AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಯುವರತ್ನ ಟೀಮ್​ ಜೊತೆ ಪುನೀತ್​ ನಿಮ್ಮೂರಿಗೆ ಬರೋದು ಯಾವತ್ತು? ಇಲ್ಲಿದೆ ಫುಲ್​ ವೇಳಾಪಟ್ಟಿ!

Yuvarathnaa: ಬಹುನಿರೀಕ್ಷಿತ ‘ಯುವರತ್ನ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಆ ಸಲುವಾಗಿ ಪುನೀತ್​ ರಾಜ್​ಕುಮಾರ್​ ಅವರು ರಾಜ್ಯಾದ್ಯಂತ ಸಂಚರಿಸಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

Puneeth Rajkumar: ಯುವರತ್ನ ಟೀಮ್​ ಜೊತೆ ಪುನೀತ್​ ನಿಮ್ಮೂರಿಗೆ ಬರೋದು ಯಾವತ್ತು? ಇಲ್ಲಿದೆ ಫುಲ್​ ವೇಳಾಪಟ್ಟಿ!
ಯುವರತ್ನ ಸಿನಿಮಾದಲ್ಲಿ ಪುನೀತ್​ - ಧನಂಜಯ
Follow us
ಮದನ್​ ಕುಮಾರ್​
|

Updated on:Mar 21, 2021 | 8:11 AM

ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಮತ್ತು ನಟ ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ನ ಯುವರತ್ನ ಸಿನಿಮಾ ಏ.1ರಂದು ತೆರೆಕಾಣಲು ಸಜ್ಜಾಗಿದೆ. ಅದಕ್ಕೂ ಮುನ್ನ ಇಡೀ ಯುವರತ್ನ ತಂಡ ರಾಜ್ಯಾದ್ಯಂತ ಸಂಚಾರ ಮಾಡಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ಪ್ಲ್ಯಾನ್​ ಮಾಡಿಕೊಂಡಿದೆ. ಪುನೀತ್​ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ, ಅಲ್ಲಿರುವ ತಮ್ಮ ಅಭಿಮಾನಿಗಳ ಜೊತೆ ಕಾಲ ಕಳೆಯಲಿದ್ದಾರೆ. ಹಾಗಾದರೆ ಯಾವ ಯಾವ ಊರಿಗೆ ಅಪ್ಪು ಭೇಟಿ ನೀಡಲಿದ್ದಾರೆ? ಅವರು ನಿಮ್ಮ ಊರಿಗೆ ಬರುವ ದಿನಾಂಕ ಯಾವುದು? ಇಲ್ಲಿದೆ ವೇಳಾ ಪಟ್ಟಿ.

ಈ ಬಾರಿ ಹುಟ್ಟುಹಬ್ಬದ ದಿನ ಪುನೀತ್​ ತಮ್ಮ ಮನೆ ಬಳಿ ಯಾವುದೇ ಅಭಿಮಾನಿಗಳನ್ನೂ ಭೇಟಿ ಆಗಿರಲಿಲ್ಲ. ಅದರ ಬದಲಿಗೆ ತಾವೇ ತಮ್ಮ ಅಭಿಮಾನಿಗಳ ಊರಿಗೆ ತೆರಳಬೇಕು ಎಂದು ನಿರ್ಧರಿಸಿದ್ದರು. ಅದಕ್ಕಾಗಿ ಮೈಸೂರಿನಲ್ಲಿ ನಡೆಯಬೇಕಿದ್ದ ಯುವಸಂಭ್ರಮ (ಪ್ರೀ-ರಿಲೀಸ್​) ಕಾರ್ಯಕ್ರಮವನ್ನು ರದ್ದು ಮಾಡಿಕೊಂಡು, ರಾಜ್ಯದ ಪ್ರತಿ ಜಿಲ್ಲೆಗೂ ತಾವೇ ಭೇಟಿ ನೀಡುವುದಾಗಿ ತಿಳಿಸಿದ್ದರು. ಈಗ ಅವರ ಶೆಡ್ಯೂಲ್​ ಹೇಗಿದೆ ಎಂಬ ಮಾಹಿತಿ ಕೂಡ ಹೊರ ಬಿದ್ದಿದೆ.

ಮೊದಲ ಹಂತವಾಗಿ ಮಾ.21ರಿಂದ 23ರವರೆಗೆ ಯುವಸಂಭ್ರಮ ಯಾತ್ರೆ ಶುರು ಆಗಲಿದೆ. 21ರಂದು ಕಲಬುರಗಿ, ಬೆಳಗಾವಿ ಮತ್ತು ಹುಬ್ಬಳಿಗೆ ಅಪ್ಪು ಭೇಟಿ ನೀಡಲಿದ್ದಾರೆ. ಕಲಬುರಗಿಯ ಏಷಿಯನ್​ ಮಾಲ್​ ಪಕ್ಕ ಬೆಳಗ್ಗೆ 10.30ಕ್ಕೆ, ಬೆಳಗಾವಿಯಲ್ಲಿ ಐನಾಕ್ಸ್​ ಚಂದನ್​ ಪಾರ್ಕಿಂಗ್​ನಲ್ಲಿ​ ಮಧ್ಯಾಹ್ನ 1 ಗಂಟೆಗೆ ಹಾಗೂ ಹುಬ್ಬಳಿಯ ಅರ್ಬನ್​ ಓಯಾಸಿಸ್​ ಮಾಲ್​ ಹತ್ತಿರ ಸಂಜೆ 4.30ಕ್ಕೆ ಪುನೀತ್​ ಅಭಿಮಾನಿಗಳಿಗೆ ಸಿಗಲಿದ್ದಾರೆ.

ಎರಡರನೇ ದಿನ (ಮಾ.22) ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರಿಗೆ ಪುನೀತ್​ ಬರಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಬಳ್ಳಾರಿಯ ದುರ್ಗಾಂಬ ದೇವಸ್ಥಾನ, ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣ ಮತ್ತು ಸಂಜೆ 4.30ಕ್ಕೆ ತುಮಕೂರಿನ ಎಸ್​ಐಟಿ ಇಂಜಿನಿಯರಿಂಗ್​ ಕಾಲೇಜು ಮೈದಾನದಲ್ಲಿ ಅಭಿಮಾನಿಗಳನ್ನು ಪುನೀತ್​ ಭೇಟಿ ಆಗಲಿದ್ದಾರೆ.

ಮಾ.23ರಂದು ಮೈಸೂರು ಮತ್ತು ಮಂಡ್ಯದಲ್ಲಿ ಯುವರತ್ನ ಟೀಮ್​ ಹಾಜರಿ ಹಾಕಲಿದೆ. ಮೈಸೂರು ಮಾನಸ ಗಂಗೋತ್ರಿ ಕ್ಯಾಂಪಸ್​ನ ಓಪನ್​ ಏರ್​ ಥಿಯೇಟರ್​ನಲ್ಲಿ ಬೆಳಗ್ಗೆ 10 ಗಂಟೆಗೆ ಪುನೀತ್​ ಆಗಮಿಸಲಿದ್ದಾರೆ. ಮಂಡ್ಯದ ಸಿಲ್ವರ್​ ಬ್ಯುಬ್ಲಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ‘ಪವರ್​ ಸ್ಟಾರ್​’ ತಮ್ಮ ಅಭಿಮಾನಿಗಳ ಜೊತೆ ಬೆರೆಯಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಮಾಹಿತಿ ನೀಡಿದೆ.

ಇಷ್ಟೇ ಅಲ್ಲದೆ, ಇನ್ನಷ್ಟು ಜಿಲ್ಲೆಗಳಿಗೆ ಯುವರತ್ನ ತಂಡದ ಜೊತೆ ಪುನೀತ್​ ರಾಜ್​ಕುಮಾರ್ ಭೇಟಿ ನೀಡಲಿದ್ದಾರೆ. ಅವರ ವೇಳಾಪಟ್ಟಿಯನ್ನು ಚಿತ್ರತಂಡ ಶೀಘ್ರವೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?

Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​

Published On - 8:08 am, Sun, 21 March 21

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್