AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗ್ತೀನಿ ಎಂದಾಗ ದಾನಿಶ್​ಗೆ ಪುನೀತ್​ ಕಡೆಯಿಂದ ಸಿಕ್ಕಿತ್ತು ವಿಶೇಷ ಟಿಪ್ಸ್

ದಾನಿಶ್​ ಸೇಠ್​ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾವನ್ನು ‘ಪಿಆರ್​ಕೆ ಪ್ರೊಡಕ್ಷನ್​’ ನಿರ್ಮಾಣ ಮಾಡಿದೆ. ಪಿಆರ್​ಕೆ ಜತೆ ಅವರು ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ.

ಮದುವೆ ಆಗ್ತೀನಿ ಎಂದಾಗ ದಾನಿಶ್​ಗೆ ಪುನೀತ್​ ಕಡೆಯಿಂದ ಸಿಕ್ಕಿತ್ತು ವಿಶೇಷ ಟಿಪ್ಸ್
ಪುನೀತ್​-ದಾನಿಶ್​ ಹಾಗೂ ಅನ್ಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 27, 2022 | 4:51 PM

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್ (Danish Sait)​ ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಲ್ಲಿ ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಇತ್ತೀಚೆಗಷ್ಟೇ ಅವರ ನಟನೆಯ ‘ಹಂಬಲ್ ಪೊಲಿಟಿಶಿಯನ್ ನೋಗರಾಜ್’ ವೆಬ್​ ಸರಣಿ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಈಗ ‘ಒನ್​ ಕಟ್​ ಟೂ ಕಟ್​’  (One Cut Two cut ) ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಪುನೀತ್ ಅವರನ್ನು ದಾನಿಶ್ ನೆನಪಿಸಿಕೊಂಡರು. ಮದುವೆ ದಿನ ದಾನಿಶ್​ಗೆ ವಿಶೇಷ ಮಾತೊಂದನ್ನು ಪುನೀತ್​ ಹೇಳಿದ್ದರು. ಇದನ್ನು ಅವರು ನೆನಪಿಸಿಕೊಂಡಿದ್ದಾರೆ.

​ ಅನ್ಯಾ ರಂಗಸ್ವಾಮಿ ಜತೆ ದಾನಿಶ್ ಸಿಂಪಲ್​ ಆಗಿ ಮದುವೆ ಆಗಿದ್ದರು. ಕಳೆದ ವರ್ಷ ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದರು. ಈಗ ಅವರು ಪುನೀತ್​ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ.

‘ಮದುವೆ ದಿನ ಪುನೀತ್ ಅವರು ನನಗೆ ಕರೆ ಮಾಡಿದ್ದರು. ಈ ವೇಳೆ ಫ್ಯಾಮಿಲಿಗೆ ಯಾವಾಗಲೂ ಮೊದಲ ಆದ್ಯತೆ ನೀಡಬೇಕು ಎಂದಿದ್ದರು. ಪುನೀತ್​ ಅವರು ಚಿತ್ರರಂಗದಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕುಟುಂಬಕ್ಕೆ ಅವರು ಆದ್ಯತೆ ನೀಡುತ್ತಿದ್ದರು. ಅವರು ನಮಗೆ ಮಾದರಿ’ ಎಂದಿದ್ದಾರೆ ದಾನಿಶ್. ಪುನೀತ್​ ಅವರನ್ನು ನೆನಪಿಸಿಕೊಳ್ಳುವಾಗ ಭಾವುಕರಾದರು ದಾನಿಶ್.

ದಾನಿಶ್​ ಸೇಠ್​ ಅವರ ನಟನೆಯ ‘ಒನ್​ ಕಟ್​ ಟೂ ಕಟ್​’ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾವನ್ನು ‘ಪಿಆರ್​ಕೆ ಪ್ರೊಡಕ್ಷನ್​’ ನಿರ್ಮಾಣ ಮಾಡಿದೆ. ಪಿಆರ್​ಕೆ ಜತೆ ಅವರು ನಟಿಸುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಈ ಚಿತ್ರವನ್ನು ಪುನೀತ್​ ರಾಜ್​ಕುಮಾರ್​ ವೀಕ್ಷಣೆ ಮಾಡಿದ್ದರು. ಅಲ್ಲದೆ, ಆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಇದನ್ನು ಕೂಡ ದಾನಿಶ್​ ನೆನಪಿಸಿಕೊಂಡಿದ್ದಾರೆ. ‘ಪುನೀತ್​ ಅವರು ‘ಒನ್​ ಕಟ್​ ಟೂ ಕಟ್​’ ಚಿತ್ರ ವೀಕ್ಷಣೆ ಮಾಡಿದ್ದರು. ನನ್ನ ನಟನೆ ಅವರಿಗೆ ತುಂಬಾನೇ ಇಷ್ಟವಾಗಿತ್ತು. ಅವರು ಕರೆದು ಆ ಬಗ್ಗೆ ಮಾತನಾಡಿದ್ದರು’ ಎಂದಿದ್ದಾರೆ ದಾನಿಶ್​.

ಇದನ್ನೂ ಓದಿ: Humble Politiciann Nograj: ಮತ್ತೆ ‘ಹಂಬಲ್ ಪೊಲಿಟಿಶಿಯನ್’ ಆದ ದಾನಿಶ್; ಮಜವಾದ ಟ್ರೈಲರ್ ಇಲ್ಲಿದೆ

ನಟ ದಾನಿಶ್​ ಸೇಠ್​ಗೆ ಅಭಿನಂದನೆ ತಿಳಿಸಿದ ಕ್ರಿಕೆಟರ್​​ ಕೆ.ಎಲ್​. ರಾಹುಲ್​; ಕಾರಣ ಏನು?

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ