ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು

Yuva Rajkumar | Santhosh Ananddram: ಸಂತೋಷ್​ ಆನಂದ್​ರಾಮ್​ ಅವರ ಮುಂದಿನ ಪ್ರಾಜೆಕ್ಟ್​ ಬಗ್ಗೆ ಗಾಂಧಿನಗರದಲ್ಲಿ ಗುಸುಗುಸು ಮಾಹಿತಿ ಹರಿದಾಡುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು
ಪುನೀತ್​ ರಾಜ್​ಕುಮಾರ್​, ಯುವ ರಾಜ್​ಕುಮಾರ್​, ಸಂತೋಷ್​ ಆನಂದ್​ರಾಮ್​
Follow us
| Updated By: ಮದನ್​ ಕುಮಾರ್​

Updated on: Apr 06, 2022 | 10:17 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಅವರಿಗೆ ಸರಿಸಾಟಿ ಆಗಬಲ್ಲಂತಹ ಬೇರೊಬ್ಬ ನಟ ಇಲ್ಲ. ಚಿತ್ರರಂಗದಲ್ಲಿ ಇನ್ನೂ ಅನೇಕ ಸಾಧನೆಗಳನ್ನು ಮಾಡಬೇಕಾಗಿದ್ದ ಅವರು ಅಕಾಲಿಕ ಮರಣ ಹೊಂದಿದ್ದು ತೀವ್ರ ನೋವಿನ ಸಂಗತಿ. 2021ರ ಅ.29ರಂದು ಪುನೀತ್​ ರಾಜ್​ಕುಮಾರ್​ ಅವರು ಹೃದಯಾಘಾತದಿಂದ ನಿಧನರಾದರು. ಆಗ ಅವರ ಕೆಲವು ಸಿನಿಮಾಗಳು ಮಾತುಕಥೆಯ ಹಂತದಲ್ಲಿ ಇದ್ದವು. ಅಂತ ಅನೇಕ ಪ್ರಾಜೆಕ್ಟ್​​ಗಳು ಅರ್ಧಕ್ಕೆ ನಿಲ್ಲುವಂತಾಯಿತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ. ನಿರ್ದೇಶಕ ಸಂತೋಷ್​ ಆನಂದ್​ ರಾಮ್​ (Santhosh Ananddram) ಜೊತೆ ಪುನೀತ್​ ರಾಜ್​ಕುಮಾರ್​ ಅವರು ಇನ್ನೊಂದು ಹೊಸ ಸಿನಿಮಾ ಮಾಡಬೇಕಿತ್ತು. ಆದರೆ ಆ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನವೇ ಅವರು ಇಹಲೋಕ ತ್ಯಜಿಸಿದರು. ಅಪ್ಪು ಮಾಡಬೇಕಿದ್ದ ಆ ಸಿನಿಮಾ ಬಗ್ಗೆ ಈಗ ಹೊಸ ಮಾಹಿತಿ ಹರಿದಾಡುತ್ತಿದೆ. ಅದೇ ಕಥೆಯನ್ನು ಇಟ್ಟುಕೊಂಡು ಯುವ ರಾಜ್​ಕುಮಾರ್​ (Yuva Rajkumar) ಅವರಿಗೆ ಸಂತೋಷ್​ ಆನಂದ್​ ರಾಮ್​ ಆ್ಯಕ್ಷನ್​-ಕಟ್​ ಹೇಳುತ್ತಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪುನೀತ್ ರಾಜ್​ಕುಮಾರ್​ ಮತ್ತು ಸಂತೋಷ್​ ಆನಂದ್ ರಾಮ್​ ಅವರು ಕಾಂಬಿನೇಷನ್​ನಲ್ಲಿ ‘ರಾಜಕುಮಾರ’ ಮತ್ತು ‘ಯುವರತ್ನ’ ಸಿನಿಮಾ ಮೂಡಿಬಂದಿದ್ದವು. ಆ ಎರಡೂ ಸಿನಿಮಾಗಳಿಗೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಬಂಡವಾಳ ಹೂಡಿತ್ತು. ಅದೇ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಬೇಕಿತ್ತು. ಅದು ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ ಆಗಿರಲಿದೆ ಎಂಬ ಮಾಹಿತಿ ಕೂಡ ಹೊರಬಿದ್ದಿತ್ತು. ಇನ್ನೇನು ಆ ಚಿತ್ರ ಸೆಟ್ಟೇರಬೇಕು ಅನ್ನೋದಕ್ಕೂ ಮುನ್ನವೇ ಪುನೀತ್ ರಾಜ್​ಕುಮಾರ್​ ನಿಧನರಾದರು. ಹಾಗಾದರೆ ಮುಂದೇನು ಎಂಬ ಪ್ರಶ್ನೆ ಸಿನಿಪ್ರಿಯರ ಮನದಲ್ಲಿ ಮೂಡಿತ್ತು.

ಪುನೀತ್​ ರಾಜ್​ಕುಮಾರ್​ ಅವರಿಗಾಗಿ ಸಿದ್ಧಪಡಿಸಿದ್ದ ಕಥೆಯನ್ನು ಸ್ವಲ್ಪ ಬದಲಾವಣೆ ಮಾಡಿ, ಆ ಚಿತ್ರಕ್ಕೆ ಯುವ ರಾಜ್​ಕುಮಾರ್​ ಅವರನ್ನು ಹೀರೋ ಆಗಿಸುವ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದೆ. ರಾಘವೇಂದ್ರ ರಾಜ್​ಕುಮಾರ್​ ಅವರ ಎರಡನೇ ಪುತ್ರನಾದ ಯುವ ರಾಜ್​ಕುಮಾರ್​ ಅವರು ಈ ಸಿನಿಮಾದಲ್ಲಿ ನಟಿಸಿದರೆ ಸೂಕ್ತ ಎಂಬ ಅಭಿಪ್ರಾಯ ಅಪ್ಪು ಅಭಿಮಾನಿಗಳ ವಲಯದಲ್ಲೂ ಕೇಳಿಬಂದಿದೆ. ಹಾಗಾಗಿ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ದಟ್ಟವಾಗಿದೆ. ಆ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ನಿರ್ಮಾಣ ಮಾಡಲಿದೆ ಎನ್ನಲಾಗುತ್ತಿದೆ.

ಈ ಬೆಳವಣಿಗೆಗಳ ಕುರಿತಂತೆ ಸಂತೋಷ್​ ಆನಂದ್​ ರಾಮ್​ ಅವರಾಗಲಿ, ಯುವ ರಾಜ್​ಕುಮಾರ್​ ಅವರಾಗಲಿ ಅಥವಾ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಯವರಾಗಲಿ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಸದ್ಯಕ್ಕಂತೂ ಇದು ಗಾಂಧಿನಗರದ ಗುಸುಗುಸು ಸುದ್ದಿ ಮಾತ್ರ. ಶೀಘ್ರದಲ್ಲೇ ಈ ಬಗ್ಗೆ ಸೂಕ್ತ ಘೋಷಣೆ ಆದರೆ ಅಭಿಮಾನಿಗಳು ಖುಷಿ ಪಡಲಿದ್ದಾರೆ.

ಏ.24ರಂದು ಡಾ. ರಾಜ್​ಕುಮಾರ್​ ಜನ್ಮದಿನ. ಆ ಪ್ರಯಕ್ತ ಹೊಸ ಹೊಸ ಸಿನಿಮಾಗಳು ಅನೌನ್ಸ್​ ಆಗುತ್ತವೆ. ಅದೇ ಸಂದರ್ಭದಲ್ಲೇ ಸಂತೋಷ್​ ಆನಂದ್​ರಾಮ್​ ಮತ್ತು ಯುವ ರಾಜ್​ಕುಮಾರ್​ ಕಾಂಬಿನೇಷನ್​ನ ಚಿತ್ರದ ಬಗ್ಗೆ ಅಧಿಕೃತವಾಗಿ ಬ್ರೇಕಿಂಗ್​ ನ್ಯೂಸ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಎಲ್ಲವೂ ಪ್ಲ್ಯಾನ್​ ಪ್ರಕಾರವೇ ನಡೆದಿದ್ದರೆ ಯುವ ರಾಜ್​ಕುಮಾರ್ ನಟನೆಯ ಮೊದಲ ಸಿನಿಮಾ ‘ಯುವ ರಣಧೀರ ಕಂಠೀರವ’ ಚಿತ್ರ ಸಿದ್ಧವಾಗಿರಬೇಕಿತ್ತು. ಕಾರಣಾಂತರಗಳಿಂದ ಆ ಸಿನಿಮಾ ಕೆಲಸಗಳು ವಿಳಂಬ ಆಗಿವೆ. ಇನ್ನು ನಿರ್ದೇಶಕ ಪವನ್​ ಕುಮಾರ್​ ಅವರ ಜೊತೆ ಪುನೀತ್​ ರಾಜ್​ಕುಮಾರ್​ ಅವರು ಅನೌನ್ಸ್​ ಮಾಡಿದ್ದ ‘ದ್ವಿತ್ವ’ ಸಿನಿಮಾ ಏನಾಗಲಿದೆ ಎಂಬ ಕೌತುಕ ಕೂಡ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ

ಶಾಲೆಯ ಪರೀಕ್ಷೆಯಲ್ಲಿ ಪುನೀತ್​ ಬಗ್ಗೆ ಪ್ರಶ್ನೆ; ಸಖತ್​ ವೈರಲ್​ ಆಗಿದೆ ಪ್ರಶ್ನೆಪತ್ರಿಕೆಯ ಫೋಟೋ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ