AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಕಂಪನಿ, ಯೋಜನೆಗಳ ರಾಯಭಾರಿಯಾಗಿದ್ದರು ಪುನೀತ್: ಇಲ್ಲಿದೆ ಅವುಗಳ ಸಂಪೂರ್ಣ ಮಾಹಿತಿ

ಕೊವಿಡ್ ಲಸಿಕೆ ಪಡೆಯುವಂತೆ ಅವರು ಸರ್ಕಾರದ ಪರವಾಗಿ ಕೇಳಿಕೊಂಡಿದ್ದಿದೆ. ಹಾಗಾದರೆ ಪುನೀತ್​ ಯಾವೆಲ್ಲ ಯೋಜನೆ ಹಾಗೂ ಬ್ರ್ಯಾಂಡ್​ಗಳಿಗೆ ಅಂಬಾಸಿಡರ್​ ಆಗಿದ್ದರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಹಲವು ಕಂಪನಿ, ಯೋಜನೆಗಳ ರಾಯಭಾರಿಯಾಗಿದ್ದರು ಪುನೀತ್: ಇಲ್ಲಿದೆ ಅವುಗಳ ಸಂಪೂರ್ಣ ಮಾಹಿತಿ
ಪುನೀತ್ ರಾಜಕುಮಾರ್
TV9 Web
| Edited By: |

Updated on:Nov 12, 2021 | 6:05 PM

Share

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರಿಲ್ಲ ಎನ್ನುವ ನೋವನ್ನು ಅರಗಿಸಿಕೊಳ್ಳೋಕೆ ಇನ್ನೂ ಸಾಧ್ಯವಾಗುತ್ತಿಲ್ಲ. ಸಾಕಷ್ಟು ಮಂದಿ ಪುನೀತ್​ ಹೆಸರನ್ನು ರಸ್ತೆ, ಪಾರ್ಕ್​ಗೆ ಇಡಬೇಕು ಎನ್ನುವ ಮನವಿ ಸಲ್ಲಿಕೆ ಮಾಡುತ್ತಿದ್ದಾರೆ. ಪುನೀತ್​ ನಟನೆ ಮಾತ್ರವಲ್ಲದೆ, ಹಲವು ಸರ್ಕಾರಿ ಯೋಜನೆ ಹಾಗೂ ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದರು. ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಕೂಡ ಅವರು ಮಾಡಿದ್ದರು. ಕೊವಿಡ್ ಲಸಿಕೆ ಪಡೆಯುವಂತೆ ಅವರು ಸರ್ಕಾರದ ಪರವಾಗಿ ಕೇಳಿಕೊಂಡಿದ್ದಿದೆ. ಹಾಗಾದರೆ ಪುನೀತ್​ ಯಾವೆಲ್ಲ ಯೋಜನೆ ಹಾಗೂ ಬ್ರ್ಯಾಂಡ್​ಗಳಿಗೆ ಅಂಬಾಸಿಡರ್​ ಆಗಿದ್ದರು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

  • ಎಲ್‌ಇಡಿ ಬಲ್ಬ್​ ಬಳಕೆಯಿಂದ ವಿದ್ಯುತ್​ ಶಕ್ತಿ ಕಡಿಮೆ ವ್ಯಯವಾಗುತ್ತದೆ. ಎಲ್​ಇಡಿ ಬಲ್ಬ್​​ಗಳ ಬಳಕೆಗೆ ಉತ್ತೇಜನ ನೀಡಿದ್ದರು ಪುನೀತ್​.
  • ‘ಚೆಲುವ ಚಾಮರಾಜನಗರ’ ಯೋಜನೆಗೂ ಪುನೀತ್​ ರಾಯಭಾರಿ ಆಗಿದ್ದರು.
  • ಕೊವಿಡ್​ ಲಸಿಕೆ ಪಡೆಯುವಂತೆ ಸರ್ಕಾರ ಆಂದೋಲನ ಆರಂಭಿಸಿದೆ. ಇದಕ್ಕೆ ಪುನೀತ್​ ರಾಯಭಾರಿ ಆಗಿದ್ದರು.
  • ನಂದಿನಿ ಹಾಲಿನ ಉತ್ಪನ್ನಗಳಿಗೆ ದೊಡ್ಡ ಮಾರುಕಟ್ಟೆ ಇದೆ. ಇದರ ಪ್ರಚಾರ ರಾಯಭಾರಿಯಾಗಿ ಪುನೀತ್​ ಕಾರ್ಯ ನಿರ್ವಹಿಸುತ್ತಿದ್ದರು.
  • ಬಿಎಂಟಿಸಿ ಬಸ್ ಆದ್ಯತಾ ಪಥದ ಬಗ್ಗೆಯೂ ಜನರಲ್ಲಿ ಪುನೀತ್​ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದರು.
  • ಕರ್ನಾಟಕ ಪ್ರವಾಸೋದ್ಯಮದ ಪ್ರಚಾರಕ್ಕೆ ಪುನೀತ್​ ರಾಯಭಾರಿ ಆಗಿದ್ದರು.
  • SSLC ಶಿಕ್ಷಣದ ಬಳಿಕ ಜಿಟಿಟಿಸಿ ಸೇರಿ ‘ಕೌಶಲ ಕರ್ನಾಟಕ’ಕ್ಕೆ ನೆರವಾಗಲು ಪುನೀತ್ ಜಾಗೃತಿ ಮೂಡಿಸುತ್ತಿದ್ದರು.
  • ಸಿಡಾಕ್, ಉದ್ಯಮಶೀಲತಾ ತರಬೇತಿಯ ಪ್ರಯೋಜನದ ಮನವರಿಕೆ ಮಾಡುವ ಕೆಲಸವನ್ನು ಪುನೀತ್​ ಮಾಡುತ್ತಿದ್ದರು.
  • ಗ್ರಾಮೀಣ ಯುವಜನರಿಗೆ ಸರ್ಕಾರಿ ಐಟಿಐ ಸೇರಲು ಪ್ರೋತ್ಸಾಹ ನೀಡುವ ಕೆಲಸ ಪುನೀತ್​ ಅವರಿಂದ ಆಗುತ್ತಿತ್ತು.
  • ಮತದಾನ ಜಾಗೃತಿ ಅಭಿಯಾನಕ್ಕೆ ಪುನೀತ್​ ಕೈ ಜೋಡಿಸಿದ್ದರು.
  • ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ತಯಾರಿಸಿದ ‘ದೀಪ ಸಂಜೀವಿನಿ’ ಮಣ್ಣಿನ ಹಣತೆ ಖರೀದಿಸಿ ದೀಪಾವಳಿ ಆಚರಿಸುವ ಮೂಲಕ ಸ್ವಸಹಾಯ ಗುಂಪುಗಳನ್ನು ಬಲಪಡಿಸಲು ಮನವಿ ಮಾಡಿಕೊಂಡಿದ್ದರು ಪುನೀತ್​
  • ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಬಿ ಜೀವನಕ್ಕೆ ನೆರವಾಗುವ ‘ಸಂಜೀವಿನಿ’ ಯೋಜನೆ ಮಹತ್ವ ಸಾರುವ ಮೂಲಕ ಪ್ರೇರಣೆ ನೀಡುತ್ತಿದ್ದರು.

ಇದನ್ನೂ ಓದಿ: ‘ಪುನೀತ್​ ನಮನ’ ಕಾರ್ಯಕ್ರಮದಲ್ಲಿ ಏನೆಲ್ಲ ಇರಲಿದೆ? ಇಲ್ಲಿದೆ ಸುದ್ದಿಗೋಷ್ಠಿ ಮಾಹಿತಿ

Published On - 5:43 pm, Fri, 12 November 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು