AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ.

ತಾಯಿ ಬಗ್ಗೆ ಮಹಾನ್​ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ
ಪುನೀತ್​-ಪಾರ್ವತಮ್ಮ
TV9 Web
| Edited By: |

Updated on: Oct 31, 2021 | 3:47 PM

Share

ಪುನೀತ್ ರಾಜ್​ಕುಮಾರ್​ ಅವರು ಸ್ಯಾಂಡಲ್​​ವುಡ್​ಗೆ ನೀಡಿದ ಕೊಡುಗೆ ಒಂದೆರಡಲ್ಲ. ಸ್ಟಾರ್​ ನಟನ ಮಗನಾಗಿ ಚಿತ್ರರಂಗಕ್ಕೆ ಬಂದರೂ ಸ್ವಂತ ಐಡೆಂಟಿಟಿ ಹೊಂದಿದ್ದರು. ಸಾಮಾಜಿಕ ಕೆಲಸಗಳ ಮೂಲಕವೂ ಅವರು ಹೆಚ್ಚು ಗುರುತಿಸಿಕೊಂಡಿದ್ದರು. ತಾಯಿ, ಖ್ಯಾತ ನಿರ್ಮಾಪಕಿ ಪಾರ್ವತಮ್ಮ ಬಗ್ಗೆ ಅವರು ಅಪಾರ ಪ್ರೀತಿ ಹೊಂದಿದ್ದರು. ಅಷ್ಟೇ ಅಲ್ಲ ತಾಯಿ ಬಗ್ಗೆ ಒಂದು ಮಹಾನ್​ ಕನಸನ್ನು ಕೂಡ ಕಂಡಿದ್ದರು. ಆದರೆ, ಪುನೀತ್​ ಜತೆ ಅದೂ ಈಗ ಮಣ್ಣಾಗಿದೆ.

ಪಾರ್ವತಮ್ಮ ಅವರು ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಿ ಭೇಷ್​ ಎನಿಸಿಕೊಂಡಿದ್ದಾರೆ. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಸಿನಿಮಾ ನಿರ್ಮಾಣದಲ್ಲಿ ಅವರು ಎಲ್ಲರಿಗೂ ಮಾದರಿ. ಅವರ ದಿಟ್ಟತನ ಅನೇಕರಿಗೆ ಇಷ್ಟವಾಗಿತ್ತು. ಅವರ ಬಗ್ಗೆ ಪುಸ್ತಕ ಬರೆಯಬೇಕು ಎಂಬುದು ಪುನೀತ್​ ಕನಸಾಗಿತ್ತು. ಆದರೆ, ಅವರು ನಟನೆ, ನಿರ್ಮಾಣ ಕೆಲಸಗಳಲ್ಲಿ ಬ್ಯುಸಿಯಾದರು. ಹೀಗಾಗಿ, ಇದಕ್ಕೆ ಅವಕಾಶ ಸಿಗಲೇ ಇಲ್ಲ. ಇದರಿಂದ ಇದು ಕನಸಾಗಿಯೇ ಉಳಿದಿದೆ.

ತಾಯಿ ಪಾರ್ವತಮ್ಮ ಸಾಧನೆಗಳ ಕುರಿತು ಪುಸ್ತಕವೊಂದನ್ನು ಬರೆಯುವ ಯೋಜನೆಯನ್ನು ಪುನೀತ್ ಹಾಕಿಕೊಂಡಿದ್ದರು. ಈ ಬಗ್ಗೆ ಖುದ್ದು ಪುನೀತ್ ಮಾಹಿತಿ ನೀಡಿದ್ದರು. ಸುದ್ದಿಗೋಷ್ಠಿ ನಂತರ ಪತ್ರಕರ್ತರ ಜತೆ ಅವರು ಮಾತನಾಡುತ್ತಾ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ಅಮ್ಮನ ಸಾಧನೆ ಅಪಾರ. ಅವರು ದೊಡ್ಡ ನಿರ್ಮಾಪಕಿಯಾಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಆದರೆ ಅವರು ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದೇಕೆ? ಈ ಜವಾಬ್ದಾರಿಯನ್ನು ಏಕೆ ತೆಗೆದುಕೊಳ್ಳಬೇಕಾಯಿತು? ಎಂಬಿತ್ಯಾದಿ ವಿಚಾರಗಳು ಜನರಿಗೆ ತಿಳಿಯಬೇಕಿದೆ. ಈ ಬಗ್ಗೆ ಅವರು ಹೇಳಿಕೊಂಡ ಕೆಲವಷ್ಟು ಮಾಹಿತಿಗಳು ಇವೆ. ಈ ಎಲ್ಲ ಅಂಶಗಳನ್ನು ಇಟ್ಟುಕೊಂಡು ಅವರ ಬಯೋಗ್ರಫಿ ಬರೆಯಬೇಕೆಂಬ ಆಸೆಯಿದೆ. ಮುಂದಿನ ದಿನಗಳಲ್ಲಿ ಅದನ್ನು ಕಾರ್ಯರೂಪಕ್ಕೆ ತರುತ್ತೇನೆ’ ಎಂದು ಹೇಳಿದ್ದರು. ಆದರೆ, ಅದು ಈಗ ಕನಸಾಗಿಯೇ ಉಳಿದಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ