AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗ್ತೀನಿ ಎಂದಾಗ ದಾನಿಶ್​ಗೆ ಪುನೀತ್​ ಕಡೆಯಿಂದ ಸಿಕ್ಕಿತ್ತು ವಿಶೇಷ ಟಿಪ್ಸ್

ದಾನಿಶ್​ ಸೇಠ್​ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾವನ್ನು ‘ಪಿಆರ್​ಕೆ ಪ್ರೊಡಕ್ಷನ್​’ ನಿರ್ಮಾಣ ಮಾಡಿದೆ. ಪಿಆರ್​ಕೆ ಜತೆ ಅವರು ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ.

ಮದುವೆ ಆಗ್ತೀನಿ ಎಂದಾಗ ದಾನಿಶ್​ಗೆ ಪುನೀತ್​ ಕಡೆಯಿಂದ ಸಿಕ್ಕಿತ್ತು ವಿಶೇಷ ಟಿಪ್ಸ್
ಪುನೀತ್​-ದಾನಿಶ್​ ಹಾಗೂ ಅನ್ಯಾ
TV9 Web
| Edited By: |

Updated on: Jan 27, 2022 | 4:51 PM

Share

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್ (Danish Sait)​ ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಇತ್ತೀಚೆಗಷ್ಟೇ ಅವರ ನಟನೆಯ ‘ಹಂಬಲ್ ಪೊಲಿಟಿಶಿಯನ್ ನೋಗರಾಜ್’ ವೆಬ್​ ಸರಣಿ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಈಗ ‘ಒನ್​ ಕಟ್​ ಟೂ ಕಟ್​’  (One Cut Two cut ) ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಪುನೀತ್ ಅವರನ್ನು ದಾನಿಶ್ ನೆನಪಿಸಿಕೊಂಡರು. ಮದುವೆ ದಿನ ದಾನಿಶ್​ಗೆ ವಿಶೇಷ ಮಾತೊಂದನ್ನು ಪುನೀತ್​ ಹೇಳಿದ್ದರು. ಇದನ್ನು ಅವರು ನೆನಪಿಸಿಕೊಂಡಿದ್ದಾರೆ.

​ ಅನ್ಯಾ ರಂಗಸ್ವಾಮಿ ಜತೆ ದಾನಿಶ್ ಸಿಂಪಲ್​ ಆಗಿ ಮದುವೆ ಆಗಿದ್ದರು. ಕಳೆದ ವರ್ಷ ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದರು. ಈಗ ಅವರು ಪುನೀತ್​ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ.

‘ಮದುವೆ ದಿನ ಪುನೀತ್ ಅವರು ನನಗೆ ಕರೆ ಮಾಡಿದ್ದರು. ಈ ವೇಳೆ ಫ್ಯಾಮಿಲಿಗೆ ಯಾವಾಗಲೂ ಮೊದಲ ಆದ್ಯತೆ ನೀಡಬೇಕು ಎಂದಿದ್ದರು. ಪುನೀತ್​ ಅವರು ಚಿತ್ರರಂಗದಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕುಟುಂಬಕ್ಕೆ ಅವರು ಆದ್ಯತೆ ನೀಡುತ್ತಿದ್ದರು. ಅವರು ನಮಗೆ ಮಾದರಿ’ ಎಂದಿದ್ದಾರೆ ದಾನಿಶ್. ಪುನೀತ್​ ಅವರನ್ನು ನೆನಪಿಸಿಕೊಳ್ಳುವಾಗ ಭಾವುಕರಾದರು ದಾನಿಶ್.

ದಾನಿಶ್​ ಸೇಠ್​ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾವನ್ನು ‘ಪಿಆರ್​ಕೆ ಪ್ರೊಡಕ್ಷನ್​’ ನಿರ್ಮಾಣ ಮಾಡಿದೆ. ಪಿಆರ್​ಕೆ ಜತೆ ಅವರು ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ ವೀಕ್ಷಣೆ ಮಾಡಿದ್ದರು. ಅಲ್ಲದೆ, ಆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಇದನ್ನು ಕೂಡ ದಾನಿಶ್​ ನೆನಪಿಸಿಕೊಂಡಿದ್ದಾರೆ. ‘ಪುನೀತ್​ ಅವರು ‘ಒನ್​ ಕಟ್​ ಟೂ ಕಟ್​’ ಚಿತ್ರ ವೀಕ್ಷಣೆ ಮಾಡಿದ್ದರು. ನನ್ನ ನಟನೆ ಅವರಿಗೆ ತುಂಬಾನೇ ಇಷ್ಟವಾಗಿತ್ತು. ಅವರು ಕರೆದು ಆ ಬಗ್ಗೆ ಮಾತನಾಡಿದ್ದರು’ ಎಂದಿದ್ದಾರೆ ದಾನಿಶ್​.

ಇದನ್ನೂ ಓದಿ: Humble Politiciann Nograj: ಮತ್ತೆ ‘ಹಂಬಲ್ ಪೊಲಿಟಿಶಿಯನ್’ ಆದ ದಾನಿಶ್; ಮಜವಾದ ಟ್ರೈಲರ್ ಇಲ್ಲಿದೆ

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

Follow Us
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು