Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಪ್ಪು’ ಸಿನಿಮಾ ಯಾಕೆ ನೋಡಿಲ್ಲ? ಬಲವಾದ ಕಾರಣ ಕೊಟ್ಟ ಶಿವರಾಜ್​ಕುಮಾರ್

ಪುನೀತ್ ರಾಜ್‌ಕುಮಾರ್ ನಟನೆಯ ‘ಅಪ್ಪು’ ಚಿತ್ರದ ಮರು ಬಿಡುಗಡೆಗೆ ಆಗಿದೆ. ಆದರೆ, ಶಿವರಾಜ್ ಕುಮಾರ್ ಇದನ್ನು ನೋಡಿಲ್ಲ. ಇದಕ್ಕೆ ಕಾರಣವನ್ನು ಅವರು ವಿವರಿಸಿದ್ದಾರೆ. ಪುನೀತ್ ಅವರ ನೆನಪುಗಳು ಅವರನ್ನು ಕಾಡುತ್ತಿರುವುದರಿಂದ ಚಿತ್ರ ವೀಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಶಿವರಾಜ್ ಕುಮಾರ್ ಅವರು ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ನಂತರ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಪುನೀತ್ ಅವರ 50ನೇ ಹುಟ್ಟುಹಬ್ಬದಂದು ಅವರ ಅನುಪಸ್ಥಿತಿಯನ್ನು ಅವರು ದುಃಖದಿಂದ ಸ್ಮರಿಸಿದ್ದಾರೆ.

‘ಅಪ್ಪು’ ಸಿನಿಮಾ ಯಾಕೆ ನೋಡಿಲ್ಲ? ಬಲವಾದ ಕಾರಣ ಕೊಟ್ಟ ಶಿವರಾಜ್​ಕುಮಾರ್
‘ಅಪ್ಪು’ ಸಿನಿಮಾ ಯಾಕೆ ನೋಡಿಲ್ಲ? ಬಲವಾದ ಕಾರಣ ಕೊಟ್ಟ ಶಿವರಾಜ್​ಕುಮಾರ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 17, 2025 | 5:40 PM

ಪುನೀತ್ ರಾಜ್​ಕುಮಾರ್ ನಟನೆಯ ‘ಅಪ್ಪು’ ಸಿನಿಮಾ (Appu Movie) ರೀ-ರಿಲೀಸ್ ಆಗಿದೆ. ಈ ಚಿತ್ರ ದೊಡ್ಡ ಗೆಲುವು ಕಂಡಿದೆ. ರಾಜ್​ಕುಮಾರ್ ಕುಟುಂಬದ ಅನೇಕರು ಈ ಚಿತ್ರವನ್ನು ನೋಡಿದ್ದಾರೆ. ಆದರೆ, ಶಿವಣ್ಣ ಸಿನಿಮಾನ ವೀಕ್ಷಣೆ ಮಾಡಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಇದಕ್ಕೆ ಕಾರಣ ಏನು ಎಂಬುದನ್ನು ಶಿವರಾಜ್​ಕುಮಾರ್ ರಿವೀಲ್ ಮಾಡಿದ್ದಾರೆ. ಪುನೀತ್ ಸಮಾಧಿಗೆ ಭೇಟಿ ಕೊಟ್ಟ ಬಳಿಕ ಮಾತನಾಡಿದ ಅವರು ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಸಿನಿಮಾ ರೀ-ರಿಲೀಸ್ ಆಗುತ್ತಿದೆ ಎಂದಾಗ ಎಲ್ಲರೂ ಆಸಕ್ತಿಯಿಂದ ಸಿನಿಮಾ ವೀಕ್ಷಿಸುತ್ತಾರೆ. ಆದರೆ, ಶಿವರಾಜ್​ಕುಮಾರ್ ಅವರು ಸಿನಿಮಾ ವೀಕ್ಷಿಸಿಲ್ಲ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ. ‘ಅಪ್ಪು ರೀ-ರಿಲೀಸ್ ವೇಳೆ ಯಾಕೆ ಅಪ್ಪು ನೋಡಿಲ್ಲ ಎಂದು ಎಲ್ಲರೂ ಕೇಳುತ್ತಿದ್ದರು. ನನಗೆ ನೋಡೋಕೆ ಆಗೋದಿಲ್ಲ. ಏಕೆಂದರೆ ಹಳೆಯ ನೆನಪುಗಳೆಲ್ಲ ಕಾಡುತ್ತೆ’ ಎಂದು ಶಿವರಾಜ್​ಕುಮಾರ್ ಹೇಳಿದ್ದಾರೆ.

ಪುನೀತ್ ಹೀರೋ ಆಗಿ ನಟಿಸಿದ ಮೊದಲ ಚಿತ್ರ ‘ಅಪ್ಪು’. ಇದಕ್ಕೆ ಟೈಟಲ್ ಕೊಟ್ಟಿದ್ದು ಶಿವರಾಜ್​ಕುಮಾರ್ ಅವರೇ. ಈ ಕಾರಣಕ್ಕೂ ಅವರಿಗೆ ಸಿನಿಮಾ ವಿಶೇಷ ಎನಿಸಿಕೊಂಡಿದೆ. ಆದರೆ, ಆ ಸಿನಿಮಾ ವೀಕ್ಷಿಸಿದರೆ ಅವರ ನೆನಪು ಮತ್ತೆ ಕಾಡುತ್ತದೆ ಎನ್ನುವ ಭಯ ಅವರಿಗೆ ಇದೆ.

ಇದನ್ನೂ ಓದಿ
Image
‘ಪುನೀತ್ ಕೊಟ್ಟ ಪ್ರೀತಿಯ ಭಿಕ್ಷೆ’; ಅಪ್ಪು ಬಗ್ಗೆ ಅನುಶ್ರೀ ಪ್ರೀತಿಯ ಮಾತು
Image
ಮಕ್ಕಳ ಜೊತೆ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್
Image
ಲೋಹಿತ್ ಎಂದಿದ್ದ ಹೆಸರನ್ನು ಪುನೀತ್ ಆಗಿ ಬದಲಿಸಿದ್ದೇಕೆ ರಾಜ್​ಕುಮಾರ್?
Image
ಅಪ್ಪು ಚಿತ್ರದಲ್ಲಿರೋ ಈ ಎರಡು ಡೈಲಾಗ್ ‘ರಾಜಕುಮಾರ’ ಸಿನಿಮಾದಲ್ಲೂ ಇದೆ

‘ತುಂಬಾ ನೋವಾಗುತ್ತಿದೆ. 50ನೇ ವರ್ಷದ ಬರ್ತ್ ಡೇ ಅಂದಾಗ ಅಪ್ಪು ಇರಬೇಕಿತ್ತು ಅನಿಸುತ್ತದೆ. ಅವನಿಲ್ಲದೇ ಹುಟ್ಟುಹಬ್ಬ ಆಚರಿಸೋಕೆ ದುಃಖ ಆಗುತ್ತಿದೆ. ಆದರೆ ಅಭಿಮಾನಿಗಳ ಮನಸ್ಸಿನಲ್ಲಿ ಅಪ್ಪು ಉಳಿದಿದ್ದಾನೆ’ ಅವನ ಕೆಲಸಗಳಿಂದ, ವ್ಯಕ್ತಿತ್ವದಿಂದ ಇನ್ನೂ ಅಜರಾಮರ ಆಗಿದ್ದಾನೆ. ಇಲ್ಲೆ ನಮ್ಮ ಜೊತೆ ಎಲ್ಲೋ ಇದಾನೆ ಅನಿಸುತ್ತಿದೆ’ ಎಂದಿದ್ದಾರೆ ಶಿವರಾಜ್​ಕುಮಾರ್.

ಇದನ್ನೂ ಓದಿ: 29 ವರ್ಷಗಳ ಬಳಿಕ ಯಾಣಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಇಲ್ಲಿವೆ ಫೋಟೋಸ್

ಶಿವರಾಜ್​ಕುಮಾರ್, ಪುನೀತ್ ಒಟ್ಟಾಗಿ ಬೆಳೆದವರು. ಹೀಗಾಗಿ ಪುನೀತ್ ಜನ್ಮದಿನ ಬಂತು ಎಂದಾಗಲೆಲ್ಲ ಅವರ ಹಳೆಯ ನೆನಪುಗಳು ಬಹುವಾಗಿ ಕಾಡುತ್ತವೆ.

ಇಡೀ ಥಿಯೇಟರ್ ಬುಕ್

ಅಪ್ಪು ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ ಸೆಲಬ್ರೆಟಿ ಜಿಮ್ ಟ್ರೈನರ್ ಶ್ರೀನಿವಾಸ್ ಗೌಡ. ಪುನೀತ್ ರಾಜ್ ಕುಮಾರ್ ಅಭಿಮಾನಿಯಾಗಿರುವ ಅವರು, ತಮ್ಮ ಒಂದುವರೆ ವರ್ಷದ ಮಗನಿಗಾಗಿ ಮಾಲ್​ನಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದಾರೆ. ಇಡೀ ಥಿಯೇಟರ್ ನಲ್ಲಿ ಪತ್ನಿ ಮಗು ಜೊತೆ ಕೂತು ಸಿನಿಮಾ ವೀಕ್ಷಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:40 pm, Mon, 17 March 25

ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಸಿಹಿ ಸುದ್ದಿ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಿಂದ ರೈತರಿಗೆ ಯುಗಾದಿ ಬೋನಸ್​
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
ಔರಂಗಜೇಬನ ಸಮಾಧಿ ಸಂಬಂಧಿತ ವಿವಾದ, ನಾಗ್ಪುರದಲ್ಲಿ ಹಿಂಸಾಚಾರ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
Daily Devotional: ದೇವಾಲಯದ ಹೊಸ್ತಿಲು ಮುಟ್ಟಿ ನಮಸ್ಕರಿಸುವುದರ ಹಿಂದಿನ ಫಲ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಸೂರ್ಯ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ