Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಸಂಭ್ರಮ: ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಯಲ್ಲಿ ಪುನೀತ್ ರಾಜ್​ಕುಮಾರ್​​ಗೆ ಭರ್ಜರಿ ಸ್ವಾಗತ

ಯುವರತ್ನ ಚಿತ್ರತಂಡ ಎರಡನೆಯದಾಗಿ ಬೆಳಗಾವಿಗೆ ತೆರಳಿದೆ. ಈ ವೇಳೆ, ಡೊಳ್ಳು ಬಾರಿಸಿ, ಹೂಮಳೆ ಸುರಿಸಿ ಪುನೀತ್​​ಗೆ ಸ್ವಾಗತ ಕೋರಲಾಗಿದೆ.

ಯುವ ಸಂಭ್ರಮ: ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಯಲ್ಲಿ ಪುನೀತ್ ರಾಜ್​ಕುಮಾರ್​​ಗೆ ಭರ್ಜರಿ ಸ್ವಾಗತ
ಕಲಬುರಗಿಯಲ್ಲಿ ಯುವರತ್ನ ತಂಡ
Follow us
ರಾಜೇಶ್ ದುಗ್ಗುಮನೆ
| Updated By: Praveen Sahu

Updated on:Mar 23, 2021 | 12:36 PM

ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಮತ್ತು ನಟ ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ನ ಯುವರತ್ನ ಸಿನಿಮಾ ಏ.1ರಂದು ತೆರೆಕಾಣುತ್ತಿದೆ. ಅದಕ್ಕೂ ಮುನ್ನ ಯುವರತ್ನ ತಂಡ ‘ಯುವ ಸಂಭ್ರಮ’ ಹೆಸರಲ್ಲಿ ರಾಜ್ಯಾದ್ಯಂತ ಸಂಚಾರ ಮಾಡಿ ಪ್ರಚಾರ ಮಾಡುತ್ತಿದೆ. ಇಂದಿನಿಂದ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಇಂದು ಬೆಳಗ್ಗೆ ಯುವರತ್ನ ಚಿತ್ರತಂಡ ಮೊದಲಿಗೆ ಕಲಬುರಗಿಗೆ ಭೇಟಿ ನೀಡಿತು. ಈ ವೇಳೆ ಮಾತನಾಡಿದ ಪುನೀತ್​, ಲಾಕ್​ಡೌನ್ ತೆರವಾದ ನಂತರ ಮೊದಲ ಬಂದಿದ್ದು ಕಲಬುರಗಿಗೆ. ನಿಮ್ಮನ್ನ ನೋಡಬೇಕು ಎಂದೇ ನಾನು ಇಲ್ಲಿಗೆ ಬಂದಿದ್ದೇನೆ. ಇಲ್ಲಿಗೆ ಬಂದಿದ್ದು ತುಂಬಾ ಸಂತೋಷ ತಂದಿದೆ. ಮುಂದಿನ ದಿನದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ನಮ್ಮ ಸಿನಿಮಾ ಶೂಟಿಂಗ್ ಮಾಡುತ್ತೇವೆ. ಯುವರತ್ನ ಚಿತ್ರ ನೋಡಿ ಬೆಂಬಲಿಸಿ ಎಂದು ಕೋರಿದರು.

ಬೆಳಗಾವಿಯಲ್ಲಿ ಡೊಳ್ಳು ಬಾರಿಸಿ ಸ್ವಾಗತ ಯುವರತ್ನ ಚಿತ್ರತಂಡ ಎರಡನೆಯದಾಗಿ ಬೆಳಗಾವಿಗೆ ತೆರಳಿದೆ. ಈ ವೇಳೆ, ಡೊಳ್ಳು ಬಾರಿಸಿ, ಹೂಮಳೆ ಸುರಿಸಿ ಪುನೀತ್​​ಗೆ ಸ್ವಾಗತ ಕೋರಲಾಗಿದೆ. ಪುನೀತ್​ ಆಗಮಿಸುವಾಗ ಕನ್ನಡದ ಬಾವುಟಗಳು ರಾರಾಜಿಸಿವೆ. ಈ ವೇಳೆ ಪುನೀತ್​ ‘ಯುವರತ್ನ’ ಚಿತ್ರದ ಡೈಲಾಗ್ ಹೊಡೆದು ಅಭಿಮಾನಿಗಳನ್ನು ರಂಜಿಸಿದ್ದಾರೆ……

ಹುಬ್ಬಳ್ಳಿಗೂ ಭೇಟಿ ಪುನೀತ್​ ರಾಜ್​ಕುಮಾರ್​ ಹುಬ್ಬಳ್ಳಿಗೂ ಭೇಟಿ ನೀಡುತ್ತಿದ್ದಾರೆ. ನಗರದ ಅರ್ಬನ್ ಓಯಸಿಸ್ ಮಾಲ್ ಎದುರು ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಜಮಾಯಿಸಿದ್ದಾರೆ.

ನಾಳೆಯ ವೇಳಾಪಟ್ಟಿ:

ಎರಡರನೇ ದಿನ (ಮಾ.22) ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರಿಗೆ ಪುನೀತ್​ ಬರಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಬಳ್ಳಾರಿಯ ದುರ್ಗಾಂಬ ದೇವಸ್ಥಾನ, ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣ ಮತ್ತು ಸಂಜೆ 4.30ಕ್ಕೆ ತುಮಕೂರಿನ ಎಸ್​ಐಟಿ ಇಂಜಿನಿಯರಿಂಗ್​ ಕಾಲೇಜು ಮೈದಾನದಲ್ಲಿ ಅಭಿಮಾನಿಗಳನ್ನು ಪುನೀತ್​ ಭೇಟಿ ಆಗಲಿದ್ದಾರೆ.

ಮಾ.23ರಂದು ಮೈಸೂರು ಮತ್ತು ಮಂಡ್ಯದಲ್ಲಿ ಯುವರತ್ನ ಟೀಮ್​ ಹಾಜರಿ ಹಾಕಲಿದೆ. ಮೈಸೂರು ಮಾನಸ ಗಂಗೋತ್ರಿ ಕ್ಯಾಂಪಸ್​ನ ಓಪನ್​ ಏರ್​ ಥಿಯೇಟರ್​ನಲ್ಲಿ ಬೆಳಗ್ಗೆ 10 ಗಂಟೆಗೆ ಪುನೀತ್​ ಆಗಮಿಸಲಿದ್ದಾರೆ. ಮಂಡ್ಯದ ಸಿಲ್ವರ್​ ಬ್ಯುಬ್ಲಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ‘ಪವರ್​ ಸ್ಟಾರ್​’ ತಮ್ಮ ಅಭಿಮಾನಿಗಳ ಜೊತೆ ಬೆರೆಯಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಮಾಹಿತಿ ನೀಡಿದೆ. ಇಷ್ಟೇ ಅಲ್ಲದೆ, ಇನ್ನಷ್ಟು ಜಿಲ್ಲೆಗಳಿಗೆ ಯುವರತ್ನ ತಂಡದ ಜೊತೆ ಪುನೀತ್​ ರಾಜ್​ಕುಮಾರ್ ಭೇಟಿ ನೀಡಲಿದ್ದಾರೆ. ಅವರ ವೇಳಾಪಟ್ಟಿಯನ್ನು ಚಿತ್ರತಂಡ ಶೀಘ್ರವೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: Puneeth Rajkumar: ಯುವರತ್ನ ಟೀಮ್​ ಜೊತೆ ಪುನೀತ್​ ನಿಮ್ಮೂರಿಗೆ ಬರೋದು ಯಾವತ್ತು? ಇಲ್ಲಿದೆ ಫುಲ್​ ವೇಳಾಪಟ್ಟಿ!

Published On - 5:41 pm, Sun, 21 March 21

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ