರಿ’, ‘ಪೃಥ್ವಿ’ ಮೊದಲಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ ಖ್ಯಾತಿ ಜೇಕಬ್​ಗೆ ಇದೆ. ಪುನೀತ್​ ಜತೆ ಜೇಕಬ್​ ಕೈ ಜೋಡಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ಆದರೆ, ಅದು ಈಗ ಕನಸಾಗಿಯೇ ಉಳಿದಿದೆ.

‘ಪೃಥ್ವಿ’ ಸಿನಿಮಾದಲ್ಲಿ ಪುನೀತ್​ ಹಾಗೂ ಜೇಕಬ್​ ಒಟ್ಟಾಗಿ ಕೆಲಸ ಮಾಡಿದ್ದರು. ಈ ಸಿನಿಮಾದಲ್ಲಿ ಐಎಎಸ್​ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇದೇ ರೀತಿಯ ಕಥೆಯನ್ನು ಜೇಕಬ್​ ಹೆಣೆದಿದ್ದರು. ಪಿಎಆರ್​ಕೆ ಬ್ಯಾನರ್​ ಅಡಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ ಎನ್ನಲಾಗಿತ್ತು.

ಪುನೀತ್ ರಾಜ್​ಕುಮಾರ್ ನಿಧನ: ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Puneeth Rajkumar: ಶಿವಣ್ಣನ ಎದುರು ಪುನೀತ್​ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್