AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​

ಸೋಂಟದ ಭಾಗದಲ್ಲಿ ಪುನೀತ್​ಗೆ ನೋವು ಕಾಣಿಸಿಕೊಂಡಿತ್ತು. ಈ ಕಾರಣಕ್ಕೆ ಅವರು ಬೆಂಗಳೂರಿನ ಮಲ್ಲೇಶ್ವರಂಗೆ ಅವರು ತೆರಳಿದ್ದರು. ಅಲ್ಲದೆ, ಡಾ.ಪಳನಿವೇಲುರಿಂದ ಫಿಸಿಯೋ ಥೆರಪಿ ಚಿಕಿತ್ಸೆ ಪಡೆದಿದ್ದರು.

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 03, 2021 | 4:04 PM

Share

ಪುನೀತ್​ ರಾಜ್​ಕುಮಾರ್​ ಅವರು ನಿಧನ ಹೊಂದಿದ ನಂತರ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ. ಪುನೀತ್ ಬಗ್ಗೆ ಅನೇಕರು ನಾನಾ ರೀತಿಯ ವಿಚಾರಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಪುನೀತ್​ ಅವರಿಗೆ ಹೃದಯಾಘಾತವಾಗುತ್ತದೆ ಎನ್ನುವ ಯಾವುದೇ ಸೂಚನೆ ಇರಲಿಲ್ಲ. ಪುನೀತ್​ ನಿಧನ ಹೊಂದುವುದಕ್ಕೂ ಮೊದಲು ಫಿಸಿಯೋ ಥೆರಪಿಗೆ ಒಳಗಾಗಿದ್ದರು. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಸೊಂಟದ ಭಾಗದಲ್ಲಿ ಪುನೀತ್​ಗೆ ನೋವು ಕಾಣಿಸಿಕೊಂಡಿತ್ತು. ಈ ಕಾರಣಕ್ಕೆ ಅವರು ಬೆಂಗಳೂರಿನ ಮಲ್ಲೇಶ್ವರಂಗೆ ತೆರಳಿದ್ದರು. ಅಲ್ಲದೆ, ಡಾ.ಪಳನಿವೇಲುರಿಂದ ಫಿಸಿಯೋ ಥೆರಪಿ ಚಿಕಿತ್ಸೆ ಪಡೆದಿದ್ದರು. ಪುನೀತ್​ ಅದ್ಭುತವಾಗಿ ಡಾನ್ಸ್​ ಮಾಡುತ್ತಾರೆ. ಅವರ ಸಿನಿಮಾಗಳಲ್ಲಿ ಫೈಟ್​ ದೃಶ್ಯ ಕೂಡ ಇರುತ್ತದೆ. ಇದನ್ನು ಹೆಚ್ಚು ಮಾಡಿದಾಗ ಸೊಂಟದ ಭಾಗದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ನೋವು ಕಾಣಿಸಿಕೊಂಡಾಗ ಇಲ್ಲಿ ಬಂದು ಪುನೀತ್​ ಚಿಕಿತ್ಸೆ ಪಡೆದಿದ್ದರು. ಆದರೆ, ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇರಲಿಲ್ಲ ಎಂದು ಡಾ.ಪಳನಿವೇಲು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

‘ಸೊಂಟದ ನೋವು ಎಂದು ಬಂದಿದ್ದರು. ನಾವು ಚಿಕಿತ್ಸೆ ನೀಡಿದ್ದೆವು. ಚಿಕಿತ್ಸೆ ನಂತರ ಅವರು ಕಾಲ್‌ ಮಾಡಿ  ಚೆನ್ನಾಗಿದ್ದೇನೆ ಎಂದಿದ್ದರು. ಫಿಸಿಯೋ ಥೆರಪಿ ಬಳಿಕ ಅವರು ಆರೋಗ್ಯವಾಗಿದ್ದರು. ಹೃದಯಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆ ಇರಲಿಲ್ಲ’ ಎಂದು ಮಾಹಿತಿ ನೀಡಿದ್ದಾರೆ ಡಾ.ಪಳನಿವೇಲು.

ರಜನಿಕಾಂತ್​ ಅವರು ಪುನೀತ್ ಸಾವಿನ ಸುದ್ದಿ ಕೇಳಿ ತುಂಬಾನೇ ಬೇಸರಗೊಂಡಿದ್ದರಂತೆ. ಈ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದ್ದಾರೆ. ‘ರಜನಿಕಾಂತ್​ ಈಗಷ್ಟೇ ಆಸ್ಪತ್ರೆಯಿಂದ ಬಂದಿದ್ದಾರೆ. ಅವರ ಮಗಳು, ಪತ್ನಿ ಕರೆ ಮಾಡಿದ್ದರು. ಅವರಿಗೆ ನಂಬೋಕೆ ಆಗ್ತಿಲ್ಲ. ಅವರು ಚಿಕ್ಕ ವಯಸ್ಸಿಂದ ನನ್ನ ತಮ್ಮನನ್ನು ನೋಡಿಕೊಂಡು ಬಂದಿದ್ದಾರೆ. ರಜನಿಕಾಂತ್​ ಅವರ ಜತೆ ಮಾತನಾಡೋಕೆ ಆಗಿಲ್ಲ. ಈ ವಿಚಾರ ಕೇಳಿ ರಜನಿಕಾಂತ್​ ತುಂಬಾನೇ ನೊಂದುಕೊಂಡರಂತೆ. ಅಪ್ಪು ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇತ್ತು. ಪುನೀತ್​ ಮಗು ಇದ್ದಾಗಿನಿಂದಲೂ ಅವರು ನೋಡಿದ್ದರು. ಹೀಗಾಗಿ ನೋವು ಜಾಸ್ತಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಪುನೀತ್​ ನಿಧನ ವಾರ್ತೆ ಕೇಳಿ ರಜನಿಕಾಂತ್​ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್​ಕುಮಾರ್​ ವಿವರಿಸಿದ್ದು ಹೀಗೆ

‘ಆ ದಿನ ಪುನೀತ್ ಡಲ್ ಆಗಿದ್ದರು’; ಅಪ್ಪು ಸಾವಿನ ನಂತರ ಅಚ್ಚರಿಯ ವಿಚಾರ ಬಿಚ್ಚಿಟ್ಟ ಶಿವರಾಜ್​ಕುಮಾರ್​

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ