AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ

Puneeth Rajkumar: ‘ಕಾಂತಾರ’ ಟ್ರೇಲರ್​ನಲ್ಲಿ ಅನೇಕ ಅಂಶಗಳು ಗಮನ ಸೆಳೆದಿವೆ. ಅಚ್ಚರಿ ಎಂದರೆ, ಈ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​​ ನಟಿಸಬೇಕು ಎಂದು ಮೊದಲು ಪ್ಲ್ಯಾನ್​ ಆಗಿತ್ತು.

Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
ಕಾಂತಾರ ಸಿನಿಮಾ ಪೋಸ್ಟರ್​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Sep 20, 2022 | 7:40 AM

Share

ಬಹುನಿರೀಕ್ಷಿತ ‘ಕಾಂತಾರ’ (Kantara Kannada Movie) ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಈಗಾಗಲೇ ಈ ಸಿನಿಮಾದ ಟ್ರೇಲರ್​ ನೋಡಿದವರು ವಾವ್​ ಎಂದಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ಬ್ಯಾನರ್​ ಮೂಲಕ ಮೂಡಿಬಂದಿರುವ ಈ ಸಿನಿಮಾ ಸಖತ್​ ಅದ್ದೂರಿಯಾಗಿದೆ ಎಂಬುದಕ್ಕೆ ಟ್ರೇಲರ್​ ಸಾಕ್ಷಿ ನೀಡುತ್ತಿದೆ. ರಿಷಬ್​ ಶೆಟ್ಟಿ (Rishab Shetty) ನಟನೆ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರದ ಮೇಲೆ ಸಿನಿಪ್ರಿಯರಿಗೆ ನಿರೀಕ್ಷೆ ಮೂಡಿದೆ. ಅಚ್ಚರಿ ಏನೆಂದರೆ ಈ ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್​ (Puneeth Rajkumar) ಅವರು ಹೀರೋ ಆಗಿ ನಟಿಸಬೇಕಿತ್ತು! ಆದರೆ ಅದು ಸಾಧ್ಯವಾಗಲಿಲ್ಲ. ಈ ಸುದ್ದಿ ಕೇಳಿ ಅಭಿಮಾನಿಗಳು ಮರುಗುತ್ತಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರನ್ನು ಬೇರೆ ಬೇರೆ ಪಾತ್ರಗಳಲ್ಲಿ ನೋಡಿರುವ ಪ್ರೇಕ್ಷಕರಿಗೆ ‘ಕಾಂತಾರ’ ರೀತಿಯ ಚಿತ್ರದಲ್ಲಿ ಅವರನ್ನು ಕಣ್ತುಂಬಿಕೊಳ್ಳುವ ಅವಕಾಶ ಮಿಸ್​ ಆಯ್ತು. ಈ ಬಗ್ಗೆ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್​ ಗೌಡ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಪುನೀತ್​ ಮಾಡಬೇಕಿದ್ದ ಆ ಪಾತ್ರ ನಂತರ ರಿಷಬ್​ ಶೆಟ್ಟಿ ಪಾಲಾಯಿತು ಎಂದು ಕಾರ್ತಿಕ್​ ಗೌಡ ಹೇಳಿದ್ದಾರೆ.

‘ಕಾಂತಾರ’ ಚಿತ್ರಕ್ಕೆ ಸಂಬಂಧಿಸಿದಂತೆ ಕಾರ್ತಿಕ್​ ಗೌಡ ಅವರು ಅಭಿಮಾನಿಗಳೊಂದಿಗೆ ಇನ್​ಸ್ಟಾಗ್ರಾಮ್​ನಲ್ಲಿ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಅವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ‘ಅನೇಕರಿಗೆ ಗೊತ್ತಿರದ ಮಾಹಿತಿ ಏನೆಂದರೆ, ಕಾಂತಾರ ಸಿನಿಮಾದಲ್ಲಿ ಅಪ್ಪು ಸರ್​ ಅವರೇ ಹೀರೋ ಆಗಬೇಕಿತ್ತು. ನಾವು ನಿರ್ದಿಷ್ಟ ಕಾಲಮಾನದಲ್ಲಿ ಈ ಸಿನಿಮಾವನ್ನು ಚಿತ್ರಿಸಬೇಕಿತ್ತು. ಅದರಿಂದಾಗಿ ಅವರ ಡೇಟ್​ ಕ್ಲ್ಯಾಶ್​ ಆಯ್ತು. ಹಾಗಾಗಿ ಸ್ವತಃ ಪುನೀತ್​ ಅವರೇ ರಿಷಬ್​ ಶೆಟ್ಟಿಯ ಹೆಸರು ಸೂಚಿಸಿದರು’ ಎಂದು ಕಾರ್ತಿಕ್​ ಗೌಡ ಹೇಳಿದ್ದಾರೆ.

ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಅನೇಕ ಅಂಶಗಳು ಗಮನ ಸೆಳೆದಿವೆ. ಕರಾವಳಿಯ ಸಂಸ್ಕೃತಿ ಅನಾವರಣಗೊಂಡಿದೆ. ಒಂದು ವೇಳೆ ಪುನೀತ್​ ರಾಜ್​ಕುಮಾರ್​​ ಅವರೇ ಈ ಸಿನಿಮಾ ಮಾಡಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಅಂತ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಪುನೀತ್​ ನೀಡಿದ ಸಲಹೆಯಂತೆ ರಿಷಬ್​ ಶೆಟ್ಟಿ ಅವರು ‘ಕಾಂತಾರ’ಕ್ಕೆ ಹೀರೋ ಆದರು. ಅವರು ಈ ಪಾತ್ರಕ್ಕೆ ಖಂಡಿತವಾಗಿಯೂ ನ್ಯಾಯ ಸಲ್ಲಿಸಿದ್ದಾರೆ ಎಂಬುದರ ಝಲಕ್​ ಟ್ರೇಲರ್​ನಲ್ಲಿಯೇ ಕಾಣುತ್ತಿದೆ.

ಇದನ್ನೂ ಓದಿ
Image
Puneeth Rajkumar Twitter: ಮರಳಿ ಬಂತು ಪುನೀತ್​ ರಾಜ್​ಕುಮಾರ್​ ಟ್ವಿಟರ್​ ಖಾತೆಯ ಬ್ಲೂ ಟಿಕ್​; ಸಂಭ್ರಮಿಸಿದ ಅಪ್ಪು ಫ್ಯಾನ್ಸ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​
Image
Ashwini Puneeth Rajkumar: ಪುನೀತ್​ ರಾಜ್​ಕುಮಾರ್​ ಹಾಡಿದ ‘ಅಪರೂಪ’ದ ಸಾಂಗ್​ ರಿಲೀಸ್​ ಮಾಡಿದ ಪತ್ನಿ ಅಶ್ವಿನಿ
Image
ಪುನೀತ್​ ಪುತ್ಥಳಿ ಅನಾವರಣದ ವೇಳೆ ಬಿಕ್ಕಿ ಬಿಕ್ಕಿ ಅತ್ತ ರಾಘವೇಂದ್ರ ರಾಜ್​ಕುಮಾರ್​ ಪತ್ನಿ ಮಂಗಳಾ

ಸೆಪ್ಟೆಂಬರ್​ 30ರಂದು ‘ಕಾಂತಾರ’ ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಈ ಚಿತ್ರದ ‘ಸಿಂಗಾರ ಸಿರಿಯೇ..’ ಹಾಡು ಸೂಪರ್​ ಹಿಟ್​ ಆಗಿದೆ. ಇನ್ನೊಂದು ಸಾಂಗ್​ ಕೂಡ ಬರಲಿದೆ ಎಂದು ಕಾರ್ತಿಕ್​ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರ ರಿಲೀಸ್​ ಆಗಲಿದೆ ಎಂದು ಅವರು ಹೇಳಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ರಿಷಬ್​ ಶೆಟ್ಟಿ ಜೊತೆ ಸಪ್ತಮಿ ಗೌಡ, ಕಿಶೋರ್​ ಮುಂತಾದವರು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:20 am, Tue, 20 September 22

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ