AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Puneeth Rajkumar: ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಹಲವಾರು ಸಿನಿಮಾಗಳಲ್ಲಿ ಅವರು ಡಾ. ರಾಜ್​ಕುಮಾರ್​ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು.

Father's Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್
ಡಾ. ರಾಜ್​ಕುಮಾರ್​, ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 20, 2021 | 9:57 AM

Share

ಅಪ್ಪ ಎಂದರೆ ಎಲ್ಲರಿಗೂ ಹೆಮ್ಮೆ. ಇಂದು (ಜೂ.20) ವಿಶ್ವ ಅಪ್ಪಂದಿರ ದಿನ ಆಚರಿಸಲಾಗುತ್ತಿದೆ. ಮಕ್ಕಳನ್ನು ಬೆಳೆಸುವ ಕಾಯಕದಲ್ಲಿ ಅಪ್ಪನ ಕೊಡುಗೆ ಅಪಾರ. ತಂದೆಗೆ ಕೃತಜ್ಞತೆ ಸಲ್ಲಿಸಲು ಇಂದು ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ವಿಶೇಷ ದಿನದಂದು ಅಪ್ಪನಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ತಮ್ಮ ಅಭಿಮಾನಿಗಳೆಲ್ಲರಿಗೂ ಅಪ್ಪಂದಿರ ದಿನದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಒಂದು ವಿಶೇಷ ಹಾಡಿನ ಮೂಲಕ ವಿಶ್​ ಮಾಡಿದ್ದಾರೆ.

ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್​ಕುಮಾರ್​ ಅವರ ಸುಪುತ್ರ ಪುನೀತ್​ ರಾಜ್​ಕುಮಾರ್​ ಅವರ ಮೇಲೆ ತಂದೆಯ ಪ್ರಭಾವ ಅಪಾರ. ಯಾಕೆಂದರೆ, ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಆಗ ಪುನೀತ್​ ಹೆಸರು ಮಾಸ್ಟರ್​ ಲೋಹಿತ್​ ಎಂದಾಗಿತ್ತು. ಹಲವಾರು ಸಿನಿಮಾಗಳಲ್ಲಿ ಅವರು ಅಪ್ಪಾಜಿ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು. ಆ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸಿನಿಮಾ ಬಗ್ಗೆ ಅಪಾರ ಅನುಭವ ದಕ್ಕಿತ್ತು.

ಪುನೀತ್​ ರಾಜ್​ಕುಮಾರ್​ ಬಾಲನಟನಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ‘ಭಾಗ್ಯವಂತ’ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಅವರು ಅತಿಥಿ ಪಾತ್ರ ಮಾಡಿದ್ದರು. ಆ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ..’ ಹಾಡು ಸೂಪರ್​ ಹಿಟ್​ ಆಗಿತ್ತು. ಕೇಳುಗರ ಫೇವರೀಟ್​ ಲಿಸ್ಟ್​ನಲ್ಲಿ ಇಂದಿಗೂ ಆ ಗೀತೆ ಸ್ಥಾನ ಪಡೆದುಕೊಂಡಿದೆ. ಅದೇ ಹಾಡನ್ನು ಮತ್ತೆ ಹಂಚಿಕೊಳ್ಳುವ ಮೂಲಕ ಅಪ್ಪಂದಿರ ದಿನಕ್ಕೆ ಪುನೀತ್​ ರಾಜ್​ಕುಮಾರ್​ ಅವರು ಶುಭಕೋರಿದ್ದಾರೆ.

ಇದನ್ನೂ ಓದಿ:

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

ಡಾ. ರಾಜ್​ಕುಮಾರ್​ ಸಹಾಯವನ್ನು ನಾನು ಯಾವತ್ತೂ ಮರೆಯುವುದಿಲ್ಲ: ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!