Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Puneeth Rajkumar: ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಹಲವಾರು ಸಿನಿಮಾಗಳಲ್ಲಿ ಅವರು ಡಾ. ರಾಜ್​ಕುಮಾರ್​ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು.

Father's Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್
ಡಾ. ರಾಜ್​ಕುಮಾರ್​, ಪುನೀತ್​ ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Jun 20, 2021 | 9:57 AM

ಅಪ್ಪ ಎಂದರೆ ಎಲ್ಲರಿಗೂ ಹೆಮ್ಮೆ. ಇಂದು (ಜೂ.20) ವಿಶ್ವ ಅಪ್ಪಂದಿರ ದಿನ ಆಚರಿಸಲಾಗುತ್ತಿದೆ. ಮಕ್ಕಳನ್ನು ಬೆಳೆಸುವ ಕಾಯಕದಲ್ಲಿ ಅಪ್ಪನ ಕೊಡುಗೆ ಅಪಾರ. ತಂದೆಗೆ ಕೃತಜ್ಞತೆ ಸಲ್ಲಿಸಲು ಇಂದು ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ವಿಶೇಷ ದಿನದಂದು ಅಪ್ಪನಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ತಮ್ಮ ಅಭಿಮಾನಿಗಳೆಲ್ಲರಿಗೂ ಅಪ್ಪಂದಿರ ದಿನದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಒಂದು ವಿಶೇಷ ಹಾಡಿನ ಮೂಲಕ ವಿಶ್​ ಮಾಡಿದ್ದಾರೆ.

ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್​ಕುಮಾರ್​ ಅವರ ಸುಪುತ್ರ ಪುನೀತ್​ ರಾಜ್​ಕುಮಾರ್​ ಅವರ ಮೇಲೆ ತಂದೆಯ ಪ್ರಭಾವ ಅಪಾರ. ಯಾಕೆಂದರೆ, ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಆಗ ಪುನೀತ್​ ಹೆಸರು ಮಾಸ್ಟರ್​ ಲೋಹಿತ್​ ಎಂದಾಗಿತ್ತು. ಹಲವಾರು ಸಿನಿಮಾಗಳಲ್ಲಿ ಅವರು ಅಪ್ಪಾಜಿ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು. ಆ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸಿನಿಮಾ ಬಗ್ಗೆ ಅಪಾರ ಅನುಭವ ದಕ್ಕಿತ್ತು.

ಪುನೀತ್​ ರಾಜ್​ಕುಮಾರ್​ ಬಾಲನಟನಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ‘ಭಾಗ್ಯವಂತ’ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಅವರು ಅತಿಥಿ ಪಾತ್ರ ಮಾಡಿದ್ದರು. ಆ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ..’ ಹಾಡು ಸೂಪರ್​ ಹಿಟ್​ ಆಗಿತ್ತು. ಕೇಳುಗರ ಫೇವರೀಟ್​ ಲಿಸ್ಟ್​ನಲ್ಲಿ ಇಂದಿಗೂ ಆ ಗೀತೆ ಸ್ಥಾನ ಪಡೆದುಕೊಂಡಿದೆ. ಅದೇ ಹಾಡನ್ನು ಮತ್ತೆ ಹಂಚಿಕೊಳ್ಳುವ ಮೂಲಕ ಅಪ್ಪಂದಿರ ದಿನಕ್ಕೆ ಪುನೀತ್​ ರಾಜ್​ಕುಮಾರ್​ ಅವರು ಶುಭಕೋರಿದ್ದಾರೆ.

ಇದನ್ನೂ ಓದಿ:

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

ಡಾ. ರಾಜ್​ಕುಮಾರ್​ ಸಹಾಯವನ್ನು ನಾನು ಯಾವತ್ತೂ ಮರೆಯುವುದಿಲ್ಲ: ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​