AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು

Yuva Rajkumar | Santhosh Ananddram: ಸಂತೋಷ್​ ಆನಂದ್​ರಾಮ್​ ಅವರ ಮುಂದಿನ ಪ್ರಾಜೆಕ್ಟ್​ ಬಗ್ಗೆ ಗಾಂಧಿನಗರದಲ್ಲಿ ಗುಸುಗುಸು ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು
ಪುನೀತ್​ ರಾಜ್​ಕುಮಾರ್​, ಯುವ ರಾಜ್​ಕುಮಾರ್​, ಸಂತೋಷ್​ ಆನಂದ್​ರಾಮ್​
TV9 Web
| Edited By: |

Updated on: Apr 06, 2022 | 10:17 AM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರಿಗೆ ಸರಿಸಾಟಿ ಆಗಬಲ್ಲಂತಹ ಬೇರೊಬ್ಬ ನಟ ಇಲ್ಲ. ಚಿತ್ರರಂಗದಲ್ಲಿ ಇನ್ನೂ ಅನೇಕ ಸಾಧನೆಗಳನ್ನು ಮಾಡಬೇಕಾಗಿದ್ದ ಅವರು ಅಕಾಲಿಕ ಮರಣ ಹೊಂದಿದ್ದು ತೀವ್ರ ನೋವಿನ ಸಂಗತಿ. 2021ರ ಅ.29ರಂದು ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ನಿಧನರಾದರು. ಆಗ ಅವರ ಕೆಲವು ಸಿನಿಮಾಗಳು ಮಾತುಕಥೆಯ ಹಂತದಲ್ಲಿ ಇದ್ದವು. ಅಂತ ಅನೇಕ ಪ್ರಾಜೆಕ್ಟ್​​ಗಳು ಅರ್ಧಕ್ಕೆ ನಿಲ್ಲುವಂತಾಯಿತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ. ನಿರ್ದೇಶಕ ಸಂತೋಷ್​ ಆನಂದ್​ ರಾಮ್​ (Santhosh Ananddram) ಜೊತೆ ಪುನೀತ್​ ರಾಜ್​ಕುಮಾರ್​ ಅವರು ಇನ್ನೊಂದು ಹೊಸ ಸಿನಿಮಾ ಮಾಡಬೇಕಿತ್ತು. ಆದರೆ ಆ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಮಾಡಬೇಕಿದ್ದ ಆ ಸಿನಿಮಾ ಬಗ್ಗೆ ಈಗ ಹೊಸ ಮಾಹಿತಿ ಹರಿದಾಡುತ್ತಿದೆ. ಅದೇ ಕಥೆಯನ್ನು ಇಟ್ಟುಕೊಂಡು ಯುವ ರಾಜ್​ಕುಮಾರ್​ (Yuva Rajkumar) ಅವರಿಗೆ ಸಂತೋಷ್​ ಆನಂದ್​ ರಾಮ್​ ಆ್ಯಕ್ಷನ್​-ಕಟ್​ ಹೇಳುತ್ತಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪುನೀತ್ ರಾಜ್​ಕುಮಾರ್​ ಮತ್ತು ಸಂತೋಷ್​ ಆನಂದ್ ರಾಮ್​ ಅವರು ಕಾಂಬಿನೇಷನ್​ನಲ್ಲಿ ‘ರಾಜಕುಮಾರ’ ಮತ್ತು ‘ಯುವರತ್ನ’ ಸಿನಿಮಾ ಮೂಡಿಬಂದಿದ್ದವು. ಆ ಎರಡೂ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಅದೇ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಬೇಕಿತ್ತು. ಅದು ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ ಆಗಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿತ್ತು. ಇನ್ನೇನು ಆ ಚಿತ್ರ ಸೆಟ್ಟೇರಬೇಕು ಅನ್ನೋದಕ್ಕೂ ಮುನ್ನವೇ ಪುನೀತ್ ರಾಜ್​ಕುಮಾರ್​ ನಿಧನರಾದರು. ಹಾಗಾದರೆ ಮುಂದೇನು ಎಂಬ ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಮೂಡಿತ್ತು.

ಪುನೀತ್​ ರಾಜ್​ಕುಮಾರ್​ ಅವರಿಗಾಗಿ ಸಿದ್ಧಪಡಿಸಿದ್ದ ಕಥೆಯನ್ನು ಸ್ವಲ್ಪ ಬದಲಾವಣೆ ಮಾಡಿ, ಆ ಚಿತ್ರಕ್ಕೆ ಯುವ ರಾಜ್​ಕುಮಾರ್​ ಅವರನ್ನು ಹೀರೋ ಆಗಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ರಾಘವೇಂದ್ರ ರಾಜ್​ಕುಮಾರ್​ ಅವರ ಎರಡನೇ ಪುತ್ರನಾದ ಯುವ ರಾಜ್​ಕುಮಾರ್​ ಅವರು ಈ ಸಿನಿಮಾದಲ್ಲಿ ನಟಿಸಿದರೆ ಸೂಕ್ತ ಎಂಬ ಅಭಿಪ್ರಾಯ ಅಪ್ಪು ಅಭಿಮಾನಿಗಳ ವಲಯದಲ್ಲೂ ಕೇಳಿಬಂದಿದೆ. ಹಾಗಾಗಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ದಟ್ಟವಾಗಿದೆ. ಆ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಮಾಣ ಮಾಡಲಿದೆ ಎನ್ನಲಾಗುತ್ತಿದೆ.

ಈ ಬೆಳವಣಿಗೆಗಳ ಕುರಿತಂತೆ ಸಂತೋಷ್​ ಆನಂದ್​ ರಾಮ್​ ಅವರಾಗಲಿ, ಯುವ ರಾಜ್​ಕುಮಾರ್​ ಅವರಾಗಲಿ ಅಥವಾ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯವರಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಸದ್ಯಕ್ಕಂತೂ ಇದು ಗಾಂಧಿನಗರದ ಗುಸುಗುಸು ಸುದ್ದಿ ಮಾತ್ರ. ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಘೋಷಣೆ ಆದರೆ ಅಭಿಮಾನಿಗಳು ಖುಷಿ ಪಡಲಿದ್ದಾರೆ.

ಏ.24ರಂದು ಡಾ. ರಾಜ್​ಕುಮಾರ್​ ಜನ್ಮದಿನ. ಆ ಪ್ರಯಕ್ತ ಹೊಸ ಹೊಸ ಸಿನಿಮಾಗಳು ಅನೌನ್ಸ್​ ಆಗುತ್ತವೆ. ಅದೇ ಸಂದರ್ಭದಲ್ಲೇ ಸಂತೋಷ್​ ಆನಂದ್​ರಾಮ್​ ಮತ್ತು ಯುವ ರಾಜ್​ಕುಮಾರ್​ ಕಾಂಬಿನೇಷನ್​ನ ಚಿತ್ರದ ಬಗ್ಗೆ ಅಧಿಕೃತವಾಗಿ ಬ್ರೇಕಿಂಗ್​ ನ್ಯೂಸ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ ರಣಧೀರ ಕಂಠೀರವ’ ಚಿತ್ರ ಸಿದ್ಧವಾಗಿರಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಕೆಲಸಗಳು ವಿಳಂಬ ಆಗಿವೆ. ಇನ್ನು ನಿರ್ದೇಶಕ ಪವನ್​ ಕುಮಾರ್​ ಅವರ ಜೊತೆ ಪುನೀತ್​ ರಾಜ್​ಕುಮಾರ್​ ಅವರು ಅನೌನ್ಸ್​ ಮಾಡಿದ್ದ ‘ದ್ವಿತ್ವ’ ಸಿನಿಮಾ ಏನಾಗಲಿದೆ ಎಂಬ ಕೌತುಕ ಕೂಡ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ

ಶಾಲೆಯ ಪರೀಕ್ಷೆಯಲ್ಲಿ ಪುನೀತ್​ ಬಗ್ಗೆ ಪ್ರಶ್ನೆ; ಸಖತ್​ ವೈರಲ್​ ಆಗಿದೆ ಪ್ರಶ್ನೆಪತ್ರಿಕೆಯ ಫೋಟೋ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ