AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Ratna Award 2022 ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ

Karnataka Ratna Award Ceremony 2022 ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

Karnataka Ratna Award 2022  ಪುನೀತ್‌ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ:  ಗೌರವ ಸ್ವೀಕರಿಸಿದ ಪತ್ನಿ ಅಶ್ವಿನಿ
Karnataka Ratna Award
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 01, 2022 | 6:47 PM

Share

ನಟ ದಿವಂಗತ ಪುನೀತ್ ರಾಜ್​ಕುಮಾರ್ ಅವರಿಗೆ (Puneeth rajkumar )ಮರಣೋತ್ತರವಾಗಿ  ಇಂದು (ನ,01) ಕರ್ನಾಟಕ ರತ್ನ ಪ್ರಶಸ್ತಿಯನ್ನು  (Karnataka Ratna Award 2022)ನೀಡಲಾಯ್ತು. ಪುನೀತ್‌ ಪತ್ನಿ ಅಶ್ವಿನಿ(Ashwini puneeth rajkumar) ಅವರು ಡಾ.ಸುಧಾಮೂರ್ತಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ವಿಧಾನಸಭೆ ಮೆಟ್ಟಿನ ಮೇಲೆ ನಡೆದ ಸಮಾರಂಭದಲ್ಲಿ ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಧಾಮೂರ್ತಿ ಅವರು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡಿದರು.

ಅತ್ಯುನ್ನತ ನಾಗರಿಕ ಪ್ರಶಸ್ತಿ ಇದಾಗಿದ್ದು, ಈವರೆಗೂ ಕರ್ನಾಟಕದಲ್ಲಿ ಎಂಟು ಜನರಿಗೆ ನೀಡಲಾಗಿದೆ. ಈ ಗೌರವಕ್ಕೆ ಪಾತ್ರರಾಗುತ್ತಿರುವ 9ನೇ ರತ್ನ ಪುನೀತ್ ರಾಜ್ ಕುಮಾರ್ ಎನ್ನುವುದು ವಿಶೇಷ. ಅಲ್ಲದೇ ಮರಣೋತ್ತರ ಪ್ರಶಸ್ತಿ ಪಡೆಯುತ್ತಿರುವ ಮೊದಲ ರತ್ನ ಇವರಾಗಿದ್ದಾರೆ.

ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರಕಾರ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ (Award) ಇದಾಗಿದ್ದು, ಪುನೀತ್ ಅವರಿಗೆ ಸಿನಿಮಾ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಸಿನಿಮಾ ರಂಗಕ್ಕೆ ಈವರೆಗೂ ಎರಡು ಪ್ರಶಸ್ತಿಗಳು ಬಂದಿದ್ದು, 1992ರಲ್ಲಿ ಮೊದಲ ಬಾರಿಗೆ ಡಾ.ರಾಜ್ ಕುಮಾರ್ ಪಡೆದರೆ, 2022ರಲ್ಲಿ ಡಾ.ರಾಜ್ ಪುತ್ರ ಪುನೀತ್ ರಾಜ್ ಕುಮಾರ್ ಕರ್ನಾಟಕ ರತ್ನಕ್ಕೆ ಆಯ್ಕೆಯಾದ್ರು.

ದೇಶದಲ್ಲಿ ಭಾರತ ರತ್ನವು ಅತ್ಯುನ್ನತ ನಾಗರಿಕ ಪ್ರಶಸ್ತಿಯಾದರೆ, ಕರ್ನಾಟಕ ಸರಕಾರವು ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನು ಅತ್ಯುನ್ನತ ನಾಗರಿಕ ಪ್ರಶಸ್ತಿ ಎಂದು 1992ರಲ್ಲಿ ಘೋಷಣೆ ಮಾಡಿತು. ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ, ಸನ್ಮಾನ ಪತ್ರ, ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದೆ.

Published On - 5:39 pm, Tue, 1 November 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!