AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ

Basavaraj Bommai: ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನದ ವೇಳೆ ಅಪ್ಪು ​ಹಣೆಗೆ ಬಸವರಾಜ ಬೊಮ್ಮಾಯಿ ಮುತ್ತಿಟ್ಟಿದ್ದರು. ಆ ಘಟನೆಯನ್ನು ಇಂದಿನ ಕಾರ್ಯಕ್ರಮದ ವೇದಿಕೆಯಲ್ಲಿ ಅವರು ನೆನಪಿಸಿಕೊಂಡಿದ್ದಾರೆ.

‘ಆರು ಕೋಟಿ ಜನರ ಪರವಾಗಿ ಪುನೀತ್​ಗೆ ಅಂದು ಮುತ್ತು ಕೊಟ್ಟಿದ್ದೆ’: ಸಿಎಂ ಬೊಮ್ಮಾಯಿ ಭಾವುಕ ನುಡಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Nov 16, 2021 | 11:20 PM

Share

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರರಂಗದ ಪರವಾಗಿ ಇಂದು (ನ.16) ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಪುನೀತ ನಮನ’ (Puneetha Namana) ಕಾರ್ಯಕ್ರಮ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾವುಕ ನುಡಿಗಳನ್ನು ಹಂಚಿಕೊಂಡರು. ಅಂತಿಮ ದರ್ಶನದ ವೇಳೆ ಪುನೀತ್​ ಅವರ ಹಣೆಗೆ ಬಸವರಾಜ ಬೊಮ್ಮಾಯಿ (Basavaraj Bommai) ಮುತ್ತಿಟ್ಟಿದ್ದರು. ಆ ಘಟನೆಯನ್ನು ಇಂದಿನ ಕಾರ್ಯಕ್ರಮದ ವೇದಿಕೆಯಲ್ಲಿ ನೆನಪಿಸಿಕೊಂಡಿದ್ದಾರೆ. ‘ನಾನು ಮುತ್ತು ಕೊಟ್ಟಾಗ ಬಹಳಷ್ಟು ಜನರು ಬೇರೆ ಬೇರೆ ರೀತಿ ವಿಶ್ಲೇಷಣೆ ಮಾಡಿದ್ದಾರೆ. ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳೋಕೆ ಹೋಗಲ್ಲ. ಅದು ನನ್ನ ಹೃದಯದಿಂದ ಬಂದ ಭಾವನೆ. ಮುತ್ತುರಾಜರ ಮಗನಿಗೆ ಕರ್ನಾಟಕ ರತ್ನವನ್ನು ಕೊಡುವುದು ಎಷ್ಟು ಸಂತೋಷ ಆಗಿದೆಯೋ, ಅದೇ ರೀತಿ ಆರು ಕೋಟಿ ಜನರ ಪರವಾಗಿ ಆ ಮುತ್ತನ್ನು ನಾನು ಕೊಟ್ಟಿದ್ದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್​ ಅಂತಿಮ ನಮನ ಮತ್ತು ಅಂತಿಮ ಸಂಸ್ಕಾರದ ಸಮಯದಲ್ಲಿ ಸಹಕರಿಸಿದ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ, ಸರ್ಕಾರದ ಅಧಿಕಾರಿಗಳಿಗೆ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಘೋಷಿಸಿದ್ದಾರೆ. ಪುನೀತ್​ ಸಮಾಧಿ ಸ್ಥಳವನ್ನು ಡಾ. ರಾಜ್​ಕುಮಾರ್​ ಮತ್ತು ಪಾರ್ವತಮ್ಮ ರಾಜ್​ಕುಮಾರ್​ ಅವರ ಸ್ಮಾರಕದ ರೀತಿಯೇ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಇದು ಅಪ್ಪು ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ:

‘ಪುನೀತ್​ಗೆ ಕೊಟ್ಟ ಮಾತು ಉಳಿಸಿಕೊಳ್ತೀನಿ’; ಪುನೀತ ನಮನ ಕಾರ್ಯಕ್ರಮದಲ್ಲಿ ವಿಶಾಲ್

Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

Published On - 5:25 pm, Tue, 16 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ