AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​

ಸೋಂಟದ ಭಾಗದಲ್ಲಿ ಪುನೀತ್​ಗೆ ನೋವು ಕಾಣಿಸಿಕೊಂಡಿತ್ತು. ಈ ಕಾರಣಕ್ಕೆ ಅವರು ಬೆಂಗಳೂರಿನ ಮಲ್ಲೇಶ್ವರಂಗೆ ಅವರು ತೆರಳಿದ್ದರು. ಅಲ್ಲದೆ, ಡಾ.ಪಳನಿವೇಲುರಿಂದ ಫಿಸಿಯೋ ಥೆರಪಿ ಚಿಕಿತ್ಸೆ ಪಡೆದಿದ್ದರು.

ಸಾಯುವುದಕ್ಕೂ ಒಂದು ವಾರ ಮೊದಲು ಫಿಸಿಯೋ ಥೆರಪಿ ಮಾಡಿಸಿಕೊಂಡಿದ್ದ ಪುನೀತ್​ ರಾಜ್​ಕುಮಾರ್​
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 03, 2021 | 4:04 PM

Share

ಪುನೀತ್​ ರಾಜ್​ಕುಮಾರ್​ ಅವರು ನಿಧನ ಹೊಂದಿದ ನಂತರ ಸಾಕಷ್ಟು ವಿಚಾರಗಳು ಬೆಳಕಿಗೆ ಬರುತ್ತಿವೆ. ಪುನೀತ್ ಬಗ್ಗೆ ಅನೇಕರು ನಾನಾ ರೀತಿಯ ವಿಚಾರಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಪುನೀತ್​ ಅವರಿಗೆ ಹೃದಯಾಘಾತವಾಗುತ್ತದೆ ಎನ್ನುವ ಯಾವುದೇ ಸೂಚನೆ ಇರಲಿಲ್ಲ. ಪುನೀತ್​ ನಿಧನ ಹೊಂದುವುದಕ್ಕೂ ಮೊದಲು ಫಿಸಿಯೋ ಥೆರಪಿಗೆ ಒಳಗಾಗಿದ್ದರು. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಸೊಂಟದ ಭಾಗದಲ್ಲಿ ಪುನೀತ್​ಗೆ ನೋವು ಕಾಣಿಸಿಕೊಂಡಿತ್ತು. ಈ ಕಾರಣಕ್ಕೆ ಅವರು ಬೆಂಗಳೂರಿನ ಮಲ್ಲೇಶ್ವರಂಗೆ ತೆರಳಿದ್ದರು. ಅಲ್ಲದೆ, ಡಾ.ಪಳನಿವೇಲುರಿಂದ ಫಿಸಿಯೋ ಥೆರಪಿ ಚಿಕಿತ್ಸೆ ಪಡೆದಿದ್ದರು. ಪುನೀತ್​ ಅದ್ಭುತವಾಗಿ ಡಾನ್ಸ್​ ಮಾಡುತ್ತಾರೆ. ಅವರ ಸಿನಿಮಾಗಳಲ್ಲಿ ಫೈಟ್​ ದೃಶ್ಯ ಕೂಡ ಇರುತ್ತದೆ. ಇದನ್ನು ಹೆಚ್ಚು ಮಾಡಿದಾಗ ಸೊಂಟದ ಭಾಗದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ನೋವು ಕಾಣಿಸಿಕೊಂಡಾಗ ಇಲ್ಲಿ ಬಂದು ಪುನೀತ್​ ಚಿಕಿತ್ಸೆ ಪಡೆದಿದ್ದರು. ಆದರೆ, ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇರಲಿಲ್ಲ ಎಂದು ಡಾ.ಪಳನಿವೇಲು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

‘ಸೊಂಟದ ನೋವು ಎಂದು ಬಂದಿದ್ದರು. ನಾವು ಚಿಕಿತ್ಸೆ ನೀಡಿದ್ದೆವು. ಚಿಕಿತ್ಸೆ ನಂತರ ಅವರು ಕಾಲ್‌ ಮಾಡಿ  ಚೆನ್ನಾಗಿದ್ದೇನೆ ಎಂದಿದ್ದರು. ಫಿಸಿಯೋ ಥೆರಪಿ ಬಳಿಕ ಅವರು ಆರೋಗ್ಯವಾಗಿದ್ದರು. ಹೃದಯಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆ ಇರಲಿಲ್ಲ’ ಎಂದು ಮಾಹಿತಿ ನೀಡಿದ್ದಾರೆ ಡಾ.ಪಳನಿವೇಲು.

ರಜನಿಕಾಂತ್​ ಅವರು ಪುನೀತ್ ಸಾವಿನ ಸುದ್ದಿ ಕೇಳಿ ತುಂಬಾನೇ ಬೇಸರಗೊಂಡಿದ್ದರಂತೆ. ಈ ಬಗ್ಗೆ ಶಿವರಾಜ್​ಕುಮಾರ್​ ಮಾತನಾಡಿದ್ದಾರೆ. ‘ರಜನಿಕಾಂತ್​ ಈಗಷ್ಟೇ ಆಸ್ಪತ್ರೆಯಿಂದ ಬಂದಿದ್ದಾರೆ. ಅವರ ಮಗಳು, ಪತ್ನಿ ಕರೆ ಮಾಡಿದ್ದರು. ಅವರಿಗೆ ನಂಬೋಕೆ ಆಗ್ತಿಲ್ಲ. ಅವರು ಚಿಕ್ಕ ವಯಸ್ಸಿಂದ ನನ್ನ ತಮ್ಮನನ್ನು ನೋಡಿಕೊಂಡು ಬಂದಿದ್ದಾರೆ. ರಜನಿಕಾಂತ್​ ಅವರ ಜತೆ ಮಾತನಾಡೋಕೆ ಆಗಿಲ್ಲ. ಈ ವಿಚಾರ ಕೇಳಿ ರಜನಿಕಾಂತ್​ ತುಂಬಾನೇ ನೊಂದುಕೊಂಡರಂತೆ. ಅಪ್ಪು ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇತ್ತು. ಪುನೀತ್​ ಮಗು ಇದ್ದಾಗಿನಿಂದಲೂ ಅವರು ನೋಡಿದ್ದರು. ಹೀಗಾಗಿ ನೋವು ಜಾಸ್ತಿ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ಪುನೀತ್​ ನಿಧನ ವಾರ್ತೆ ಕೇಳಿ ರಜನಿಕಾಂತ್​ ಪ್ರತಿಕ್ರಿಯೆ ಹೇಗಿತ್ತು? ಶಿವರಾಜ್​ಕುಮಾರ್​ ವಿವರಿಸಿದ್ದು ಹೀಗೆ

‘ಆ ದಿನ ಪುನೀತ್ ಡಲ್ ಆಗಿದ್ದರು’; ಅಪ್ಪು ಸಾವಿನ ನಂತರ ಅಚ್ಚರಿಯ ವಿಚಾರ ಬಿಚ್ಚಿಟ್ಟ ಶಿವರಾಜ್​ಕುಮಾರ್​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ