AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ
ಪುನೀತ್​-ಪಾರ್ವತಮ್ಮ
TV9 Web
| Edited By: |

Updated on: Oct 31, 2021 | 3:47 PM

Share

ಪುನೀತ್ ರಾಜ್​ಕುಮಾರ್​ ಅವರು ಸ್ಯಾಂಡಲ್​​ವುಡ್​ಗೆ ನೀಡಿದ ಕೊಡುಗೆ ಒಂದೆರಡಲ್ಲ. ಸ್ಟಾರ್​ ನಟನ ಮಗನಾಗಿ ಚಿತ್ರರಂಗಕ್ಕೆ ಬಂದರೂ ಸ್ವಂತ ಐಡೆಂಟಿಟಿ ಹೊಂದಿದ್ದರು. ಸಾಮಾಜಿಕ ಕೆಲಸಗಳ ಮೂಲಕವೂ ಅವರು ಹೆಚ್ಚು ಗುರುತಿಸಿಕೊಂಡಿದ್ದರು. ತಾಯಿ, ಖ್ಯಾತ ನಿರ್ಮಾಪಕಿ ಪಾರ್ವತಮ್ಮ ಬಗ್ಗೆ ಅವರು ಅಪಾರ ಪ್ರೀತಿ ಹೊಂದಿದ್ದರು. ಅಷ್ಟೇ ಅಲ್ಲ ತಾಯಿ ಬಗ್ಗೆ ಒಂದು ಮಹಾನ್​ ಕನಸನ್ನು ಕೂಡ ಕಂಡಿದ್ದರು. ಆದರೆ, ಪುನೀತ್​ ಜತೆ ಅದೂ ಈಗ ಮಣ್ಣಾಗಿದೆ.

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ. ಅವರ ದಿಟ್ಟತನ ಅನೇಕರಿಗೆ ಇಷ್ಟವಾಗಿತ್ತು. ಅವರ ಬಗ್ಗೆ ಪುಸ್ತಕ ಬರೆಯಬೇಕು ಎಂಬುದು ಪುನೀತ್​ ಕನಸಾಗಿತ್ತು. ಆದರೆ, ಅವರು ನಟನೆ, ನಿರ್ಮಾಣ ಕೆಲಸಗಳಲ್ಲಿ ಬ್ಯುಸಿಯಾದರು. ಹೀಗಾಗಿ, ಇದಕ್ಕೆ ಅವಕಾಶ ಸಿಗಲೇ ಇಲ್ಲ. ಇದರಿಂದ ಇದು ಕನಸಾಗಿಯೇ ಉಳಿದಿದೆ.

ತಾಯಿ ಪಾರ್ವತಮ್ಮ ಸಾಧನೆಗಳ ಕುರಿತು ಪುಸ್ತಕವೊಂದನ್ನು ಬರೆಯುವ ಯೋಜನೆಯನ್ನು ಪುನೀತ್ ಹಾಕಿಕೊಂಡಿದ್ದರು. ಈ ಬಗ್ಗೆ ಖುದ್ದು ಪುನೀತ್ ಮಾಹಿತಿ ನೀಡಿದ್ದರು. ಸುದ್ದಿಗೋಷ್ಠಿ ನಂತರ ಪತ್ರಕರ್ತರ ಜತೆ ಅವರು ಮಾತನಾಡುತ್ತಾ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ಅಮ್ಮನ ಸಾಧನೆ ಅಪಾರ. ಅವರು ದೊಡ್ಡ ನಿರ್ಮಾಪಕಿಯಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದೇಕೆ? ಈ ಜವಾಬ್ದಾರಿಯನ್ನು ಏಕೆ ತೆಗೆದುಕೊಳ್ಳಬೇಕಾಯಿತು? ಎಂಬಿತ್ಯಾದಿ ವಿಚಾರಗಳು ಜನರಿಗೆ ತಿಳಿಯಬೇಕಿದೆ. ಈ ಬಗ್ಗೆ ಅವರು ಹೇಳಿಕೊಂಡ ಕೆಲವಷ್ಟು ಮಾಹಿತಿಗಳು ಇವೆ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಅವರ ಬಯೋಗ್ರಫಿ ಬರೆಯಬೇಕೆಂಬ ಆಸೆಯಿದೆ. ಮುಂದಿನ ದಿನಗಳಲ್ಲಿ ಅದನ್ನು ಕಾರ್ಯರೂಪಕ್ಕೆ ತರುತ್ತೇನೆ’ ಎಂದು ಹೇಳಿದ್ದರು. ಆದರೆ, ಅದು ಈಗ ಕನಸಾಗಿಯೇ ಉಳಿದಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?