AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಪ್ರತಿ ವರ್ಷ ಮಾರ್ಚ್​ 8ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಣೆ ಮಾಡಲಾಗುತ್ತದೆ. 2019ರ ಮಹಿಳಾ ದಿನಾಚರಣೆಯ ಅಂಗವಾಗಿ ಪುನೀತ್​ ಪತ್ನಿಗೆ ಕಾರನ್ನು ನೀಡಿದ್ದರು.

ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​
ಪುನೀತ್​-ಅಶ್ವಿನಿ
TV9 Web
| Edited By: |

Updated on: Oct 31, 2021 | 2:37 PM

Share

ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪ್ರೀತಿಸಿ ಮದುವೆ ಆಗಿದ್ದರು. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ. ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಪವರ್​ ಸ್ಟಾರ್​ ಪ್ರೀತಿಯಿಂದ ಪತ್ನಿಗೆ ನೀಲಿ ಬಣ್ಣದ ಲ್ಯಾಂಬೋರ್ಗಿನಿ ಉರುಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು.

ಪ್ರತಿ ವರ್ಷ ಮಾರ್ಚ್​ 8ಅನ್ನು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. 2019ರ ಮಹಿಳಾ ದಿನಾಚರಣೆಯ ಅಂಗವಾಗಿ ಪುನೀತ್​ ಪತ್ನಿಗೆ ಕಾರನ್ನು ನೀಡಿದ್ದರು. ಈ ಕಾರಿನ ಬೆಲೆ ಬರೋಬ್ಬರಿ 4 ಕೋಟಿ ರೂಪಾಯಿ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಉರುಸ್​ ಟ್ವಿನ್​ ಟರ್ಬೋ ಇಂಜಿನ್​ ಹೊಂದಿದೆ. 0-100 ಕಿಮೀ ವೇಗವನ್ನು ಕೇವಲ 3.6 ಸೆಕೆಂಡ್​ಗಳಲ್ಲಿ ತಲುಪುತ್ತದೆ. ಗರಿಷ್ಠ  305 ಕಿ.ಮೀ ವೇಗದಲ್ಲಿ ಈ ಎಸ್​ಯುವಿ ಚಲಿಸಬಲ್ಲದು.

ಪಿಆರ್​ಕೆ ಪ್ರೊಡಕ್ಷನ್​ ಏನಾಗಲಿದೆ?

2017ರ ಜುಲೈ 20ರಂದು ಪಿಆರ್​ಕೆ ಪ್ರೊಡಕ್ಷನ್​ ಸ್ಥಾಪನೆ ಆಯಿತು. ಹೊಸ ಮುಖಗಳಿಗೆ ಅವಕಾಶ ನೀಡುವ ಉದ್ದೇಶದಿಂದಲೇ ಈ ನಿರ್ಮಾಣ ಸಂಸ್ಥೆ ಆರಂಭಗೊಂಡಿದೆ. ‘ಕವಲುದಾರಿ’ ಈ ಪ್ರೊಡಕ್ಷನ್​ ಹೌಸ್​ನಿಂದ ಹೊರ ಬಂದ ಮೊದಲ ಸಿನಿಮಾ. 2019ರಲ್ಲಿ ಈ ಸಿನಿಮಾ ತೆರೆಗೆ ಬಂದಿತ್ತು. ನಂತರ ‘ಮಾಯಾಭಜಾರ್​ 2016’, ಲಾ, ಫ್ರೆಂಚ್​ ಬಿರಿಯಾನಿ ಸಿನಿಮಾಗಳು ಈ ಪ್ರೊಡಕ್ಷನ್​ ಹೌಸ್​ನಿಂದ ಮೂಡಿ ಬಂದಿವೆ. ಇದಲ್ಲದೆ, ಫ್ಯಾಮಿಲಿ ಪ್ಯಾಕ್​, ಮ್ಯಾನ್​ ಆಫ್​ ದಿ ಮ್ಯಾಚ್​, ಓ2 ಸಿನಿಮಾಗಳನ್ನು ಈ ಪ್ರೊಡಕ್ಷನ್​ ಹೌಸ್​ ನಿರ್ಮಾಣ ಮಾಡುತ್ತಿದೆ.

ಪಿಆರ್​ಕೆ ಪ್ರೊಡಕ್ಷನ್​ ಆರಂಭಿಸಿದ್ದು ಪುನೀತ್​ ರಾಜ್​ಕುಮಾರ್​ ಅವರೇ ಆದರೂ ಇದನ್ನು ನೋಡಿಕೊಳ್ಳುವ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ ವಹಿಸಿಕೊಂಡಿದ್ದರು. ಹೀಗಾಗಿ, ಅಶ್ವನಿ ಅವರೇ ಪಿಆರ್​ಕೆ ಪ್ರೊಡಕ್ಷನ್​ ಹೌಸ್​ಅನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಪಿಆರ್​ಕೆ ಪ್ರೊಡಕ್ಷನ್​ ಹೌಸ್​ ಜತೆ ಪಿಆರ್​ಕೆ ಆಡಿಯೋ ಕೂಡ ಇದೆ. ಇವೆರಡ ಸಂಪೂರ್ಣ ಜವಾಬ್ದಾರಿ ಅಶ್ವಿನಿ ಅವರ ಹೆಗಲು ಏರಿದೆ.

ಇದನ್ನೂ ಓದಿ: ವಿದೇಶಿ ನ್ಯೂಸ್​ ಚಾನೆಲ್​ಗಳಲ್ಲಿ ಪುನೀತ್​ ನಿಧನದ ಸುದ್ದಿ; ಸೌತ್​ ಕೊರಿಯಾದಲ್ಲೂ ಅಭಿಮಾನದ ಹೊಳೆ 

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Follow Us
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ