AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​

ಸೋಂಟದ ಭಾಗದಲ್ಲಿ ಪುನೀತ್​ಗೆ ನೋವು ಕಾಣಿಸಿಕೊಂಡಿತ್ತು. ಈ ಕಾರಣಕ್ಕೆ ಅವರು ಬೆಂಗಳೂರಿನ ಮಲ್ಲೇಶ್ವರಂಗೆ ಅವರು ತೆರಳಿದ್ದರು. ಅಲ್ಲದೆ, ಡಾ.ಪಳನಿವೇಲುರಿಂದ ಫಿಸಿಯೋ ಥೆರಪಿ ಚಿಕಿತ್ಸೆ ಪಡೆದಿದ್ದರು.

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​
ಪುನೀತ್​ ರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 03, 2021 | 4:04 PM

ಪುನೀತ್​ ರಾಜ್​ಕುಮಾರ್​ ಅವರು ನಿಧನ ಹೊಂದಿದ ನಂತರ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ. ಪುನೀತ್ ಬಗ್ಗೆ ಅನೇಕರು ನಾನಾ ರೀತಿಯ ವಿಚಾರಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಪುನೀತ್​ ಅವರಿಗೆ ಹೃದಯಾಘಾತವಾಗುತ್ತದೆ ಎನ್ನುವ ಯಾವುದೇ ಸೂಚನೆ ಇರಲಿಲ್ಲ. ಪುನೀತ್​ ನಿಧನ ಹೊಂದುವುದಕ್ಕೂ ಮೊದಲು ಫಿಸಿಯೋ ಥೆರಪಿಗೆ ಒಳಗಾಗಿದ್ದರು. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಸೊಂಟದ ಭಾಗದಲ್ಲಿ ಪುನೀತ್​ಗೆ ನೋವು ಕಾಣಿಸಿಕೊಂಡಿತ್ತು. ಈ ಕಾರಣಕ್ಕೆ ಅವರು ಬೆಂಗಳೂರಿನ ಮಲ್ಲೇಶ್ವರಂಗೆ ತೆರಳಿದ್ದರು. ಅಲ್ಲದೆ, ಡಾ.ಪಳನಿವೇಲುರಿಂದ ಫಿಸಿಯೋ ಥೆರಪಿ ಚಿಕಿತ್ಸೆ ಪಡೆದಿದ್ದರು. ಪುನೀತ್​ ಅದ್ಭುತವಾಗಿ ಡಾನ್ಸ್​ ಮಾಡುತ್ತಾರೆ. ಅವರ ಸಿನಿಮಾಗಳಲ್ಲಿ ಫೈಟ್​ ದೃಶ್ಯ ಕೂಡ ಇರುತ್ತದೆ. ಇದನ್ನು ಹೆಚ್ಚು ಮಾಡಿದಾಗ ಸೊಂಟದ ಭಾಗದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ನೋವು ಕಾಣಿಸಿಕೊಂಡಾಗ ಇಲ್ಲಿ ಬಂದು ಪುನೀತ್​ ಚಿಕಿತ್ಸೆ ಪಡೆದಿದ್ದರು. ಆದರೆ, ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇರಲಿಲ್ಲ ಎಂದು ಡಾ.ಪಳನಿವೇಲು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

‘ಸೊಂಟದ ನೋವು ಎಂದು ಬಂದಿದ್ದರು. ನಾವು ಚಿಕಿತ್ಸೆ ನೀಡಿದ್ದೆವು. ಚಿಕಿತ್ಸೆ ನಂತರ ಅವರು ಕಾಲ್‌ ಮಾಡಿ  ಚೆನ್ನಾಗಿದ್ದೇನೆ ಎಂದಿದ್ದರು. ಫಿಸಿಯೋ ಥೆರಪಿ ಬಳಿಕ ಅವರು ಆರೋಗ್ಯವಾಗಿದ್ದರು. ಹೃದಯಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆ ಇರಲಿಲ್ಲ’ ಎಂದು ಮಾಹಿತಿ ನೀಡಿದ್ದಾರೆ ಡಾ.ಪಳನಿವೇಲು.

ರಜನಿಕಾಂತ್​ ಅವರು ಪುನೀತ್ ಸಾವಿನ ಸುದ್ದಿ ಕೇಳಿ ತುಂಬಾನೇ ಬೇಸರಗೊಂಡಿದ್ದರಂತೆ. ಈ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದ್ದಾರೆ. ‘ರಜನಿಕಾಂತ್​ ಈಗಷ್ಟೇ ಆಸ್ಪತ್ರೆಯಿಂದ ಬಂದಿದ್ದಾರೆ. ಅವರ ಮಗಳು, ಪತ್ನಿ ಕರೆ ಮಾಡಿದ್ದರು. ಅವರಿಗೆ ನಂಬೋಕೆ ಆಗ್ತಿಲ್ಲ. ಅವರು ಚಿಕ್ಕ ವಯಸ್ಸಿಂದ ನನ್ನ ತಮ್ಮನನ್ನು ನೋಡಿಕೊಂಡು ಬಂದಿದ್ದಾರೆ. ರಜನಿಕಾಂತ್​ ಅವರ ಜತೆ ಮಾತನಾಡೋಕೆ ಆಗಿಲ್ಲ. ಈ ವಿಚಾರ ಕೇಳಿ ರಜನಿಕಾಂತ್​ ತುಂಬಾನೇ ನೊಂದುಕೊಂಡರಂತೆ. ಅಪ್ಪು ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇತ್ತು. ಪುನೀತ್​ ಮಗು ಇದ್ದಾಗಿನಿಂದಲೂ ಅವರು ನೋಡಿದ್ದರು. ಹೀಗಾಗಿ ನೋವು ಜಾಸ್ತಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಪುನೀತ್​ ನಿಧನ ವಾರ್ತೆ ಕೇಳಿ ರಜನಿಕಾಂತ್​ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್​ಕುಮಾರ್​ ವಿವರಿಸಿದ್ದು ಹೀಗೆ

‘ಆ ದಿನ ಪುನೀತ್ ಡಲ್ ಆಗಿದ್ದರು’; ಅಪ್ಪು ಸಾವಿನ ನಂತರ ಅಚ್ಚರಿಯ ವಿಚಾರ ಬಿಚ್ಚಿಟ್ಟ ಶಿವರಾಜ್​ಕುಮಾರ್​

ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು