AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಹಿತ್ ಹೆಸರನ್ನು ಪುನೀತ್ ಆಗಿ ಬದಲಿಸಿದ್ದೇಕೆ ರಾಜ್​ಕುಮಾರ್? ಇದರ ಹಿಂದಿದೆ ಅಲ್ಪಾಯುಷ್ಯದ ಕಥೆ

ಪುನೀತ್ ರಾಜ್​ಕುಮಾರ್ ಅವರ ಮೂಲ ಹೆಸರು ಲೋಹಿತ್ ಎಂಬುದು ಅನೇಕರಿಗೆ ತಿಳಿದಿಲ್ಲ. ಡಾ. ರಾಜ್ ಕುಮಾರ್ ಅವರು 'ಸತ್ಯ ಹರಿಶ್ಚಂದ್ರ' ಚಿತ್ರದಿಂದ ಪ್ರೇರಿತರಾಗಿ ಲೋಹಿತ್ ಎಂದು ಹೆಸರಿಟ್ಟರು. ಆದರೆ, ಅಲ್ಪಾಯುಷಿ ಎಂಬ ಅಪಶಕುನದಿಂದಾಗಿ 10 ವರ್ಷಗಳ ನಂತರ ಪುನೀತ್ ಎಂದು ಹೆಸರು ಬದಲಾಯಿಸಲಾಯಿತು.

ಲೋಹಿತ್ ಹೆಸರನ್ನು ಪುನೀತ್ ಆಗಿ ಬದಲಿಸಿದ್ದೇಕೆ ರಾಜ್​ಕುಮಾರ್? ಇದರ ಹಿಂದಿದೆ ಅಲ್ಪಾಯುಷ್ಯದ ಕಥೆ
ಪುನೀತ್
ರಾಜೇಶ್ ದುಗ್ಗುಮನೆ
|

Updated on: Mar 17, 2025 | 11:03 AM

Share

ಪುನೀತ್ ರಾಜ್​ಕುಮಾರ್ ಜನ್ಮದಿನದ (ಮಾರ್ಚ್ 17) ಪ್ರಯುಕ್ತ ಅವರ ಕುರಿತಂತೆ ಹಲವು ವಿಚಾರಗಳನ್ನು ನೆನಪಿಸಿಕೊಳ್ಳಲಾಗುತ್ತಿದೆ. ಪುನೀತ್ ಅವರ ಹೆಸರಿನ ಬಗ್ಗೆಯೂ ಚರ್ಚೆಗಳು ನಡೆದಿವೆ. ಪುನೀತ್ (Puneeth Rajkumar) ಅವರ ಮೊದಲ ಹೆಸರು ಲೋಹಿತ್ ಎಂದಾಗಿತ್ತು. 10 ವರ್ಷಗಳ ಕಾಲ ಈ ಹೆಸರು ಚಾಲ್ತಿಯಲ್ಲಿ ಇತ್ತು. ಆ ಬಳಿಕ ಈ ಹೆಸರನ್ನು ಪುನೀತ್ ಎಂದು ರಾಜ್​ಕುಮಾರ್ ಬದಲಿಸಿದ್ದರು. ಲೋಹಿತ್ ಎಂಬ ಹೆಸರಿನ ಬಗ್ಗೆ ಇದ್ದ ಭಯವೇ ಹೆಸರು ಬದಲಿಸಲು ಮುಖ್ಯ ಕಾರಣ ಎನ್ನುವ ವಿಚಾರ ರಿವೀಲ್ ಆಗಿದೆ.

ರಾಜ್​ಕುಮಾರ್ ಅವರಿಗೆ ಪುನೀತ್ ಬಗ್ಗೆ ಎಲ್ಲಿಲ್ಲದ ಪ್ರೀತಿ. ಅವರಿಗೆ ಹಸರು ಇಡಬೇಕು ಎಂದಾಗ ಲೋಹಿತ್ ಎಂಬ ಹೆಸರು ಅವರಿಗೆ ನೆನಪಿಗೆ ಬಂತು. ಇದಕ್ಕೆ ಕಾರಣ ಆಗಿದ್ದು ‘ಸತ್ಯ ಹರಿಶ್ಚಂದ್ರ’ ಸಿನಿಮಾ. ಸತ್ಯ ಹರಿಶ್ಚಂದ್ರನ ಪುತ್ರನ ಹೆಸರು ಲೋಹಿತಾಶ್ವ (ಅಥವಾ ರೋಹಿತಾಶ್ವ). ಈ ಹೆಸರು ರಾಜ್​ಕುಮಾರ್​ಗೆ ತುಂಬಾನೇ ಇಷ್ಟವಾಗಿತ್ತು. ಈ ಕಾರಣಕ್ಕೆ ಲೋಹಿತ್ ಎಂದು ಹೆಸರು ಇಡಲಾಯಿತು. ಸತ್ಯ ಹರಿಶ್ಚಂದ್ರನ ಮಗ ಲೋಹಿತಾಶ್ವ ಸಣ್ಣ ವಯಸ್ಸಿನಲ್ಲೇ ಸಾಯುತ್ತಾನೆ. ಈ ಕಾರಣಕ್ಕೆ ರಾಜ್​ಗೆ ಹೆಸರು ಬದಲಿಸಲು ಸೂಚಿಸಿದ್ದರು.

ಡಾ. ರಾಜ್‌ಕುಮಾರ್ ಅವರ ಕುಟುಂಬಕ್ಕೆ ಬೇಕಾದ ಹಿರಿಯರೊಬ್ಬರು ಲೋಹಿತ್ ಎಂದು ಹೆಸರಿಟ್ಟ ಬಗ್ಗೆ ಪ್ರಶ್ನೆ ಮಾಡಿದ್ದರು. ಲೋಹಿತ್​ ಅನ್ನೋದು ಅಲ್ಪಾಯುಷಿಗೆ ಇರುವಂತಹ ಹೆಸರು. ಹೀಗಾಗಿ  ಪುನೀತ್ ಎಂದು ಬದಲಿಸಲು ಸೂಚಿಸಿದ್ದರಂತೆ. ಈ ಕಾರಣಕ್ಕೆ ಅಣ್ಣಾವ್ರು ಈ ಹೆಸರನ್ನು ಬದಲಿಸಿದ್ದರು. ಡಾ. ರಾಜ್ ಕುಟುಂಬದ ಸಂಬಂಧಿ ಕುಮಾರ್ ಬಂಗಾರಪ್ಪ ಈ ಬಗ್ಗೆ ಈ ಮೊದಲು ಮಾಹಿತಿ ನೀಡಿದ್ದರು.

ಇದನ್ನೂ ಓದಿ
Image
ಪುನೀತ್ ರಾಜ್​ಕುಮಾರ್ 50ನೇ ವರ್ಷದ ಜನ್ಮದಿನ; ಎಂದಿಗೂ ಕಮ್ಮಿ ಆಗಲ್ಲ ಅಭಿಮಾನ
Image
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
Image
ಪುನೀತ್ ಕಪ್ಪಿದ್ದಾರೆ ಎಂದವರಿಗೆ ಖಡಕ್ ಉತ್ತರ ಕೊಟ್ಟಿದ್ದ ರಾಜ್​ಕುಮಾರ್
Image
ಪುರಿ ಜಗನ್ನಾಥ ದೇವಾಲಯಕ್ಕೆ ಪ್ರವೇಶಿಸಲು ನಿರಾಕರಿಸಿದ್ದ ಪುನೀತ್, ಕಾರಣ?

ಇದನ್ನೂ ಓದಿ: ಪುನೀತ್ ಬಗ್ಗೆ ಹಬ್ಬಿದ್ದ ಈ ಸುಳ್ಳು ಸುದ್ದಿ ಬಗ್ಗೆ ಅವರಿಗೆ ಆಗಿತ್ತು ಭಾರೀ ಬೇಸರ

ಪೇಪರ್ ಪೋಸ್ಟ್​

‘ಡಾ. ರಾಜ್​ಕುಮಾರ್​ ಉರುಫ್​ ಎಸ್​.ಪಿ. ಮುತ್ತುರಾಜ್​ ಆದ ನಾನು ನನ್ನ ಮಗ ಮಾಸ್ಟರ್​ ಲೋಹಿತ್​ ಹೆಸರನ್ನು ಇಂದಿನಿಂದ  ಅಂದರೆ ದಿನಾಂಕ 16-3-1985ರಂದು ಮಾಸ್ಟರ್​ ಪುನೀತ್​ ಎಂಬುದಾಗಿ ಬದಲಾಯಿಸುತ್ತೇನೆ. ಈ ಹೆಸರು ಬದಲಾವಣೆ ಬಗ್ಗೆ ನೋಟರಿ ಎಸ್​.ಬಿ. ಚಂದ್ರಶೇಖರ್​ ಅವರ ಸಮಕ್ಷಮದಲ್ಲಿ ಪ್ರಮಾಣ ಪತ್ರ ಮಾಡಿಸಿರುತ್ತೇನೆ’ ಎಂದು ಜಾಹೀರಾತು ನೀಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್