AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ
ಪುನೀತ್​-ಪಾರ್ವತಮ್ಮ
TV9 Web
| Edited By: |

Updated on: Oct 31, 2021 | 3:47 PM

Share

ಪುನೀತ್ ರಾಜ್​ಕುಮಾರ್​ ಅವರು ಸ್ಯಾಂಡಲ್​​ವುಡ್​ಗೆ ನೀಡಿದ ಕೊಡುಗೆ ಒಂದೆರಡಲ್ಲ. ಸ್ಟಾರ್​ ನಟನ ಮಗನಾಗಿ ಚಿತ್ರರಂಗಕ್ಕೆ ಬಂದರೂ ಸ್ವಂತ ಐಡೆಂಟಿಟಿ ಹೊಂದಿದ್ದರು. ಸಾಮಾಜಿಕ ಕೆಲಸಗಳ ಮೂಲಕವೂ ಅವರು ಹೆಚ್ಚು ಗುರುತಿಸಿಕೊಂಡಿದ್ದರು. ತಾಯಿ, ಖ್ಯಾತ ನಿರ್ಮಾಪಕಿ ಪಾರ್ವತಮ್ಮ ಬಗ್ಗೆ ಅವರು ಅಪಾರ ಪ್ರೀತಿ ಹೊಂದಿದ್ದರು. ಅಷ್ಟೇ ಅಲ್ಲ ತಾಯಿ ಬಗ್ಗೆ ಒಂದು ಮಹಾನ್​ ಕನಸನ್ನು ಕೂಡ ಕಂಡಿದ್ದರು. ಆದರೆ, ಪುನೀತ್​ ಜತೆ ಅದೂ ಈಗ ಮಣ್ಣಾಗಿದೆ.

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ. ಅವರ ದಿಟ್ಟತನ ಅನೇಕರಿಗೆ ಇಷ್ಟವಾಗಿತ್ತು. ಅವರ ಬಗ್ಗೆ ಪುಸ್ತಕ ಬರೆಯಬೇಕು ಎಂಬುದು ಪುನೀತ್​ ಕನಸಾಗಿತ್ತು. ಆದರೆ, ಅವರು ನಟನೆ, ನಿರ್ಮಾಣ ಕೆಲಸಗಳಲ್ಲಿ ಬ್ಯುಸಿಯಾದರು. ಹೀಗಾಗಿ, ಇದಕ್ಕೆ ಅವಕಾಶ ಸಿಗಲೇ ಇಲ್ಲ. ಇದರಿಂದ ಇದು ಕನಸಾಗಿಯೇ ಉಳಿದಿದೆ.

ತಾಯಿ ಪಾರ್ವತಮ್ಮ ಸಾಧನೆಗಳ ಕುರಿತು ಪುಸ್ತಕವೊಂದನ್ನು ಬರೆಯುವ ಯೋಜನೆಯನ್ನು ಪುನೀತ್ ಹಾಕಿಕೊಂಡಿದ್ದರು. ಈ ಬಗ್ಗೆ ಖುದ್ದು ಪುನೀತ್ ಮಾಹಿತಿ ನೀಡಿದ್ದರು. ಸುದ್ದಿಗೋಷ್ಠಿ ನಂತರ ಪತ್ರಕರ್ತರ ಜತೆ ಅವರು ಮಾತನಾಡುತ್ತಾ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ಅಮ್ಮನ ಸಾಧನೆ ಅಪಾರ. ಅವರು ದೊಡ್ಡ ನಿರ್ಮಾಪಕಿಯಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದೇಕೆ? ಈ ಜವಾಬ್ದಾರಿಯನ್ನು ಏಕೆ ತೆಗೆದುಕೊಳ್ಳಬೇಕಾಯಿತು? ಎಂಬಿತ್ಯಾದಿ ವಿಚಾರಗಳು ಜನರಿಗೆ ತಿಳಿಯಬೇಕಿದೆ. ಈ ಬಗ್ಗೆ ಅವರು ಹೇಳಿಕೊಂಡ ಕೆಲವಷ್ಟು ಮಾಹಿತಿಗಳು ಇವೆ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಅವರ ಬಯೋಗ್ರಫಿ ಬರೆಯಬೇಕೆಂಬ ಆಸೆಯಿದೆ. ಮುಂದಿನ ದಿನಗಳಲ್ಲಿ ಅದನ್ನು ಕಾರ್ಯರೂಪಕ್ಕೆ ತರುತ್ತೇನೆ’ ಎಂದು ಹೇಳಿದ್ದರು. ಆದರೆ, ಅದು ಈಗ ಕನಸಾಗಿಯೇ ಉಳಿದಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ