Puneeth Rajkumar: ಯುವರತ್ನ ಟೀಮ್​ ಜೊತೆ ಪುನೀತ್​ ನಿಮ್ಮೂರಿಗೆ ಬರೋದು ಯಾವತ್ತು? ಇಲ್ಲಿದೆ ಫುಲ್​ ವೇಳಾಪಟ್ಟಿ!

Yuvarathnaa: ಬಹುನಿರೀಕ್ಷಿತ ‘ಯುವರತ್ನ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಆ ಸಲುವಾಗಿ ಪುನೀತ್​ ರಾಜ್​ಕುಮಾರ್​ ಅವರು ರಾಜ್ಯಾದ್ಯಂತ ಸಂಚರಿಸಿ ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.

Puneeth Rajkumar: ಯುವರತ್ನ ಟೀಮ್​ ಜೊತೆ ಪುನೀತ್​ ನಿಮ್ಮೂರಿಗೆ ಬರೋದು ಯಾವತ್ತು? ಇಲ್ಲಿದೆ ಫುಲ್​ ವೇಳಾಪಟ್ಟಿ!
ಯುವರತ್ನ ಸಿನಿಮಾದಲ್ಲಿ ಪುನೀತ್​ - ಧನಂಜಯ

Updated on: Mar 21, 2021 | 8:11 AM

ನಿರ್ದೇಶಕ ಸಂತೋಷ್​ ಆನಂದ್​ ರಾಮ್​ ಮತ್ತು ನಟ ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ನ ಯುವರತ್ನ ಸಿನಿಮಾ ಏ.1ರಂದು ತೆರೆಕಾಣಲು ಸಜ್ಜಾಗಿದೆ. ಅದಕ್ಕೂ ಮುನ್ನ ಇಡೀ ಯುವರತ್ನ ತಂಡ ರಾಜ್ಯಾದ್ಯಂತ ಸಂಚಾರ ಮಾಡಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲು ಪ್ಲ್ಯಾನ್​ ಮಾಡಿಕೊಂಡಿದೆ. ಪುನೀತ್​ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ, ಅಲ್ಲಿರುವ ತಮ್ಮ ಅಭಿಮಾನಿಗಳ ಜೊತೆ ಕಾಲ ಕಳೆಯಲಿದ್ದಾರೆ. ಹಾಗಾದರೆ ಯಾವ ಯಾವ ಊರಿಗೆ ಅಪ್ಪು ಭೇಟಿ ನೀಡಲಿದ್ದಾರೆ? ಅವರು ನಿಮ್ಮ ಊರಿಗೆ ಬರುವ ದಿನಾಂಕ ಯಾವುದು? ಇಲ್ಲಿದೆ ವೇಳಾ ಪಟ್ಟಿ.

ಈ ಬಾರಿ ಹುಟ್ಟುಹಬ್ಬದ ದಿನ ಪುನೀತ್​ ತಮ್ಮ ಮನೆ ಬಳಿ ಯಾವುದೇ ಅಭಿಮಾನಿಗಳನ್ನೂ ಭೇಟಿ ಆಗಿರಲಿಲ್ಲ. ಅದರ ಬದಲಿಗೆ ತಾವೇ ತಮ್ಮ ಅಭಿಮಾನಿಗಳ ಊರಿಗೆ ತೆರಳಬೇಕು ಎಂದು ನಿರ್ಧರಿಸಿದ್ದರು. ಅದಕ್ಕಾಗಿ ಮೈಸೂರಿನಲ್ಲಿ ನಡೆಯಬೇಕಿದ್ದ ಯುವಸಂಭ್ರಮ (ಪ್ರೀ-ರಿಲೀಸ್​) ಕಾರ್ಯಕ್ರಮವನ್ನು ರದ್ದು ಮಾಡಿಕೊಂಡು, ರಾಜ್ಯದ ಪ್ರತಿ ಜಿಲ್ಲೆಗೂ ತಾವೇ ಭೇಟಿ ನೀಡುವುದಾಗಿ ತಿಳಿಸಿದ್ದರು. ಈಗ ಅವರ ಶೆಡ್ಯೂಲ್​ ಹೇಗಿದೆ ಎಂಬ ಮಾಹಿತಿ ಕೂಡ ಹೊರ ಬಿದ್ದಿದೆ.

ಮೊದಲ ಹಂತವಾಗಿ ಮಾ.21ರಿಂದ 23ರವರೆಗೆ ಯುವಸಂಭ್ರಮ ಯಾತ್ರೆ ಶುರು ಆಗಲಿದೆ. 21ರಂದು ಕಲಬುರಗಿ, ಬೆಳಗಾವಿ ಮತ್ತು ಹುಬ್ಬಳಿಗೆ ಅಪ್ಪು ಭೇಟಿ ನೀಡಲಿದ್ದಾರೆ. ಕಲಬುರಗಿಯ ಏಷಿಯನ್​ ಮಾಲ್​ ಪಕ್ಕ ಬೆಳಗ್ಗೆ 10.30ಕ್ಕೆ, ಬೆಳಗಾವಿಯಲ್ಲಿ ಐನಾಕ್ಸ್​ ಚಂದನ್​ ಪಾರ್ಕಿಂಗ್​ನಲ್ಲಿ​ ಮಧ್ಯಾಹ್ನ 1 ಗಂಟೆಗೆ ಹಾಗೂ ಹುಬ್ಬಳಿಯ ಅರ್ಬನ್​ ಓಯಾಸಿಸ್​ ಮಾಲ್​ ಹತ್ತಿರ ಸಂಜೆ 4.30ಕ್ಕೆ ಪುನೀತ್​ ಅಭಿಮಾನಿಗಳಿಗೆ ಸಿಗಲಿದ್ದಾರೆ.

ಎರಡರನೇ ದಿನ (ಮಾ.22) ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರಿಗೆ ಪುನೀತ್​ ಬರಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಬಳ್ಳಾರಿಯ ದುರ್ಗಾಂಬ ದೇವಸ್ಥಾನ, ಮಧ್ಯಾಹ್ನ 1 ಗಂಟೆಗೆ ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣ ಮತ್ತು ಸಂಜೆ 4.30ಕ್ಕೆ ತುಮಕೂರಿನ ಎಸ್​ಐಟಿ ಇಂಜಿನಿಯರಿಂಗ್​ ಕಾಲೇಜು ಮೈದಾನದಲ್ಲಿ ಅಭಿಮಾನಿಗಳನ್ನು ಪುನೀತ್​ ಭೇಟಿ ಆಗಲಿದ್ದಾರೆ.

ಮಾ.23ರಂದು ಮೈಸೂರು ಮತ್ತು ಮಂಡ್ಯದಲ್ಲಿ ಯುವರತ್ನ ಟೀಮ್​ ಹಾಜರಿ ಹಾಕಲಿದೆ. ಮೈಸೂರು ಮಾನಸ ಗಂಗೋತ್ರಿ ಕ್ಯಾಂಪಸ್​ನ ಓಪನ್​ ಏರ್​ ಥಿಯೇಟರ್​ನಲ್ಲಿ ಬೆಳಗ್ಗೆ 10 ಗಂಟೆಗೆ ಪುನೀತ್​ ಆಗಮಿಸಲಿದ್ದಾರೆ. ಮಂಡ್ಯದ ಸಿಲ್ವರ್​ ಬ್ಯುಬ್ಲಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ‘ಪವರ್​ ಸ್ಟಾರ್​’ ತಮ್ಮ ಅಭಿಮಾನಿಗಳ ಜೊತೆ ಬೆರೆಯಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ಸ್​ ಮಾಹಿತಿ ನೀಡಿದೆ.

ಇಷ್ಟೇ ಅಲ್ಲದೆ, ಇನ್ನಷ್ಟು ಜಿಲ್ಲೆಗಳಿಗೆ ಯುವರತ್ನ ತಂಡದ ಜೊತೆ ಪುನೀತ್​ ರಾಜ್​ಕುಮಾರ್ ಭೇಟಿ ನೀಡಲಿದ್ದಾರೆ. ಅವರ ವೇಳಾಪಟ್ಟಿಯನ್ನು ಚಿತ್ರತಂಡ ಶೀಘ್ರವೇ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: ನನ್ನನ್ನು ಪ್ರೀತಿಸಬೇಡಿ, ನನಗೆ ಮದ್ವೆ ಆಗಿದೆ; ಪುನೀತ್​ ರಾಜ್​ಕುಮಾರ್​ ಹೀಗೆ ಅಂದಿದ್ಯಾಕೆ?

Yuvarathnaa Trailer: ಕೌಂಟರ್​ ಕೊಟ್ರೆ ಎನ್​ಕೌಂಟರ್​​; ಯುವರತ್ನ ಟ್ರೇಲರ್​ನಲ್ಲಿ ಮಿಂಚಿದ ಪುನೀತ್​ ರಾಜ್​ಕುಮಾರ್​

Published On - 8:08 am, Sun, 21 March 21

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us