AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಸ್ಟಾರ್​ ನಟನ ಎದುರು ಪುನೀತ್​ ಬಾಕ್ಸ್​ ಆಫೀಸ್​ ವಾರ್​! ಯುವರತ್ನ ಚಿತ್ರದ ಎದುರಾಳಿ ಯಾರು?

ಕನ್ನಡ ಸಿನಿಮಾಗಳು ಕರ್ನಾಟಕದ ಗಡಿದಾಡಿ ಅಬ್ಬರಿಸುತ್ತಿವೆ. ಪರಭಾಷೆಯ ಸ್ಟಾರ್​ ನಟರ ಎದುರು ಸ್ಯಾಂಡಲ್​ವುಡ್​ ಹೀರೋಗಳು ಹಣಾಹಣಿ ನಡೆಸಬೇಕಿದೆ.

ತೆಲುಗು ಸ್ಟಾರ್​ ನಟನ ಎದುರು ಪುನೀತ್​ ಬಾಕ್ಸ್​ ಆಫೀಸ್​ ವಾರ್​! ಯುವರತ್ನ ಚಿತ್ರದ ಎದುರಾಳಿ ಯಾರು?
ಪುನೀತ್​ ರಾಜ್​ಕುಮಾರ್​
ಮದನ್​ ಕುಮಾರ್​
| Edited By: ಆಯೇಷಾ ಬಾನು|

Updated on:Mar 17, 2021 | 6:33 AM

Share

ಚಂದನವನದಲ್ಲೀಗ ಪ್ಯಾನ್​ ಇಂಡಿಯಾ ಸಿನಿಮಾಗಳ ಟ್ರೆಂಡ್​ ಹೆಚ್ಚುತ್ತಿದೆ. ಕನ್ನಡದ ಜೊತೆ ಬೇರೆ ಭಾಷೆಗಳಿಗೆ ಡಬ್​ ಮಾಡಿ ಬಿಡುಗಡೆ ಮಾಡುವ ಸೂತ್ರಕ್ಕೆ ನಿರ್ಮಾಪಕರು ಗಂಟು ಬಿದ್ದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಟನೆಯ ‘ಯುವರತ್ನ’ ಸಿನಿಮಾ ಕೂಡ ಟಾಲಿವುಡ್​ ಮಂದಿಗೆ ಪೈಪೋಟಿ ನೀಡಲು ಸಜ್ಜಾಗಿದೆ.

ಕನ್ನಡದ ಸ್ಟಾರ್​ ನಟರ ಚಿತ್ರಗಳು ತಮಿಳು, ತೆಲುಗಿಗೆ ಡಬ್​ ಆಗುತ್ತಿವೆ. ಇತ್ತೀಚೆಗೆ ‘ಪೊಗರು’ ಸಿನಿಮಾ ಈ ಮಾರ್ಗ ಅನುಸರಿಸಿತ್ತು. ರಾಬರ್ಟ್​ ಚಿತ್ರ ತೆಲುಗಿನಲ್ಲೂ ಬಿಡುಗಡೆ ಆಯಿತು. ಹಾಗೆಯೇ ಯುವರತ್ನ ಸಿನಿಮಾ ಸಹ ತೆಲುಗಿಗೆ ಡಬ್​ ಆಗಿದೆ. ಏಪ್ರಿಲ್​ 1ರಂದು ಈ ಚಿತ್ರದ ಕನ್ನಡ ಮತ್ತು ತೆಲುಗು ವರ್ಷನ್​ ತೆರೆ ಕಾಣಲಿದೆ. ಕರ್ನಾಟಕದಲ್ಲಿ ಪುನೀತ್​ಗೆ ಯಾರೂ ಪೈಪೋಟಿ ನೀಡುತ್ತಿಲ್ಲ. ಆದರೆ ಆಂಧ್ರ ಮತ್ತು ತೆಲಂಗಾಣದಲ್ಲಿ ಗಲ್ಲಾ ಪೆಟ್ಟಿಗೆ ಸಮರ ಖಂಡಿತಾ ಆಗಲಿದೆ.

ಏ.1ರಂದು ‘ಯುವರತ್ನ’ ತೆರೆಕಂಡರೆ, ಮರುದಿನವೇ (ಏ.2) ತೆಲುಗಿನ ‘ವೈಲ್ಡ್​ ಡಾಗ್​​’ ಚಿತ್ರ ಬಿಡುಗಡೆ ಆಗಲಿದೆ. ಆ ಸಿನಿಮಾದಲ್ಲಿ ಅಕ್ಕಿನೇನಿ ನಾಗಾರ್ಜುನ ಹೀರೋ. ಸಸ್ಪೆನ್ಸ್​ ಥ್ರಿಲ್ಲರ್​ ಮಾದರಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಭಯೋತ್ಪಾದಕ ನಿಗ್ರಹ ದಳದ ಆಫೀಸರ್​ ಆಗಿ ನಾಗಾರ್ಜುನ ನಟಿಸಿದ್ದಾರೆ. ದಿಯಾ ಮಿರ್ಜಾ, ಅತುಲ್​ ಕುಲಕರ್ಣಿ ಮುಂತಾದ ಖ್ಯಾತ ಕಲಾವಿದರು ಸಾಥ್​ ನೀಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಕನ್ನಡದ ಸಿನಿಮಾಗಳಿಗೆ ಆಂಧ್ರ ಮತ್ತು ತೆಲಂಗಾಣದಲ್ಲಿ ಈಗ ಚಿತ್ರಮಂದಿರಗಳು ಸಿಗುತ್ತಿವೆ. ಆದರೆ ಅಲ್ಲಿನ ಸ್ಟಾರ್​ ನಟರ ಚಿತ್ರಗಳ ಜೊತೆ ಕನ್ನಡ ಸಿನಿಮಾಗಳು ಪೈಪೋಟಿ ನೀಡಬೇಕು. ಈಗ ಏಪ್ರಿಲ್​ ಮೊದಲ ವಾರದಲ್ಲಿ ನಾಗಾರ್ಜುನ ನಟನೆಯ ವೈಲ್ಡ್​ ಡಾಗ್​ ಚಿತ್ರದ ಎದುರು ಯುವರತ್ನ ಸಿನಿಮಾ ಸ್ಪರ್ಧಿಸಬೇಕಿದೆ.

ಇದನ್ನೂ ಓದಿ: ಬೆಟ್ಟದಷ್ಟು ಆಸೆ ಇಟ್ಟುಕೊಂಡಿದ್ದ ಪುನೀತ್​ ಫ್ಯಾನ್ಸ್​ಗೆ ಭಾರೀ ನಿರಾಸೆ! ಆದರೂ ಒಂದು ಗುಡ್​ ನ್ಯೂಸ್​

Puneeth Rajkumar: ಯುವರತ್ನ ರಿಲೀಸ್​ಗೂ ಮುನ್ನವೇ ಧಾರಾವಾಹಿ ಕಡೆಗೆ ಗಮನ ಹರಿಸಿದ ಪುನೀತ್​ ರಾಜ್​ಕುಮಾರ್​! ಅಭಿಮಾನಿಗಳಿಗೆ ಸರ್ಪ್ರೈಸ್​

Published On - 6:29 am, Wed, 17 March 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ