AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಕಂಪನಿ, ಯೋಜನೆಗಳ ರಾಯಭಾರಿಯಾಗಿದ್ದರು ಪುನೀತ್: ಇಲ್ಲಿದೆ ಅವುಗಳ ಸಂಪೂರ್ಣ ಮಾಹಿತಿ

ಕೊವಿಡ್ ಲಸಿಕೆ ಪಡೆಯುವಂತೆ ಅವರು ಸರ್ಕಾರದ ಪರವಾಗಿ ಕೇಳಿಕೊಂಡಿದ್ದಿದೆ. ಹಾಗಾದರೆ ಪುನೀತ್​ ಯಾವೆಲ್ಲ ಯೋಜನೆ ಹಾಗೂ ಬ್ರ್ಯಾಂಡ್​ಗಳಿಗೆ ಅಂಬಾಸಿಡರ್​ ಆಗಿದ್ದರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಹಲವು ಕಂಪನಿ, ಯೋಜನೆಗಳ ರಾಯಭಾರಿಯಾಗಿದ್ದರು ಪುನೀತ್: ಇಲ್ಲಿದೆ ಅವುಗಳ ಸಂಪೂರ್ಣ ಮಾಹಿತಿ
ಪುನೀತ್ ರಾಜಕುಮಾರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Nov 12, 2021 | 6:05 PM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರಿಲ್ಲ ಎನ್ನುವ ನೋವನ್ನು ಅರಗಿಸಿಕೊಳ್ಳೋಕೆ ಇನ್ನೂ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಮಂದಿ ಪುನೀತ್​ ಹೆಸರನ್ನು ರಸ್ತೆ, ಪಾರ್ಕ್​ಗೆ ಇಡಬೇಕು ಎನ್ನುವ ಮನವಿ ಸಲ್ಲಿಕೆ ಮಾಡುತ್ತಿದ್ದಾರೆ. ಪುನೀತ್​ ನಟನೆ ಮಾತ್ರವಲ್ಲದೆ, ಹಲವು ಸರ್ಕಾರಿ ಯೋಜನೆ ಹಾಗೂ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದರು. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಅವರು ಮಾಡಿದ್ದರು. ಕೊವಿಡ್ ಲಸಿಕೆ ಪಡೆಯುವಂತೆ ಅವರು ಸರ್ಕಾರದ ಪರವಾಗಿ ಕೇಳಿಕೊಂಡಿದ್ದಿದೆ. ಹಾಗಾದರೆ ಪುನೀತ್​ ಯಾವೆಲ್ಲ ಯೋಜನೆ ಹಾಗೂ ಬ್ರ್ಯಾಂಡ್​ಗಳಿಗೆ ಅಂಬಾಸಿಡರ್​ ಆಗಿದ್ದರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

  • ಎಲ್‌ಇಡಿ ಬಲ್ಬ್​ ಬಳಕೆಯಿಂದ ವಿದ್ಯುತ್​ ಶಕ್ತಿ ಕಡಿಮೆ ವ್ಯಯವಾಗುತ್ತದೆ. ಎಲ್​ಇಡಿ ಬಲ್ಬ್​​ಗಳ ಬಳಕೆಗೆ ಉತ್ತೇಜನ ನೀಡಿದ್ದರು ಪುನೀತ್​.
  • ‘ಚೆಲುವ ಚಾಮರಾಜನಗರ’ ಯೋಜನೆಗೂ ಪುನೀತ್​ ರಾಯಭಾರಿ ಆಗಿದ್ದರು.
  • ಕೊವಿಡ್​ ಲಸಿಕೆ ಪಡೆಯುವಂತೆ ಸರ್ಕಾರ ಆಂದೋಲನ ಆರಂಭಿಸಿದೆ. ಇದಕ್ಕೆ ಪುನೀತ್​ ರಾಯಭಾರಿ ಆಗಿದ್ದರು.
  • ನಂದಿನಿ ಹಾಲಿನ ಉತ್ಪನ್ನಗಳಿಗೆ ದೊಡ್ಡ ಮಾರುಕಟ್ಟೆ ಇದೆ. ಇದರ ಪ್ರಚಾರ ರಾಯಭಾರಿಯಾಗಿ ಪುನೀತ್​ ಕಾರ್ಯ ನಿರ್ವಹಿಸುತ್ತಿದ್ದರು.
  • ಬಿಎಂಟಿಸಿ ಬಸ್ ಆದ್ಯತಾ ಪಥದ ಬಗ್ಗೆಯೂ ಜನರಲ್ಲಿ ಪುನೀತ್​ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದರು.
  • ಕರ್ನಾಟಕ ಪ್ರವಾಸೋದ್ಯಮದ ಪ್ರಚಾರಕ್ಕೆ ಪುನೀತ್​ ರಾಯಭಾರಿ ಆಗಿದ್ದರು.
  • SSLC ಶಿಕ್ಷಣದ ಬಳಿಕ ಜಿಟಿಟಿಸಿ ಸೇರಿ ‘ಕೌಶಲ ಕರ್ನಾಟಕ’ಕ್ಕೆ ನೆರವಾಗಲು ಪುನೀತ್ ಜಾಗೃತಿ ಮೂಡಿಸುತ್ತಿದ್ದರು.
  • ಸಿಡಾಕ್, ಉದ್ಯಮಶೀಲತಾ ತರಬೇತಿಯ ಪ್ರಯೋಜನದ ಮನವರಿಕೆ ಮಾಡುವ ಕೆಲಸವನ್ನು ಪುನೀತ್​ ಮಾಡುತ್ತಿದ್ದರು.
  • ಗ್ರಾಮೀಣ ಯುವಜನರಿಗೆ ಸರ್ಕಾರಿ ಐಟಿಐ ಸೇರಲು ಪ್ರೋತ್ಸಾಹ ನೀಡುವ ಕೆಲಸ ಪುನೀತ್​ ಅವರಿಂದ ಆಗುತ್ತಿತ್ತು.
  • ಮತದಾನ ಜಾಗೃತಿ ಅಭಿಯಾನಕ್ಕೆ ಪುನೀತ್​ ಕೈ ಜೋಡಿಸಿದ್ದರು.
  • ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ತಯಾರಿಸಿದ ‘ದೀಪ ಸಂಜೀವಿನಿ’ ಮಣ್ಣಿನ ಹಣತೆ ಖರೀದಿಸಿ ದೀಪಾವಳಿ ಆಚರಿಸುವ ಮೂಲಕ ಸ್ವಸಹಾಯ ಗುಂಪುಗಳನ್ನು ಬಲಪಡಿಸಲು ಮನವಿ ಮಾಡಿಕೊಂಡಿದ್ದರು ಪುನೀತ್​
  • ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ನೆರವಾಗುವ ‘ಸಂಜೀವಿನಿ’ ಯೋಜನೆ ಮಹತ್ವ ಸಾರುವ ಮೂಲಕ ಪ್ರೇರಣೆ ನೀಡುತ್ತಿದ್ದರು.

ಇದನ್ನೂ ಓದಿ: ‘ಪುನೀತ್​ ನಮನ’ ಕಾರ್ಯಕ್ರಮದಲ್ಲಿ ಏನೆಲ್ಲ ಇರಲಿದೆ? ಇಲ್ಲಿದೆ ಸುದ್ದಿಗೋಷ್ಠಿ ಮಾಹಿತಿ

Published On - 5:43 pm, Fri, 12 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!