AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Puneeth Rajkumar: ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಹಲವಾರು ಸಿನಿಮಾಗಳಲ್ಲಿ ಅವರು ಡಾ. ರಾಜ್​ಕುಮಾರ್​ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು.

Father's Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್
ಡಾ. ರಾಜ್​ಕುಮಾರ್​, ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 20, 2021 | 9:57 AM

Share

ಅಪ್ಪ ಎಂದರೆ ಎಲ್ಲರಿಗೂ ಹೆಮ್ಮೆ. ಇಂದು (ಜೂ.20) ವಿಶ್ವ ಅಪ್ಪಂದಿರ ದಿನ ಆಚರಿಸಲಾಗುತ್ತಿದೆ. ಮಕ್ಕಳನ್ನು ಬೆಳೆಸುವ ಕಾಯಕದಲ್ಲಿ ಅಪ್ಪನ ಕೊಡುಗೆ ಅಪಾರ. ತಂದೆಗೆ ಕೃತಜ್ಞತೆ ಸಲ್ಲಿಸಲು ಇಂದು ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ವಿಶೇಷ ದಿನದಂದು ಅಪ್ಪನಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ತಮ್ಮ ಅಭಿಮಾನಿಗಳೆಲ್ಲರಿಗೂ ಅಪ್ಪಂದಿರ ದಿನದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಒಂದು ವಿಶೇಷ ಹಾಡಿನ ಮೂಲಕ ವಿಶ್​ ಮಾಡಿದ್ದಾರೆ.

ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್​ಕುಮಾರ್​ ಅವರ ಸುಪುತ್ರ ಪುನೀತ್​ ರಾಜ್​ಕುಮಾರ್​ ಅವರ ಮೇಲೆ ತಂದೆಯ ಪ್ರಭಾವ ಅಪಾರ. ಯಾಕೆಂದರೆ, ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಆಗ ಪುನೀತ್​ ಹೆಸರು ಮಾಸ್ಟರ್​ ಲೋಹಿತ್​ ಎಂದಾಗಿತ್ತು. ಹಲವಾರು ಸಿನಿಮಾಗಳಲ್ಲಿ ಅವರು ಅಪ್ಪಾಜಿ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು. ಆ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸಿನಿಮಾ ಬಗ್ಗೆ ಅಪಾರ ಅನುಭವ ದಕ್ಕಿತ್ತು.

ಪುನೀತ್​ ರಾಜ್​ಕುಮಾರ್​ ಬಾಲನಟನಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ‘ಭಾಗ್ಯವಂತ’ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಅವರು ಅತಿಥಿ ಪಾತ್ರ ಮಾಡಿದ್ದರು. ಆ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ..’ ಹಾಡು ಸೂಪರ್​ ಹಿಟ್​ ಆಗಿತ್ತು. ಕೇಳುಗರ ಫೇವರೀಟ್​ ಲಿಸ್ಟ್​ನಲ್ಲಿ ಇಂದಿಗೂ ಆ ಗೀತೆ ಸ್ಥಾನ ಪಡೆದುಕೊಂಡಿದೆ. ಅದೇ ಹಾಡನ್ನು ಮತ್ತೆ ಹಂಚಿಕೊಳ್ಳುವ ಮೂಲಕ ಅಪ್ಪಂದಿರ ದಿನಕ್ಕೆ ಪುನೀತ್​ ರಾಜ್​ಕುಮಾರ್​ ಅವರು ಶುಭಕೋರಿದ್ದಾರೆ.

ಇದನ್ನೂ ಓದಿ:

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

ಡಾ. ರಾಜ್​ಕುಮಾರ್​ ಸಹಾಯವನ್ನು ನಾನು ಯಾವತ್ತೂ ಮರೆಯುವುದಿಲ್ಲ: ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು