AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಬಗ್ಗೆ ಹಬ್ಬಿದ್ದ ಈ ಸುಳ್ಳು ಸುದ್ದಿ ಬಗ್ಗೆ ಅವರಿಗೆ ಆಗಿತ್ತು ಭಾರೀ ಬೇಸರ

Puneeth Rajkumar Birthday: ಇಂದು ಪುನೀತ್ ರಾಜ್ ಕುಮಾರ್ ಅವರ 50ನೇ ಜನ್ಮದಿನ. ಅವರ ನಟನಾ ವೃತ್ತಿ ಜೊತೆಗೆ, ಅವರ ಗ್ರಾನೈಟ್ ವ್ಯವಹಾರ ಮತ್ತು ಉದ್ಯಮದಲ್ಲಿನ ಆಸಕ್ತಿಯ ಬಗ್ಗೆ ಕಡಿಮೆ ತಿಳಿದಿದೆ. ತಮ್ಮ ತಂದೆ ರಾಜ್ ಕುಮಾರ್ ಅವರ ಅಪಹರಣದ ನಂತರ ಹರಡಿದ್ದ ಸುಳ್ಳು ಸುದ್ದಿಗಳಿಂದಾಗಿ ಅವರು ಈ ವ್ಯವಹಾರವನ್ನು ನಿಲ್ಲಿಸುವಂತೆ ಒತ್ತಾಯಿಸಲ್ಪಟ್ಟಿದ್ದರು.

ಪುನೀತ್ ಬಗ್ಗೆ ಹಬ್ಬಿದ್ದ ಈ ಸುಳ್ಳು ಸುದ್ದಿ ಬಗ್ಗೆ ಅವರಿಗೆ ಆಗಿತ್ತು ಭಾರೀ ಬೇಸರ
ಪುನೀತ್ ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 17, 2025 | 9:05 AM

Share

ಇಂದು (ಮಾರ್ಚ್ 17) ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಅವರು ಬದುಕಿದ್ದರೆ ಇಂದು ನಮ್ಮ ಜೊತೆ ಅವರು 50ನೇ ವರ್ಷದ ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದರು. ಆದರೆ, ಇಂದು ಅವರು ನಮ್ಮ ಜೊತೆ ಇಲ್ಲ ಎಂಬುದು ನೋವಿನ ಸಂಗತಿ. ಈ ನೋವು ಎಂದಿಗೂ ಮರೆಯಾಗುವಂಥದ್ದು ಅಲ್ಲ. ಪುನೀತ್ (Puneeth Rajkumar) ಅವರು ಕೇವಲ ನಟನಲ್ಲ. ಅವರು ಒಳ್ಳೆಯ ಉದ್ಯಮಿಯೂ ಆಗಿದ್ದರು. ಅವರಿಗೆ ಬಿಸ್ನೆಸ್​​ನಲ್ಲಿ ಒಳ್ಳೆಯ ಹಿಡಿತ ಇತ್ತು ಎಂದೇ ಹೇಳಬಹುದು. ಅವರು ಈ ಮೊದಲು ಗ್ರಾನೈಟ್ ಬಿಸ್ನೆಸ್ ಮಾಡುತ್ತಿದ್ದರು. ಇದನ್ನು ಮಾಡದಂತೆ ರಾಜ್​ಕುಮಾರ್ ಕೋರಿದ್ದರಂತೆ.

ಅಪ್ಪು ಅವರು ಉದ್ಯಮದ ಕಡೆಗೂ ಆಸಕ್ತಿ ಹೊಂದಿದ್ದರು. ಅವರಿಗೆ ಮೊದಲು ನಟನಾಗಬೇಕು ಎನ್ನುವ ಆಸಕ್ತಿಯೇ ಇರಲಿಲ್ಲ. ಅವರಿಗೆ ಉದ್ಯಮಿ ಆಗಬೇಕು ಎಂಬ ಆಸೆ ಇತ್ತು. ಅವರು ‘ಪಿಆರ್​ಕೆ’ ನಿರ್ಮಾಣ ಸಂಸ್ಥೆ ಈಗಲೂ ಕಾರ್ಯನಿರ್ವಹಿಸುತ್ತಿದೆ. ಪುನೀತ್ ರಾಜ್​ಕುಮಾರ್ ಗ್ರಾನೈಟ್ ಬಿಸ್ನೆಸ್ ಮಾಡುತ್ತಿದ್ದರು. ಹೀಗಾಗಿ ರಾಜ್​ಕುಮಾರ್​ನ ವೀರಪ್ಪನ್ ಅರೆಸ್ಟ್ ಮಾಡಿದ್ದರು ಎಂದು ಕೆಲವರು ಹೇಳಿದ್ದರು.

‘ನಮ್ಮ ತಂದೆ ರಾಜ್​ಕುಮಾರ್ ಅರೆಸ್ಟ್ ಆದ ಬಳಿಕ ಕೆಲವು ರೀತಿಯ ಸುದ್ದಿಗಳು ಹರಿದಾಡಿದ್ದವು. ಆಗ ನಾನು ಗ್ರಾನೈಟ್ ಬಿಸ್ನೆಸ್ ಮಾಡುತ್ತಿದ್ದೆ. ಈ ಕಾರಣದಿಂದಲೇ ತಂದೆಯವರು ವೀರಪ್ಪನ್​ನಿಂದ ಕಿಡ್ನ್ಯಾಪ್ ಆದರು ಎಂಬ ಸುದ್ದಿ ಹರಿದಾಡಿತ್ತು. ಈ ರೀತಿ ಹಲವು ಸುದ್ದಿಗಳು ಹುಟ್ಟಿಕೊಂಡವು’ ಎಂದಿದ್ದರು ಪುನೀತ್.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಭಿಮಾನ
Image
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
Image
ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Image
ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್, ಕಾರಣ?

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಪ್ಪು ಮೇಲಿನ ಅಭಿಮಾನ

‘ನಾನು ಮಾಡುತ್ತಿದ್ದ ಗ್ರಾನೈಟ್ ಬಿಸ್ನೆಸ್ ಅಕ್ರಮ ಗ್ರಾನೈಟ್ ಬಿಸ್ನೆಸ್ ಎಂದು ನನ್ನ ಫೋಟೋ ಪೇಪರ್​ನಲ್ಲಿ ಬಂದಿತ್ತು. ಅದು ನನಗೆ ಬೇಸರ ಮೂಡಿಸಿತ್ತು. ಇದು ಅಕ್ರಮವಾಗಿದ್ದರೆ ಕಾನೂನು ಇದೆ. ಹೊರಗಡೆ ಇದ್ದವರು ಕಮೆಂಟ್ ಮಾಡೋದೇಕೆ ಎಂದು ನನ್ನ ಮನಸ್ಸಿಗೆ ಅನಿಸಿತ್ತು. ನಾನು ಬಿಸ್ನೆಸ್ ಮಾಡ್ತಾ ಇದ್ದಿದ್ದು ಕನಕಪುರದಲ್ಲಿ. ಕುಟುಂಬದವರಿಗೆ ಸತ್ಯ ಏನು ಎಂಬುದು ಗೊತ್ತಿತ್ತು’ ಎಂದಿದ್ದರು ಪುನೀತ್. ಈ ರೀತಿಯ ಸುದ್ದಿಯಿಂದ ಬೇಸರಗೊಂಡಿದ್ದ ರಾಜ್​ಕುಮಾರ್ ಅವರು ಒಮ್ಮೆ ಪುನೀತ್​ಗೆ ಇದೆಲ್ಲ ನಿಲ್ಲಿಸುವಂತೆ ಕೋರಿಕೊಂಡಿದ್ದರು.

ಪುನೀತ್ ಕೆಲವು ಸಂದರ್ಶನಗಳಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೆ ಹುಟ್ಟುಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Mon, 17 March 25

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ