AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Father’s Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್

Puneeth Rajkumar: ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಹಲವಾರು ಸಿನಿಮಾಗಳಲ್ಲಿ ಅವರು ಡಾ. ರಾಜ್​ಕುಮಾರ್​ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು.

Father's Day 2021: ವಿಶೇಷ ಹಾಡಿನ ಮೂಲಕ ಅಪ್ಪಾಜಿಯನ್ನು ನೆನಪಿಸಿಕೊಂಡ ‘ಭಾಗ್ಯವಂತ’ ಪುನೀತ್​ ರಾಜ್​ಕುಮಾರ್
ಡಾ. ರಾಜ್​ಕುಮಾರ್​, ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
|

Updated on: Jun 20, 2021 | 9:57 AM

Share

ಅಪ್ಪ ಎಂದರೆ ಎಲ್ಲರಿಗೂ ಹೆಮ್ಮೆ. ಇಂದು (ಜೂ.20) ವಿಶ್ವ ಅಪ್ಪಂದಿರ ದಿನ ಆಚರಿಸಲಾಗುತ್ತಿದೆ. ಮಕ್ಕಳನ್ನು ಬೆಳೆಸುವ ಕಾಯಕದಲ್ಲಿ ಅಪ್ಪನ ಕೊಡುಗೆ ಅಪಾರ. ತಂದೆಗೆ ಕೃತಜ್ಞತೆ ಸಲ್ಲಿಸಲು ಇಂದು ಎಲ್ಲರೂ ಸೋಶಿಯಲ್​ ಮೀಡಿಯಾದಲ್ಲಿ ವಿವಿಧ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ವಿಶೇಷ ದಿನದಂದು ಅಪ್ಪನಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ತಮ್ಮ ಅಭಿಮಾನಿಗಳೆಲ್ಲರಿಗೂ ಅಪ್ಪಂದಿರ ದಿನದ ಶುಭಾಶಯಗಳನ್ನು ತಿಳಿಸಲಾಗುತ್ತಿದೆ. ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಕೂಡ ಒಂದು ವಿಶೇಷ ಹಾಡಿನ ಮೂಲಕ ವಿಶ್​ ಮಾಡಿದ್ದಾರೆ.

ಭಾರತೀಯ ಚಿತ್ರರಂಗದ ಮೇರು ನಟ ಡಾ. ರಾಜ್​ಕುಮಾರ್​ ಅವರ ಸುಪುತ್ರ ಪುನೀತ್​ ರಾಜ್​ಕುಮಾರ್​ ಅವರ ಮೇಲೆ ತಂದೆಯ ಪ್ರಭಾವ ಅಪಾರ. ಯಾಕೆಂದರೆ, ಚಿಕ್ಕ ವಯಸ್ಸಿನಿಂದಲೇ ಸಿನಿಮಾಗಳಲ್ಲಿ ನಟಿಸುತ್ತಿದ್ದ ಪುನೀತ್​ಗೆ ತಂದೆಯೇ ಮೊದಲ ಗುರು. ಆಗ ಪುನೀತ್​ ಹೆಸರು ಮಾಸ್ಟರ್​ ಲೋಹಿತ್​ ಎಂದಾಗಿತ್ತು. ಹಲವಾರು ಸಿನಿಮಾಗಳಲ್ಲಿ ಅವರು ಅಪ್ಪಾಜಿ ಜೊತೆ ನಟಿಸುವ ಅವಕಾಶ ಪಡೆದುಕೊಂಡಿದ್ದರು. ಆ ಮೂಲಕ ಚಿಕ್ಕವಯಸ್ಸಿನಲ್ಲಿಯೇ ಅವರಿಗೆ ಸಿನಿಮಾ ಬಗ್ಗೆ ಅಪಾರ ಅನುಭವ ದಕ್ಕಿತ್ತು.

ಪುನೀತ್​ ರಾಜ್​ಕುಮಾರ್​ ಬಾಲನಟನಾಗಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದ ‘ಭಾಗ್ಯವಂತ’ ಸಿನಿಮಾದಲ್ಲಿ ಡಾ. ರಾಜ್​ಕುಮಾರ್​ ಅವರು ಅತಿಥಿ ಪಾತ್ರ ಮಾಡಿದ್ದರು. ಆ ಚಿತ್ರದ ‘ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ..’ ಹಾಡು ಸೂಪರ್​ ಹಿಟ್​ ಆಗಿತ್ತು. ಕೇಳುಗರ ಫೇವರೀಟ್​ ಲಿಸ್ಟ್​ನಲ್ಲಿ ಇಂದಿಗೂ ಆ ಗೀತೆ ಸ್ಥಾನ ಪಡೆದುಕೊಂಡಿದೆ. ಅದೇ ಹಾಡನ್ನು ಮತ್ತೆ ಹಂಚಿಕೊಳ್ಳುವ ಮೂಲಕ ಅಪ್ಪಂದಿರ ದಿನಕ್ಕೆ ಪುನೀತ್​ ರಾಜ್​ಕುಮಾರ್​ ಅವರು ಶುಭಕೋರಿದ್ದಾರೆ.

ಇದನ್ನೂ ಓದಿ:

National Film Awards 2019: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ‘ಅಕ್ಷಿ’ ಚಿತ್ರಕ್ಕೂ ಡಾ. ರಾಜ್​ಕುಮಾರ್​​ಗೂ ಇದೆ ಸಂಬಂಧ!

ಡಾ. ರಾಜ್​ಕುಮಾರ್​ ಸಹಾಯವನ್ನು ನಾನು ಯಾವತ್ತೂ ಮರೆಯುವುದಿಲ್ಲ: ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More